Homeಮುಖಪುಟದಂಪತಿಗಳು ವಿಚ್ಚೇದನಕ್ಕೆ ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ: ಸುಪ್ರೀಂ ತೀರ್ಪು

ದಂಪತಿಗಳು ವಿಚ್ಚೇದನಕ್ಕೆ ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ: ಸುಪ್ರೀಂ ತೀರ್ಪು

- Advertisement -
- Advertisement -

ವಿಚ್ಛೇದನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಮಹತ್ವದ ತೀರ್ಪುನ್ನು ನೀಡಿದೆ. ವಿಚ್ಚೇದನೆ ಪಡೆಯಲು ಆರು ತಿಂಗಳು ಕಾಯಬೇಕಿತ್ತು, ಆದರೆ ಇದೀಗ ದಂಪತಿಗಳು ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ ಎಂದು ಸುಪ್ರೀಂ ತೀರ್ಪು ನೀಡಿದೆ.

ದಂಪತಿಗಳು ವಿಚ್ಛೇದನ ಪಡೆಯಲು ಬಯಸಿದರೆ ಅವರಿಗೆ ಒಟ್ಟಾಗಿ ಬದುಕಲು ಸಾಧ್ಯವಾಗುತ್ತಿಲ್ಲ ಎಂದಾಗ ಅವರು ಒತ್ತಾಯ ಪೂರಕವಾಗಿ ಕಾನೂನಿನ ನಿಯಮದ ಪ್ರಕಾರ 6 ತಿಂಗಳು ಒಟ್ಟಿಗೆ ಇರಬೇಕು ಎಂಬುದು ಇನ್ನೂ ಮುಂದೆ ಇರುವುದಿಲ್ಲ. ಒಪ್ಪಿಗೆ ಕಾನೂನು ನಿಯಮದ ಪ್ರಕಾರ ವಿಚ್ಛೇದನ ನೀಡಬಹುದು ಎಂದು ಹೇಳಿದೆ. ಸುಪ್ರೀಂ ಪರಿಚ್ಛೇದ 142ರ ಅಡಿಯಲ್ಲಿ ಅಧಿಕಾರವನ್ನು ಹೊಂದಿದೆ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಮತ್ತು ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಂವಿಧಾನ ಪೀಠ ಹೇಳಿದೆ.

ವಿಚ್ಛೇದನ ಪಡೆಯುವ ಪತಿ ಮತ್ತು ಪತ್ನಿಯನ್ನು ಕೌಟುಂಬಿಕ ನ್ಯಾಯಾಲಯಕ್ಕೆ ಕಳುಹಿಸದೆ ಪ್ರತ್ಯೇಕವಾಗಿ ವಾಸಿಸಲು ಅವಕಾಶ ನೀಡಬಹುದು. ಪರಸ್ಪರ ಒಪ್ಪಿಗೆ ಇದ್ದರೆ, ವಿಚ್ಛೇದನಕ್ಕೆ ಕಡ್ಡಾಯವಾಗಿ 6 ​​ತಿಂಗಳ ಕಾಯುವ ಅವಶ್ಯಕತೆ ಇರುವುದಿಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಹೇಳಿದೆ.

ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 13-ಬಿ ಅಡಿಯಲ್ಲಿ ಸೂಚಿಸಲಾದ ಕಡ್ಡಾಯ ಅವಧಿಗಾಗಿ ಕಾಯಲು ಕುಟುಂಬ ನ್ಯಾಯಾಲಯಗಳಿಗೆ ರೆಫರಲ್ ಮಾಡದೆ, ಇಬ್ಬರ ಒಪ್ಪಿಗೆಯ ಮೇರೆಗೆ ವಿವಾಹ ವಿಚ್ಚೇದನೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಪ್ರಕರಣವನ್ನು ವಿಭಾಗೀಯ ಪೀಠವು ಜೂನ್ 29, 2016 ರಂದು ಐವರು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಿತ್ತು.

ಪೀಠವು 2014ರಲ್ಲಿ ಶಿಲ್ಪಾ ಸೈಲೇಶ್ ಸಲ್ಲಿಸಿದ್ದ ಪ್ರಮುಖ ಅರ್ಜಿ ಸೇರಿದಂತೆ ಐದು ಅರ್ಜಿಗಳ ತೀರ್ಪನ್ನು 2022ರ ಸೆಪ್ಟೆಂಬರ್ 29ರಂದು ಕಾಯ್ದಿರಿಸಿತ್ತು. ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸುವಾಗ, ಸಾಮಾಜಿಕ ಬದಲಾವಣೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಮತ್ತು ಕೆಲವೊಮ್ಮೆ ಕಾನೂನು ತರುವುದು ಸುಲಭ, ಆದರೆ ಅದರೊಂದಿಗೆ ಸಮಾಜವನ್ನು ಬದಲಾಯಿಸಲು ಮನವೊಲಿಸುವುದು ಕಷ್ಟ ಎಂದು ಹೇಳಿತ್ತು.

ವಿಚ್ಚೇದನೆ ಪಡೆಯು ದಂಪತಿಗಳು ಪ್ರಕ್ರಿಯೆ ಮುಗಿಯುವವರೆಗೂ ಅಂದರೆ ಆರು ತಿಂಗಳವರೆಗೂ ಜೊತೆಯಾಗಿಯೇ ಇರಬೇಕು ಎನ್ನುವುದು ಈ ಹಿಂದಿನ ಕಾನೂನಿನ ನಿಯಮವಾಗಿತ್ತು. ಇದು ಕಾನೂನಿನ ನಿಮಯದ ಜತೆಗೆ ಇಬ್ಬರ ನಡುವೆ ಒಂದು ಹೊಂದಾಣಿಕೆಯಾಗಿ ಜತೆಯಾಗಿ ಜೀವನ ನಡೆಸುತ್ತಾರೆ ಎನ್ನುವ ಕಾಳಜಿಗೆ ಈ ರೀತಿಯ ಕಾನೂನುಗಳನ್ನು ಮಾಡಿತ್ತು, ಆದರೆ ಈಗ ಒತ್ತಡದ ಆಧಾರದಲ್ಲಿ ಜೀವನ ನಡೆಸುವ ಅಗತ್ಯ ಇಲ್ಲ ಎನ್ನುವ ಉದ್ದೇಶದಿಂದ ಸುಪ್ರೀಂ ಕೋರ್ಟ್‌ನ ಪೀಠ ಈ ಆದೇಶವನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...