Homeಮುಖಪುಟ12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

12 ತಬ್ಲಿಘಿ ಜಮಾತ್‌‌ ಸದಸ್ಯರ ಪ್ರಕರಣವನ್ನು ಖುಲಾಸೆಗೊಳಿಸಿದ ಯುಪಿ ನ್ಯಾಯಾಲಯ

- Advertisement -
- Advertisement -

ಕೋವಿಡ್ ಮಾನದಂಡಗಳ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ಕಾರಣಕ್ಕಾಗಿ ವರ್ಷಗಳ ಹಿಂದೆ ದಾಖಲಾಗಿದ್ದ, ತಬ್ಲಿಘಿ ಜಮಾತ್‌ನ ಹನ್ನೆರಡು ಸದಸ್ಯರ ವಿರುದ್ಧದ ಎಲ್ಲಾ ಆರೋಪಗಳನ್ನು ಬರೇಲಿಯ ಮುಖ್ಯ ನ್ಯಾಯಾಧೀಶರು ಶನಿವಾರ ಮುಕ್ತಗೊಳಿಸಿದ್ದಾರೆ.

ಪ್ರಕರಣ ಖುಲಾಸೆಗೊಂಡವರಲ್ಲಿ ಒಂಬತ್ತು ಜನರು ಥಾಯ್‌ಲ್ಯಾಂಡ್‌ ಪ್ರಜೆಗಳಾಗಿದ್ದಾರೆ. ಅವರ ಇಬ್ಬರು ಭಾಷಾಂತರಕಾರರು ಮತ್ತು ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ವಾಸಿಸುತ್ತಿದ್ದ ಶಹಜಹಾನ್ ಪುರದ ಮಸೀದಿಯ ಉಸ್ತುವಾರಿಯ ಮೇಲಿದ್ದ ಆರೋಪಗಳು ಕೂಡಾ ಖೂಲಾಸೆಗೊಂಡಿದೆ. ಥಾಯ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಮರಳಲು ಅವಕಾಶ ನೀಡಲಾಗಿದೆ.

ಕಳೆದ ವರ್ಷ ಮಾರ್ಚ್ ಆರಂಭದಲ್ಲಿ, ತಬ್ಲಿಘಿ ಜಮಾತ್‌ನ ನಿಜಾಮುದ್ದೀನ್ ಮರ್ಕಝ್‌(ಕೇಂದ್ರ)ನಲ್ಲಿ ಸಾವಿರಾರು ಜನರು ಸೇರಿದ್ದರು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’!

2,300 ವಿದೇಶಿ ಪ್ರಜೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಒಕ್ಕೂಟ ಸರ್ಕಾರ ಹೇಳಿತ್ತು. ಮಾರ್ಚ್ 15, 2020 ರ ಹೊತ್ತಿಗೆ ಸಭೆ ಕೊನೆಗೊಂಡಿತ್ತು ಮತ್ತು ಇದರ ನಂತರ ಒಕ್ಕೂಟ ಸರ್ಕಾರ ಲಾಕ್‌ಡೌನ್ ಅನ್ನು ಘೋಷಿಸಿತ್ತು.

ಈ ಕಾರ್ಯಕ್ರಮ ನಂತರ ಒಂಬತ್ತು ಥಾಯ್ ಪ್ರಜೆಗಳು ಹಾಗೂ ಅವರ ಇಬ್ಬರು ಅನುವಾದಕರು ಶಹಜಹಾನ್ ಪುರ ಮಸೀದಿಯಲ್ಲಿ ತಂಗಿದ್ದರು. ಎಪ್ರೀಲ್ 1 ರಂದು ಮಸೀದಿಯ ಉಸ್ತುವಾರಿ ಸೇರಿದಂತೆ ಒಟ್ಟು ಹನ್ನೆಡೆದು ಜನರನ್ನು ಬಂಧಿಸಲಾಗಿತ್ತು.

ಥಾಯ್ ಪ್ರಜೆಗಳು ಮತ್ತು ಅವರ ಭಾರತೀಯ ಸ್ನೇಹಿತರ ವಿರುದ್ಧ ಐಪಿಸಿ ಸೆಕ್ಷನ್ 188 (ಸರ್ಕಾರಿ ನಿಯಮ ಉಲ್ಲಂಘಟನೆ), 269 (ಸೋಂಕು ಹರಡುವ ಬಗ್ಗೆ ನಿರ್ಲಕ್ಷ್ಯ), 270 (ಅಪಾಯಕಾರಿ ಕಾಯಿಲೆಯ ಸೋಂಕು ಹರಡುವ ಸಾಧ್ಯತೆ), 271 (ಕ್ವಾರಂಟೈನ್‌ ನಿಯಮ ಉಲ್ಲಂಘನೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯಿದೆಯ ಸೆಕ್ಷನ್ 3 (ಕಾಯಿದೆಯಡಿ ಮಾಡಿದ ನಿಯಮಗಳನ್ನು ಪಾಲಿಸದಿರುವುದು) ಸೇರಿದಂತೆ ಪ್ರಕರಣ ದಾಖಲಾಗಿತ್ತು.

ಥಾಯ್ ಪ್ರಜೆಗಳ ಮೇಲೆ ಪ್ರತ್ಯೇಕವಾಗಿ, ವಿದೇಶಿಯರ ಕಾಯಿದೆಯ ಸೆಕ್ಷನ್ 14 (ವೀಸಾ ನಿಯಮಗಳನ್ನು ಉಲ್ಲಂಘನೆ) ಅಡಿಯಲ್ಲಿ ದಾಖಲಿಸಲಾಗಿತ್ತು.

ಇದೆ ಸಮಯದಲ್ಲಿ ಪ್ರಕರಣ ದಾಖಲಿಸಲ್ಪಟ್ಟಿದ್ದ ಹಲವು ತಬ್ಲೀಘಿ ಜಮಾಅತ್‌ ಸದಸ್ಯರ ಮೇಲಿನ ಪ್ರಕರಣವನ್ನು ದೇಶದ ಬೇರೆ ಬೇರೆ ನ್ಯಾಯಾಲಯಗಳು ಈ ಹಿಂದ ಖುಲಾಸೆಗೊಳಿಸಿದ್ದವು.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...