Homeಮುಖಪುಟಬೆಂಗಳೂರು | ಕಾರು ಗುದ್ದಿ ಡೆಲಿವರಿ ಬಾಯ್ ಹತ್ಯೆ ಆರೋಪ : ದಂಪತಿ ಬಂಧನ

ಬೆಂಗಳೂರು | ಕಾರು ಗುದ್ದಿ ಡೆಲಿವರಿ ಬಾಯ್ ಹತ್ಯೆ ಆರೋಪ : ದಂಪತಿ ಬಂಧನ

- Advertisement -
- Advertisement -

ಕಾರು ಗುದ್ದಿ ಗಿಗ್ ಕಾರ್ಮಿಕನನ್ನು (ಡೆಲಿವರಿ ಬಾಯ್) ಹತ್ಯೆಗೈದು, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಿದ್ದ ಆರೋಪದ ಮೇಲೆ ದಂಪತಿಯನ್ನು ಬೆಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.

ಅರೆಕೆರೆ ನಿವಾಸಿಗಳಾದ ಮನೋಜ್‌ (32) ಮತ್ತು ಆತನ ಪತ್ನಿ ಆರತಿ ಶರ್ಮಾ (29) ಬಂಧಿತರು. ಅ.25ರಂದು ತಡರಾತ್ರಿ ಸುಮಾರು 12 ಗಂಟೆಗೆ ನಗರದ ನಟರಾಜ ಲೇಔಟ್‌ನ ಶ್ರೀರಾಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.

ಕೆಂಬತ್ತಹಳ್ಳಿ ನಿವಾಸಿಯಾದ ದರ್ಶನ್‌ (22) ಹತ್ಯೆಯಾದ ಡೆಲಿವರಿ ಬಾಯ್. ಈತನ ಸ್ನೇಹಿತ ವರುಣ್‌ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ದರ್ಶನ್‌ ಸಹೋದರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಮನೋಜ್‌ ಕಲರಿಪಯಟ್ಟು ತರಬೇತುದಾರನಾದರೆ, ಪತ್ನಿ ಆರತಿ ಶರ್ಮಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿ ಕಳೆದ ಎಂಟು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದಾರೆ. ಕೆಂಬತ್ತಹಳ್ಳಿಯ ದರ್ಶನ್‌ ಮತ್ತು ಉತ್ತರಹಳ್ಳಿಯ ವರುಣ್‌ ಸ್ನೇಹಿತರಾಗಿದ್ದು, ಆಹಾರ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದರು.

ಮನೋಜ್‌ ಮತ್ತು ಆರತಿ ಶರ್ಮಾ ಅಕ್ಟೋಬರ್ 25ರಂದು ತಡರಾತ್ರಿ ತಮ್ಮ ಕಾರಿನಲ್ಲಿ ನಟರಾಜ ಲೇಔಟ್‌ ಮಾರ್ಗವಾಗಿ ಮನೆ ಕಡೆಗೆ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಎದುರಿನಿಂದ ದರ್ಶನ್‌ ಮತ್ತು ವರುಣ್‌ ದ್ವಿಚಕ್ರ ವಾಹನದ ಮೂಲಕ ಮನೆ ಕಡೆಗೆ ಹೊರಟಿದ್ದರು. ಈ ವೇಳೆ ಆಕಸ್ಮಿಕವಾಗಿ ದರ್ಶನ್‌ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಮನೋಜ್‌ ಅವರ ಕಾರಿನ ಮಿರರ್‌ಗೆ ತಾಕಿದೆ. ಅದಕ್ಕಾಗಿ ದರ್ಶನ್‌ ಕ್ಷಮೆ ಕೇಳಿ ದ್ವಿಚಕ್ರ ವಾಹನ ನಿಲ್ಲಿಸದೆ ಮುಂದಕ್ಕೆ ಹೊರಟ್ಟಿದ್ದಾರೆ.

ಇದರಿಂದ ರೊಚ್ಚಿಗೆದ್ದ ಮನೋಜ್ ದಂಪತಿ, ಕಾರನ್ನು ಯೂ-ಟರ್ನ್ ತೆಗೆದುಕೊಂಡು ಸುಮಾರು 2 ಕಿ.ಮೀ ಹಿಂಬಾಲಿಸಿ ದರ್ಶನ್ ಮತ್ತು ವರುಣ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ದರ್ಶನ್ ಮತ್ತು ವರುಣ್ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ದರ್ಶನ್ ಗಂಭೀರವಾಗಿ ಗಾಯಗೊಂಡರೆ, ವರುಣ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು. ಅಪಘಾತದ ಬಳಿಕ ದಂಪತಿ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ದರ್ಶನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ತಾವವಾಗಿ ಚಿಕಿತ್ಸೆ ಫಲಿಸದೆ ದರ್ಶನ್ ಸಾವನ್ನಪ್ಪಿದ್ದರು.

ಈ ಸಂಬಂಧ ದರ್ಶನ್ ಸಹೋದರಿ ನೀಡಿದ ದೂರು ಆಧರಿಸಿ ತನಿಖೆ ಕೈಗೊಂಡ ಜೆ.ಪಿ ನಗರ ಸಂಚಾರಿ ಠಾಣೆ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೋಜ್ ದಂಪತಿ ಉದ್ದೇಶಪೂರ್ವಕವಾಗಿಯೇ ಕಾರು ಗುದ್ದಿ ದರ್ಶನ್ ಸಾವಿಗೆ ಕಾರಣರಾಗಿರುವುದು ಗೊತ್ತಾಗಿದೆ. ಪೊಲೀಸರು ಕಾರಿನ ನೋಂದಣಿ ಸಂಖ್ಯೆ ಮೂಲಕ ದಂಪತಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಉದ್ದೇಶಪೂರ್ವಕವಾಗಿ ಕಾರು ಗುದ್ದಿರುವುದನ್ನು ದಂಪತಿ ಒಪ್ಪಿಕೊಂಡಿದ್ದಾರೆ. ಹಾಗಾಗಿ, ಜೆ.ಪಿ ನಗರ ಸಂಚಾರಿ ಪೊಲೀಸರು ಪ್ರಕರಣವನ್ನು ಪುಟ್ಟೇನಹಳ್ಳಿ ಠಾಣೆಗೆ ವರ್ಗಾಯಿಸಿದ್ದು, ಅವರು ದಂಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...