Homeಮುಖಪುಟಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

45 ಸೆಕೆಂಡ್‌ಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೂರಾರು ಮಂದಿ ತಮ್ಮ ಗೋಡೆಗಳಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಚಿನ್ನ, ಬೆಳ್ಳಿ ಬೆಲೆ ದುಬಾರಿಯಾಗುತ್ತಿರುವಂತೆಯೇ ಇಂಧನ, ಈರುಳ್ಳಿ ಬೆಲೆಯೂ ಹೆಚ್ಚುತ್ತಿದೆ. ಮದುವೆಗಳಲ್ಲಿ ದುಬಾರಿ ಗಿಫ್ಟ್ ಕೊಡುವವರು ಈಗ ಹೊಸ ಹೊಸ ಪ್ಲಾನ್‌ಗಳನ್ನು ಮಾಡುತ್ತಿದ್ದಾರೆ. ತಮಿಳುನಾಡಿನಲ್ಲಿ ನಡೆದ ಮದುವೆಯೊಂದರಲ್ಲಿ ನವದಂಪತಿಗೆ ಸ್ನೇಹಿತರು ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್ ಮತ್ತು ಈರುಳ್ಳಿ ಉಡುಗೊರೆ ನೀಡಿದ್ದಾರೆ.

ತಮಿಳುನಾಡಿನ ಚೆನೈನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು-ವರರ ಸ್ನೇಹಿತರು ದುಬಾರಿ ಉಡುಗೊರೆ ನೀಡಲು ಯೋಚಿಸಿ, ಒಂದು ಎಲ್‌ಪಿಜಿ ಸಿಲಿಂಡರ್, ಕ್ಯಾನ್ ಪೆಟ್ರೋಲ್ ನೀಡಿದ್ದಾರೆ. ಜೊತೆಗೆ ಈರುಳ್ಳಿಯಿಂದ ಮಾಡಿದ ಹೂಮಾಲೆಗಳನ್ನು ತೋಡಿಸಿದ್ದಾರೆ.

45 ಸೆಕೆಂಡ್‌ಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೂರಾರು ಮಂದಿ ತಮ್ಮ ವಾಲ್‌ಗಳಲ್ಲಿ ಹಂಚಿಕೊಂಡಿದ್ದಾರೆ.

ನವ ದಂಪತಿಯಾದ ಕಾರ್ತಿಕ್ ಮತ್ತು ಶರಣ್ಯ ಈ ಗಿಫ್ಟ್‌ಗಳಿಂದ ಆಶ್ಚರ್ಯಚಕಿತರಾಗಿದ್ದು, ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಈರುಳ್ಳಿ ಹಾರಗಳನ್ನು ಧರಿಸಿ ಫೋಟೋಗೆ ಪೋಸ್ ನೀಡಿದ್ದಾರೆ. ಮದುವೆಗೆ ಆಗಮಿಸಿದ್ದ ಅತಿಥಿಗಳು ಕೂಡ ಸ್ನೇಹಿತರ ಈ ಉಡುಗೊರೆಗಳನ್ನು ನೋಡಿ ನಗು ಚೆಲ್ಲಿದ್ದಾರೆ.

ದೇಶದಲ್ಲಿ ಕಳೆದ 12 ದಿನಗಳಿಂದ ಇಂಧನ ಬೆಲೆ ಸತತವಾಗಿ ಹೆಚ್ಚಾಗುತ್ತಿದೆ. ಇದರ ಜೊತೆಗೆ ಒಕ್ಕೂಟ ಸರ್ಕಾರ ಎಲ್​​ಪಿಜಿ ಸಿಲಿಂಡರ್​ ಬೆಲೆಯನ್ನು ಏರಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಯುವ ಜನತೆ ಹೀಗೆ ಉಡುಗೊರೆಗಳನ್ನು ನೀಡುವ ಮೂಲಕ ಬೆಲೆ ಏರಿಕೆಯನ್ನು ವಿಭಿನ್ನವಾಗಿ ವಿರೋಧಿಸಿದ್ದಾರೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ಇಂಧನ ದರ ಏರಿಕೆ ಖಂಡಿಸಿ ದೇಶದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮೀಮ್ಸ್‌ಗಳು ಹರಿದಾಡುತ್ತಿವೆ. ನಿನ್ನೆಯಷ್ಟೇ (ಫೆ.20) ಮಹಾರಾಷ್ಟ್ರದಲ್ಲಿ ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿ, ಗ್ಯಾಂಗ್‌ನ 14 ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್‌ನ 14 ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...