Homeರಾಷ್ಟ್ರೀಯನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

- Advertisement -
- Advertisement -

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ.

ನ್ಯಾಯಮೂರ್ತಿ ಹನಿ ಎಂ. ವರ್ಗೀಸ್ ಅವರು ಮುಕ್ತ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ್ದು, ಈ ಮೂಲಕ 8 ವರ್ಷಗಳ ಕಾಲ ನಡೆದ ವಿಚಾರಣೆಗೆ ಅಂತ್ಯ ಹಾಡಿದ್ದಾರೆ.

ನ್ಯಾಯಾಧೀಶರು ಪ್ರಕರಣ ಇತರ ಆರೋಪಿಗಳಾದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ (ಎ4), ಎಚ್. ಸಲೀಮ್ (ಎ5), ಸಿ. ಪ್ರದೀಪ್ (ಎ 6) ಅವರನ್ನು ಅತ್ಯಾಚಾರ, ಪಿತೂರಿ, ಅಪಹರಣ ಮತ್ತು ಇತರ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ, 340, 354, 366, 354 ಬಿ ಮತ್ತು 376 ಡಿ ಅಡಿಯ ಅಪರಾಧಗಳಲ್ಲಿ ಇವರನ್ನು ತಪ್ಪಿತಸ್ಥರೆಂದು ಘೋಷಣೆ ಮಾಡಲಾಗಿದೆ. ಡಿಸೆಂಬರ್ 12 ರಂದು ಶಿಕ್ಷೆ ಪ್ರಕಟವಾಗಲಿದೆ.

ಪ್ರಕರಣದಲ್ಲಿ ದಿಲೀಪ್ 8ನೇ ಆರೋಪಿ ಎಂದು ಗುರುತಿಸಲಾಗಿತ್ತು. ಅಪರಾಧದ ಹಿಂದಿನ ಪ್ರಮುಖ ಸಂಚುಕೋರ ಎಂಬ ಆರೋಪ ಅವರ ಮೇಲೆ ಹೊರಿಸಲಾಗಿತ್ತು. ದಿಲೀಪ್ ಜೊತೆಗೆ, ನ್ಯಾಯಾಲಯ ಪ್ರಕರಣದ 7, 9 ಮತ್ತು 15ನೇ ಆರೋಪಿಗಳನ್ನೂ ಖುಲಾಸೆಗೊಳಿಸಿದೆ.

ಈ ಪ್ರಕರಣವು ಫೆಬ್ರವರಿ 17, 2017 ರಂದು ಕೊಚ್ಚಿ ನಗರದ ಹೊರವಲಯದಲ್ಲಿ ಖ್ಯಾತ ನಟಿಯೊಬ್ಬರನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆಗೆ ಸಂಬಂಧಿಸಿದೆ. ಆರೋಪಿಗಳು ತಮ್ಮ ದುಷ್ಕೃತ್ಯದ ವಿಡಿಯೋ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಪಲ್ಸರ್ ಸುನಿ ಯಾನೆ ಸುನಿಲ್ ಎನ್.ಎಸ್ ಪ್ರಮುಖ ಮೊದಲ ಆರೋಪಿಯಾಗಿದ್ದರೆ, ಟ ದಿಲೀಪ್ 8ನೇ ಆರೋಪಿಯಾಗಿದ್ದರು. ಅಪಹರಣ ಮತ್ತು ಲೈಂಗಿಕ ದೌರ್ಜನ್ಯದ ಹಿಂದೆ ಕ್ರಿಮಿನಲ್ ಪಿತೂರಿ ನಡೆಸಿದ ಆರೋಪ ದಿಲೀಪ್ ಮೇಲಿತ್ತು.

ಮೂಲತಃ ಪ್ರಕರಣದಲ್ಲಿ 12 ಜನ ಆರೋಪಿಗಳಿದ್ದರು. ಅವರಲ್ಲಿ ಪ್ರತೀಶ್ ಚಾಕೊ ಮತ್ತು ರಾಜು ಜೋಸೆಫ್ ಎಂಬ ಇಬ್ಬರನ್ನು ಈ ಹಿಂದೆ ಖುಲಾಸೆಗೊಳಿಸಲಾಗಿತ್ತು. ಇನ್ನೊಬ್ಬರು ವಿಷ್ಣುವನ್ನು ಅಪ್ರೂವರ್ ಆಗಿ ಪರಿವರ್ತಿಸಲಾಗಿತ್ತು. ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ., ವಿಜೀಶ್ ವಿ.ಪಿ., ಸಲೀಂ ಎಚ್ ಯಾನೆ ವಡಿವಲ್ ಸಲೀಂ, ಪ್ರದೀಪ್, ಚಾರ್ಲಿ ಥಾಮಸ್ ಮತ್ತು ಸನೀಲ್‌ಕುಮಾರ್ ಯಾನೆ ಮೇಸ್ತರಿ ಸನೀಲ್‌ ಪ್ರಕರಣದ ಇತರ ಆರೋಪಿಗಳಾಗಿದ್ದರು.

ಹೈಕೋರ್ಟ್ ಜಾಮೀನು ನೀಡುವ ಮೊದಲು ನಟ ದಿಲೀಪ್ ಸುಮಾರು 80 ದಿನಗಳ ಕಾಲ ಕಸ್ಟಡಿಯಲ್ಲಿದ್ದರು. ವಿಚಾರಣೆ ಬೇಗ ಮುಗಿಯುವ ಸಾಧ್ಯತೆ ಇಲ್ಲ ಎಂಬ ಆಧಾರದಲ್ಲಿ ಸೆಪ್ಟೆಂಬರ್ 2024ರಲ್ಲಿ ಸುಪ್ರೀಂ ಕೋರ್ಟ್ ಅಂತಿಮವಾಗಿ ಜಾಮೀನು ನೀಡುವ ಮೊದಲು ಸುನಿ ಸುಮಾರು 7 ½ ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...