Homeಮುಖಪುಟದಂಪತಿಗಳು ವಿಚ್ಚೇದನಕ್ಕೆ ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ: ಸುಪ್ರೀಂ ತೀರ್ಪು

ದಂಪತಿಗಳು ವಿಚ್ಚೇದನಕ್ಕೆ ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ: ಸುಪ್ರೀಂ ತೀರ್ಪು

- Advertisement -
- Advertisement -

ವಿಚ್ಛೇದನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಮಹತ್ವದ ತೀರ್ಪುನ್ನು ನೀಡಿದೆ. ವಿಚ್ಚೇದನೆ ಪಡೆಯಲು ಆರು ತಿಂಗಳು ಕಾಯಬೇಕಿತ್ತು, ಆದರೆ ಇದೀಗ ದಂಪತಿಗಳು ಆರು ತಿಂಗಳು ಕಾಯುವ ಅವಶ್ಯಕತೆ ಇಲ್ಲ ಎಂದು ಸುಪ್ರೀಂ ತೀರ್ಪು ನೀಡಿದೆ.

ದಂಪತಿಗಳು ವಿಚ್ಛೇದನ ಪಡೆಯಲು ಬಯಸಿದರೆ ಅವರಿಗೆ ಒಟ್ಟಾಗಿ ಬದುಕಲು ಸಾಧ್ಯವಾಗುತ್ತಿಲ್ಲ ಎಂದಾಗ ಅವರು ಒತ್ತಾಯ ಪೂರಕವಾಗಿ ಕಾನೂನಿನ ನಿಯಮದ ಪ್ರಕಾರ 6 ತಿಂಗಳು ಒಟ್ಟಿಗೆ ಇರಬೇಕು ಎಂಬುದು ಇನ್ನೂ ಮುಂದೆ ಇರುವುದಿಲ್ಲ. ಒಪ್ಪಿಗೆ ಕಾನೂನು ನಿಯಮದ ಪ್ರಕಾರ ವಿಚ್ಛೇದನ ನೀಡಬಹುದು ಎಂದು ಹೇಳಿದೆ. ಸುಪ್ರೀಂ ಪರಿಚ್ಛೇದ 142ರ ಅಡಿಯಲ್ಲಿ ಅಧಿಕಾರವನ್ನು ಹೊಂದಿದೆ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಮತ್ತು ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಂವಿಧಾನ ಪೀಠ ಹೇಳಿದೆ.

ವಿಚ್ಛೇದನ ಪಡೆಯುವ ಪತಿ ಮತ್ತು ಪತ್ನಿಯನ್ನು ಕೌಟುಂಬಿಕ ನ್ಯಾಯಾಲಯಕ್ಕೆ ಕಳುಹಿಸದೆ ಪ್ರತ್ಯೇಕವಾಗಿ ವಾಸಿಸಲು ಅವಕಾಶ ನೀಡಬಹುದು. ಪರಸ್ಪರ ಒಪ್ಪಿಗೆ ಇದ್ದರೆ, ವಿಚ್ಛೇದನಕ್ಕೆ ಕಡ್ಡಾಯವಾಗಿ 6 ​​ತಿಂಗಳ ಕಾಯುವ ಅವಶ್ಯಕತೆ ಇರುವುದಿಲ್ಲ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಹೇಳಿದೆ.

ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 13-ಬಿ ಅಡಿಯಲ್ಲಿ ಸೂಚಿಸಲಾದ ಕಡ್ಡಾಯ ಅವಧಿಗಾಗಿ ಕಾಯಲು ಕುಟುಂಬ ನ್ಯಾಯಾಲಯಗಳಿಗೆ ರೆಫರಲ್ ಮಾಡದೆ, ಇಬ್ಬರ ಒಪ್ಪಿಗೆಯ ಮೇರೆಗೆ ವಿವಾಹ ವಿಚ್ಚೇದನೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಪ್ರಕರಣವನ್ನು ವಿಭಾಗೀಯ ಪೀಠವು ಜೂನ್ 29, 2016 ರಂದು ಐವರು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸಿತ್ತು.

ಪೀಠವು 2014ರಲ್ಲಿ ಶಿಲ್ಪಾ ಸೈಲೇಶ್ ಸಲ್ಲಿಸಿದ್ದ ಪ್ರಮುಖ ಅರ್ಜಿ ಸೇರಿದಂತೆ ಐದು ಅರ್ಜಿಗಳ ತೀರ್ಪನ್ನು 2022ರ ಸೆಪ್ಟೆಂಬರ್ 29ರಂದು ಕಾಯ್ದಿರಿಸಿತ್ತು. ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸುವಾಗ, ಸಾಮಾಜಿಕ ಬದಲಾವಣೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಮತ್ತು ಕೆಲವೊಮ್ಮೆ ಕಾನೂನು ತರುವುದು ಸುಲಭ, ಆದರೆ ಅದರೊಂದಿಗೆ ಸಮಾಜವನ್ನು ಬದಲಾಯಿಸಲು ಮನವೊಲಿಸುವುದು ಕಷ್ಟ ಎಂದು ಹೇಳಿತ್ತು.

ವಿಚ್ಚೇದನೆ ಪಡೆಯು ದಂಪತಿಗಳು ಪ್ರಕ್ರಿಯೆ ಮುಗಿಯುವವರೆಗೂ ಅಂದರೆ ಆರು ತಿಂಗಳವರೆಗೂ ಜೊತೆಯಾಗಿಯೇ ಇರಬೇಕು ಎನ್ನುವುದು ಈ ಹಿಂದಿನ ಕಾನೂನಿನ ನಿಯಮವಾಗಿತ್ತು. ಇದು ಕಾನೂನಿನ ನಿಮಯದ ಜತೆಗೆ ಇಬ್ಬರ ನಡುವೆ ಒಂದು ಹೊಂದಾಣಿಕೆಯಾಗಿ ಜತೆಯಾಗಿ ಜೀವನ ನಡೆಸುತ್ತಾರೆ ಎನ್ನುವ ಕಾಳಜಿಗೆ ಈ ರೀತಿಯ ಕಾನೂನುಗಳನ್ನು ಮಾಡಿತ್ತು, ಆದರೆ ಈಗ ಒತ್ತಡದ ಆಧಾರದಲ್ಲಿ ಜೀವನ ನಡೆಸುವ ಅಗತ್ಯ ಇಲ್ಲ ಎನ್ನುವ ಉದ್ದೇಶದಿಂದ ಸುಪ್ರೀಂ ಕೋರ್ಟ್‌ನ ಪೀಠ ಈ ಆದೇಶವನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...