Homeಮುಖಪುಟ12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

- Advertisement -
- Advertisement -

ಕೋವಿಡ್ ಮಾನದಂಡಗಳ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ಕಾರಣಕ್ಕಾಗಿ ವರ್ಷಗಳ ಹಿಂದೆ ದಾಖಲಾಗಿದ್ದ, ತಬ್ಲಿಘಿ ಜಮಾತ್‌ನ ಹನ್ನೆರಡು ಸದಸ್ಯರ ವಿರುದ್ಧದ ಎಲ್ಲಾ ಆರೋಪಗಳನ್ನು ಬರೇಲಿಯ ಮುಖ್ಯ ನ್ಯಾಯಾಧೀಶರು ಶನಿವಾರ ಮುಕ್ತಗೊಳಿಸಿದ್ದಾರೆ.

ಪ್ರಕರಣ ಖುಲಾಸೆಗೊಂಡವರಲ್ಲಿ ಒಂಬತ್ತು ಜನರು ಥಾಯ್‌ಲ್ಯಾಂಡ್‌ ಪ್ರಜೆಗಳಾಗಿದ್ದಾರೆ. ಅವರ ಇಬ್ಬರು ಭಾಷಾಂತರಕಾರರು ಮತ್ತು ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ವಾಸಿಸುತ್ತಿದ್ದ ಶಹಜಹಾನ್ ಪುರದ ಮಸೀದಿಯ ಉಸ್ತುವಾರಿಯ ಮೇಲಿದ್ದ ಆರೋಪಗಳು ಕೂಡಾ ಖೂಲಾಸೆಗೊಂಡಿದೆ. ಥಾಯ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಮರಳಲು ಅವಕಾಶ ನೀಡಲಾಗಿದೆ.

ಕಳೆದ ವರ್ಷ ಮಾರ್ಚ್ ಆರಂಭದಲ್ಲಿ, ತಬ್ಲಿಘಿ ಜಮಾತ್‌ನ ನಿಜಾಮುದ್ದೀನ್ ಮರ್ಕಝ್‌(ಕೇಂದ್ರ)ನಲ್ಲಿ ಸಾವಿರಾರು ಜನರು ಸೇರಿದ್ದರು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

2,300 ವಿದೇಶಿ ಪ್ರಜೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಒಕ್ಕೂಟ ಸರ್ಕಾರ ಹೇಳಿತ್ತು. ಮಾರ್ಚ್ 15, 2020 ರ ಹೊತ್ತಿಗೆ ಸಭೆ ಕೊನೆಗೊಂಡಿತ್ತು ಮತ್ತು ಇದರ ನಂತರ ಒಕ್ಕೂಟ ಸರ್ಕಾರ ಲಾಕ್‌ಡೌನ್ ಅನ್ನು ಘೋಷಿಸಿತ್ತು.

ಈ ಕಾರ್ಯಕ್ರಮ ನಂತರ ಒಂಬತ್ತು ಥಾಯ್ ಪ್ರಜೆಗಳು ಹಾಗೂ ಅವರ ಇಬ್ಬರು ಅನುವಾದಕರು ಶಹಜಹಾನ್ ಪುರ ಮಸೀದಿಯಲ್ಲಿ ತಂಗಿದ್ದರು. ಎಪ್ರೀಲ್ 1 ರಂದು ಮಸೀದಿಯ ಉಸ್ತುವಾರಿ ಸೇರಿದಂತೆ ಒಟ್ಟು ಹನ್ನೆಡೆದು ಜನರನ್ನು ಬಂಧಿಸಲಾಗಿತ್ತು.

ಥಾಯ್ ಪ್ರಜೆಗಳು ಮತ್ತು ಅವರ ಭಾರತೀಯ ಸ್ನೇಹಿತರ ವಿರುದ್ಧ ಐಪಿಸಿ ಸೆಕ್ಷನ್ 188 (ಸರ್ಕಾರಿ ನಿಯಮ ಉಲ್ಲಂಘಟನೆ), 269 (ಸೋಂಕು ಹರಡುವ ಬಗ್ಗೆ ನಿರ್ಲಕ್ಷ್ಯ), 270 (ಅಪಾಯಕಾರಿ ಕಾಯಿಲೆಯ ಸೋಂಕು ಹರಡುವ ಸಾಧ್ಯತೆ), 271 (ಕ್ವಾರಂಟೈನ್‌ ನಿಯಮ ಉಲ್ಲಂಘನೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯಿದೆಯ ಸೆಕ್ಷನ್ 3 (ಕಾಯಿದೆಯಡಿ ಮಾಡಿದ ನಿಯಮಗಳನ್ನು ಪಾಲಿಸದಿರುವುದು) ಸೇರಿದಂತೆ ಪ್ರಕರಣ ದಾಖಲಾಗಿತ್ತು.

ಥಾಯ್ ಪ್ರಜೆಗಳ ಮೇಲೆ ಪ್ರತ್ಯೇಕವಾಗಿ, ವಿದೇಶಿಯರ ಕಾಯಿದೆಯ ಸೆಕ್ಷನ್ 14 (ವೀಸಾ ನಿಯಮಗಳನ್ನು ಉಲ್ಲಂಘನೆ) ಅಡಿಯಲ್ಲಿ ದಾಖಲಿಸಲಾಗಿತ್ತು.

ಇದೆ ಸಮಯದಲ್ಲಿ ಪ್ರಕರಣ ದಾಖಲಿಸಲ್ಪಟ್ಟಿದ್ದ ಹಲವು ತಬ್ಲೀಘಿ ಜಮಾಅತ್‌ ಸದಸ್ಯರ ಮೇಲಿನ ಪ್ರಕರಣವನ್ನು ದೇಶದ ಬೇರೆ ಬೇರೆ ನ್ಯಾಯಾಲಯಗಳು ಈ ಹಿಂದ ಖುಲಾಸೆಗೊಳಿಸಿದ್ದವು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...