Homeಮುಖಪುಟ12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

- Advertisement -
- Advertisement -

ಕೋವಿಡ್ ಮಾನದಂಡಗಳ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ಕಾರಣಕ್ಕಾಗಿ ವರ್ಷಗಳ ಹಿಂದೆ ದಾಖಲಾಗಿದ್ದ, ತಬ್ಲಿಘಿ ಜಮಾತ್‌ನ ಹನ್ನೆರಡು ಸದಸ್ಯರ ವಿರುದ್ಧದ ಎಲ್ಲಾ ಆರೋಪಗಳನ್ನು ಬರೇಲಿಯ ಮುಖ್ಯ ನ್ಯಾಯಾಧೀಶರು ಶನಿವಾರ ಮುಕ್ತಗೊಳಿಸಿದ್ದಾರೆ.

ಪ್ರಕರಣ ಖುಲಾಸೆಗೊಂಡವರಲ್ಲಿ ಒಂಬತ್ತು ಜನರು ಥಾಯ್‌ಲ್ಯಾಂಡ್‌ ಪ್ರಜೆಗಳಾಗಿದ್ದಾರೆ. ಅವರ ಇಬ್ಬರು ಭಾಷಾಂತರಕಾರರು ಮತ್ತು ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ವಾಸಿಸುತ್ತಿದ್ದ ಶಹಜಹಾನ್ ಪುರದ ಮಸೀದಿಯ ಉಸ್ತುವಾರಿಯ ಮೇಲಿದ್ದ ಆರೋಪಗಳು ಕೂಡಾ ಖೂಲಾಸೆಗೊಂಡಿದೆ. ಥಾಯ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಮರಳಲು ಅವಕಾಶ ನೀಡಲಾಗಿದೆ.

ಕಳೆದ ವರ್ಷ ಮಾರ್ಚ್ ಆರಂಭದಲ್ಲಿ, ತಬ್ಲಿಘಿ ಜಮಾತ್‌ನ ನಿಜಾಮುದ್ದೀನ್ ಮರ್ಕಝ್‌(ಕೇಂದ್ರ)ನಲ್ಲಿ ಸಾವಿರಾರು ಜನರು ಸೇರಿದ್ದರು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

2,300 ವಿದೇಶಿ ಪ್ರಜೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಒಕ್ಕೂಟ ಸರ್ಕಾರ ಹೇಳಿತ್ತು. ಮಾರ್ಚ್ 15, 2020 ರ ಹೊತ್ತಿಗೆ ಸಭೆ ಕೊನೆಗೊಂಡಿತ್ತು ಮತ್ತು ಇದರ ನಂತರ ಒಕ್ಕೂಟ ಸರ್ಕಾರ ಲಾಕ್‌ಡೌನ್ ಅನ್ನು ಘೋಷಿಸಿತ್ತು.

ಈ ಕಾರ್ಯಕ್ರಮ ನಂತರ ಒಂಬತ್ತು ಥಾಯ್ ಪ್ರಜೆಗಳು ಹಾಗೂ ಅವರ ಇಬ್ಬರು ಅನುವಾದಕರು ಶಹಜಹಾನ್ ಪುರ ಮಸೀದಿಯಲ್ಲಿ ತಂಗಿದ್ದರು. ಎಪ್ರೀಲ್ 1 ರಂದು ಮಸೀದಿಯ ಉಸ್ತುವಾರಿ ಸೇರಿದಂತೆ ಒಟ್ಟು ಹನ್ನೆಡೆದು ಜನರನ್ನು ಬಂಧಿಸಲಾಗಿತ್ತು.

ಥಾಯ್ ಪ್ರಜೆಗಳು ಮತ್ತು ಅವರ ಭಾರತೀಯ ಸ್ನೇಹಿತರ ವಿರುದ್ಧ ಐಪಿಸಿ ಸೆಕ್ಷನ್ 188 (ಸರ್ಕಾರಿ ನಿಯಮ ಉಲ್ಲಂಘಟನೆ), 269 (ಸೋಂಕು ಹರಡುವ ಬಗ್ಗೆ ನಿರ್ಲಕ್ಷ್ಯ), 270 (ಅಪಾಯಕಾರಿ ಕಾಯಿಲೆಯ ಸೋಂಕು ಹರಡುವ ಸಾಧ್ಯತೆ), 271 (ಕ್ವಾರಂಟೈನ್‌ ನಿಯಮ ಉಲ್ಲಂಘನೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯಿದೆಯ ಸೆಕ್ಷನ್ 3 (ಕಾಯಿದೆಯಡಿ ಮಾಡಿದ ನಿಯಮಗಳನ್ನು ಪಾಲಿಸದಿರುವುದು) ಸೇರಿದಂತೆ ಪ್ರಕರಣ ದಾಖಲಾಗಿತ್ತು.

ಥಾಯ್ ಪ್ರಜೆಗಳ ಮೇಲೆ ಪ್ರತ್ಯೇಕವಾಗಿ, ವಿದೇಶಿಯರ ಕಾಯಿದೆಯ ಸೆಕ್ಷನ್ 14 (ವೀಸಾ ನಿಯಮಗಳನ್ನು ಉಲ್ಲಂಘನೆ) ಅಡಿಯಲ್ಲಿ ದಾಖಲಿಸಲಾಗಿತ್ತು.

ಇದೆ ಸಮಯದಲ್ಲಿ ಪ್ರಕರಣ ದಾಖಲಿಸಲ್ಪಟ್ಟಿದ್ದ ಹಲವು ತಬ್ಲೀಘಿ ಜಮಾಅತ್‌ ಸದಸ್ಯರ ಮೇಲಿನ ಪ್ರಕರಣವನ್ನು ದೇಶದ ಬೇರೆ ಬೇರೆ ನ್ಯಾಯಾಲಯಗಳು ಈ ಹಿಂದ ಖುಲಾಸೆಗೊಳಿಸಿದ್ದವು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...