Homeಮುಖಪುಟ12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

- Advertisement -
- Advertisement -

ಕೋವಿಡ್ ಮಾನದಂಡಗಳ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ಕಾರಣಕ್ಕಾಗಿ ವರ್ಷಗಳ ಹಿಂದೆ ದಾಖಲಾಗಿದ್ದ, ತಬ್ಲಿಘಿ ಜಮಾತ್‌ನ ಹನ್ನೆರಡು ಸದಸ್ಯರ ವಿರುದ್ಧದ ಎಲ್ಲಾ ಆರೋಪಗಳನ್ನು ಬರೇಲಿಯ ಮುಖ್ಯ ನ್ಯಾಯಾಧೀಶರು ಶನಿವಾರ ಮುಕ್ತಗೊಳಿಸಿದ್ದಾರೆ.

ಪ್ರಕರಣ ಖುಲಾಸೆಗೊಂಡವರಲ್ಲಿ ಒಂಬತ್ತು ಜನರು ಥಾಯ್‌ಲ್ಯಾಂಡ್‌ ಪ್ರಜೆಗಳಾಗಿದ್ದಾರೆ. ಅವರ ಇಬ್ಬರು ಭಾಷಾಂತರಕಾರರು ಮತ್ತು ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ವಾಸಿಸುತ್ತಿದ್ದ ಶಹಜಹಾನ್ ಪುರದ ಮಸೀದಿಯ ಉಸ್ತುವಾರಿಯ ಮೇಲಿದ್ದ ಆರೋಪಗಳು ಕೂಡಾ ಖೂಲಾಸೆಗೊಂಡಿದೆ. ಥಾಯ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಮರಳಲು ಅವಕಾಶ ನೀಡಲಾಗಿದೆ.

ಕಳೆದ ವರ್ಷ ಮಾರ್ಚ್ ಆರಂಭದಲ್ಲಿ, ತಬ್ಲಿಘಿ ಜಮಾತ್‌ನ ನಿಜಾಮುದ್ದೀನ್ ಮರ್ಕಝ್‌(ಕೇಂದ್ರ)ನಲ್ಲಿ ಸಾವಿರಾರು ಜನರು ಸೇರಿದ್ದರು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

2,300 ವಿದೇಶಿ ಪ್ರಜೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಒಕ್ಕೂಟ ಸರ್ಕಾರ ಹೇಳಿತ್ತು. ಮಾರ್ಚ್ 15, 2020 ರ ಹೊತ್ತಿಗೆ ಸಭೆ ಕೊನೆಗೊಂಡಿತ್ತು ಮತ್ತು ಇದರ ನಂತರ ಒಕ್ಕೂಟ ಸರ್ಕಾರ ಲಾಕ್‌ಡೌನ್ ಅನ್ನು ಘೋಷಿಸಿತ್ತು.

ಈ ಕಾರ್ಯಕ್ರಮ ನಂತರ ಒಂಬತ್ತು ಥಾಯ್ ಪ್ರಜೆಗಳು ಹಾಗೂ ಅವರ ಇಬ್ಬರು ಅನುವಾದಕರು ಶಹಜಹಾನ್ ಪುರ ಮಸೀದಿಯಲ್ಲಿ ತಂಗಿದ್ದರು. ಎಪ್ರೀಲ್ 1 ರಂದು ಮಸೀದಿಯ ಉಸ್ತುವಾರಿ ಸೇರಿದಂತೆ ಒಟ್ಟು ಹನ್ನೆಡೆದು ಜನರನ್ನು ಬಂಧಿಸಲಾಗಿತ್ತು.

ಥಾಯ್ ಪ್ರಜೆಗಳು ಮತ್ತು ಅವರ ಭಾರತೀಯ ಸ್ನೇಹಿತರ ವಿರುದ್ಧ ಐಪಿಸಿ ಸೆಕ್ಷನ್ 188 (ಸರ್ಕಾರಿ ನಿಯಮ ಉಲ್ಲಂಘಟನೆ), 269 (ಸೋಂಕು ಹರಡುವ ಬಗ್ಗೆ ನಿರ್ಲಕ್ಷ್ಯ), 270 (ಅಪಾಯಕಾರಿ ಕಾಯಿಲೆಯ ಸೋಂಕು ಹರಡುವ ಸಾಧ್ಯತೆ), 271 (ಕ್ವಾರಂಟೈನ್‌ ನಿಯಮ ಉಲ್ಲಂಘನೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯಿದೆಯ ಸೆಕ್ಷನ್ 3 (ಕಾಯಿದೆಯಡಿ ಮಾಡಿದ ನಿಯಮಗಳನ್ನು ಪಾಲಿಸದಿರುವುದು) ಸೇರಿದಂತೆ ಪ್ರಕರಣ ದಾಖಲಾಗಿತ್ತು.

ಥಾಯ್ ಪ್ರಜೆಗಳ ಮೇಲೆ ಪ್ರತ್ಯೇಕವಾಗಿ, ವಿದೇಶಿಯರ ಕಾಯಿದೆಯ ಸೆಕ್ಷನ್ 14 (ವೀಸಾ ನಿಯಮಗಳನ್ನು ಉಲ್ಲಂಘನೆ) ಅಡಿಯಲ್ಲಿ ದಾಖಲಿಸಲಾಗಿತ್ತು.

ಇದೆ ಸಮಯದಲ್ಲಿ ಪ್ರಕರಣ ದಾಖಲಿಸಲ್ಪಟ್ಟಿದ್ದ ಹಲವು ತಬ್ಲೀಘಿ ಜಮಾಅತ್‌ ಸದಸ್ಯರ ಮೇಲಿನ ಪ್ರಕರಣವನ್ನು ದೇಶದ ಬೇರೆ ಬೇರೆ ನ್ಯಾಯಾಲಯಗಳು ಈ ಹಿಂದ ಖುಲಾಸೆಗೊಳಿಸಿದ್ದವು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...