Homeಮುಖಪುಟ12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

- Advertisement -
- Advertisement -

ಕೋವಿಡ್ ಮಾನದಂಡಗಳ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ಕಾರಣಕ್ಕಾಗಿ ವರ್ಷಗಳ ಹಿಂದೆ ದಾಖಲಾಗಿದ್ದ, ತಬ್ಲಿಘಿ ಜಮಾತ್‌ನ ಹನ್ನೆರಡು ಸದಸ್ಯರ ವಿರುದ್ಧದ ಎಲ್ಲಾ ಆರೋಪಗಳನ್ನು ಬರೇಲಿಯ ಮುಖ್ಯ ನ್ಯಾಯಾಧೀಶರು ಶನಿವಾರ ಮುಕ್ತಗೊಳಿಸಿದ್ದಾರೆ.

ಪ್ರಕರಣ ಖುಲಾಸೆಗೊಂಡವರಲ್ಲಿ ಒಂಬತ್ತು ಜನರು ಥಾಯ್‌ಲ್ಯಾಂಡ್‌ ಪ್ರಜೆಗಳಾಗಿದ್ದಾರೆ. ಅವರ ಇಬ್ಬರು ಭಾಷಾಂತರಕಾರರು ಮತ್ತು ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ವಾಸಿಸುತ್ತಿದ್ದ ಶಹಜಹಾನ್ ಪುರದ ಮಸೀದಿಯ ಉಸ್ತುವಾರಿಯ ಮೇಲಿದ್ದ ಆರೋಪಗಳು ಕೂಡಾ ಖೂಲಾಸೆಗೊಂಡಿದೆ. ಥಾಯ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಮರಳಲು ಅವಕಾಶ ನೀಡಲಾಗಿದೆ.

ಕಳೆದ ವರ್ಷ ಮಾರ್ಚ್ ಆರಂಭದಲ್ಲಿ, ತಬ್ಲಿಘಿ ಜಮಾತ್‌ನ ನಿಜಾಮುದ್ದೀನ್ ಮರ್ಕಝ್‌(ಕೇಂದ್ರ)ನಲ್ಲಿ ಸಾವಿರಾರು ಜನರು ಸೇರಿದ್ದರು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

2,300 ವಿದೇಶಿ ಪ್ರಜೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಒಕ್ಕೂಟ ಸರ್ಕಾರ ಹೇಳಿತ್ತು. ಮಾರ್ಚ್ 15, 2020 ರ ಹೊತ್ತಿಗೆ ಸಭೆ ಕೊನೆಗೊಂಡಿತ್ತು ಮತ್ತು ಇದರ ನಂತರ ಒಕ್ಕೂಟ ಸರ್ಕಾರ ಲಾಕ್‌ಡೌನ್ ಅನ್ನು ಘೋಷಿಸಿತ್ತು.

ಈ ಕಾರ್ಯಕ್ರಮ ನಂತರ ಒಂಬತ್ತು ಥಾಯ್ ಪ್ರಜೆಗಳು ಹಾಗೂ ಅವರ ಇಬ್ಬರು ಅನುವಾದಕರು ಶಹಜಹಾನ್ ಪುರ ಮಸೀದಿಯಲ್ಲಿ ತಂಗಿದ್ದರು. ಎಪ್ರೀಲ್ 1 ರಂದು ಮಸೀದಿಯ ಉಸ್ತುವಾರಿ ಸೇರಿದಂತೆ ಒಟ್ಟು ಹನ್ನೆಡೆದು ಜನರನ್ನು ಬಂಧಿಸಲಾಗಿತ್ತು.

ಥಾಯ್ ಪ್ರಜೆಗಳು ಮತ್ತು ಅವರ ಭಾರತೀಯ ಸ್ನೇಹಿತರ ವಿರುದ್ಧ ಐಪಿಸಿ ಸೆಕ್ಷನ್ 188 (ಸರ್ಕಾರಿ ನಿಯಮ ಉಲ್ಲಂಘಟನೆ), 269 (ಸೋಂಕು ಹರಡುವ ಬಗ್ಗೆ ನಿರ್ಲಕ್ಷ್ಯ), 270 (ಅಪಾಯಕಾರಿ ಕಾಯಿಲೆಯ ಸೋಂಕು ಹರಡುವ ಸಾಧ್ಯತೆ), 271 (ಕ್ವಾರಂಟೈನ್‌ ನಿಯಮ ಉಲ್ಲಂಘನೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯಿದೆಯ ಸೆಕ್ಷನ್ 3 (ಕಾಯಿದೆಯಡಿ ಮಾಡಿದ ನಿಯಮಗಳನ್ನು ಪಾಲಿಸದಿರುವುದು) ಸೇರಿದಂತೆ ಪ್ರಕರಣ ದಾಖಲಾಗಿತ್ತು.

ಥಾಯ್ ಪ್ರಜೆಗಳ ಮೇಲೆ ಪ್ರತ್ಯೇಕವಾಗಿ, ವಿದೇಶಿಯರ ಕಾಯಿದೆಯ ಸೆಕ್ಷನ್ 14 (ವೀಸಾ ನಿಯಮಗಳನ್ನು ಉಲ್ಲಂಘನೆ) ಅಡಿಯಲ್ಲಿ ದಾಖಲಿಸಲಾಗಿತ್ತು.

ಇದೆ ಸಮಯದಲ್ಲಿ ಪ್ರಕರಣ ದಾಖಲಿಸಲ್ಪಟ್ಟಿದ್ದ ಹಲವು ತಬ್ಲೀಘಿ ಜಮಾಅತ್‌ ಸದಸ್ಯರ ಮೇಲಿನ ಪ್ರಕರಣವನ್ನು ದೇಶದ ಬೇರೆ ಬೇರೆ ನ್ಯಾಯಾಲಯಗಳು ಈ ಹಿಂದ ಖುಲಾಸೆಗೊಳಿಸಿದ್ದವು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...