Homeಮುಖಪುಟದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪರ್ವೀನ್ ಸಿಂಗ್ ಅವರು ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಲೂಟಿ ಮತ್ತು ಬೆಂಕಿ ಹಚ್ಚುವ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಶಾ ಆಲಂ, ರಶೀದ್ ಸೈಫಿ, ಮೊಹಮ್ಮದ್ ಶದಾಬ್, ಹಬೀಬ್, ಇರ್ಫಾನ್, ಸುಹೇಲ್, ಸಲೀಮ್ ಅಲಿಯಾಸ್ ಆಶು, ಇರ್ಷಾದ್ ಮತ್ತು ಅಜರ್ ಅಲಿಯಾಸ್ ಸೋನು ಎಂಬ ಒಂಬತ್ತು ಜನರ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದರು.

ಮಾರ್ಚ್ 30 ರ ಆದೇಶದಲ್ಲಿ, ನ್ಯಾಯಾಲಯವು, “ಸಾಕ್ಷ್ಯಗಳು ಸಾಮಾನ್ಯ ಸ್ವರೂಪದ್ದಾಗಿದ್ದು, ವಿಶೇಷವಾಗಿ ಈ ಸಾಕ್ಷಿಗಳು ಘಟನೆಯ ಸ್ಥಳಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ದಿಷ್ಟತೆಯ ಕೊರತೆಯಿದೆ… ಆರೋಪಿಗಳನ್ನು ಶಿಕ್ಷಿಸಲು ಈ ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನಾನು ಕಂಡುಕೊಂಡಿದ್ದೇನೆ” ಎಂದು ಅಭಿಪ್ರಾಯಪಟ್ಟಿದೆ.

ರಾಷ್ಟ್ರ ರಾಜಧಾನಿಯ ಚಾಂದ್ ಬಾಗ್ ಪ್ರದೇಶದಲ್ಲಿ ಭುಗಿಲೆದ್ದ ಗಲಭೆಯ ಸಂದರ್ಭದಲ್ಲಿ ಇನ್ನೋವಾ ಕ್ರಿಸ್ಟಾ ಕಾರನ್ನು ಧ್ವಂಸಗೊಳಿಸುವುದು, ಮೋಟಾರ್ ಸೈಕಲ್ ಸುಟ್ಟುಹಾಕುವುದು, ಬೀದಿ ವ್ಯಾಪಾರಿಗಳ ಬಂಡಿಗಳನ್ನು ಲೂಟಿ ಮಾಡುವುದು ಮತ್ತು ‘ರಾಯಲ್ ಮೋಟಾರ್ಸ್’ ಎಂಬ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಯಾಳ್‌ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳಲ್ಲಿ ವಿರೋಧಾಭಾಸಗಳನ್ನು ಗಮನಿಸಿದ ನ್ಯಾಯಾಲಯ, ಪ್ರಕರಣದ ತನಿಖಾಧಿಕಾರಿ ಘಟನೆಯ ದಿನಾಂಕವನ್ನು ಫೆಬ್ರವರಿ 24 ಎಂದು ತಪ್ಪಾಗಿ ದಾಖಲಿಸಿದ್ದಾರೆ. ಆದರೆ, ಘಟನೆ ಫೆಬ್ರವರಿ 25, 2020 ರಂದು ನಡೆದಿದೆ ಎಂದು ಹೇಳಿದೆ.

ಸುದ್ದಿ ವಾಹಿನಿಯೊಂದರ ವಾಹನ (ಇನ್ನೋವಾ ಕ್ರಿಸ್ಟಾ) ಮೇಲಿನ ದಾಳಿಗೆ ಸಂಬಂಧಿಸಿದಂತೆ, ಚಾಲಕ ಮತ್ತು ಪ್ರಯಾಣಿಕನು, ಪೊಲೀಸರರು ಗುರಿತಿಸಿದ ಸ್ಥಳ ಯೋಜನೆ ಹಾಗೂ ಪೊಲೀಸ್ ಸಾಕ್ಷ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಸ್ಥಳ ಮತ್ತು ಸಮಯವನ್ನು ಗುರುತಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.

“ಈ ಘಟನೆಗೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ಗ್ಯಾನ್ ಸಿಂಗ್ ಮತ್ತು ಹೆಡ್ ಕಾನ್‌ಸ್ಟೆಬಲ್ ಸುನಿಲ್ ಅವರ ಸಾಕ್ಷ್ಯಗಳು ಸಂಪೂರ್ಣವಾಗಿ ಸುಳ್ಳು ಎಂದು ಕಂಡುಬಂದಿದೆ” ಎಂದು ನ್ಯಾಯಾಧೀಶರು ಹೇಳಿದರು. ಈ ಘಟನೆ ವಾಸ್ತವವಾಗಿ ಪೊಲೀಸರು ಹೇಳಿಕೊಂಡ ಸ್ಥಳದಿಂದ ದೂರದಲ್ಲಿ ನಡೆದಿದೆ ಎಂದು ಗಮನಿಸಿದರು.

ಪ್ರಮುಖ ಘಟನೆಗಳ ಸಮಯ ಮತ್ತು ಸ್ಥಳದ ಬಗ್ಗೆ ಪ್ರಾಥಮಿಕ ಸಾಕ್ಷಿಗಳು ಸುಳ್ಳು ಹೇಳಿಕೆ ನೀಡಿರುವುದರಿಂದ, ಇತರ ಆಪಾದಿತ ಗಲಭೆಗಳಿಗೆ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಅವರ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಗಮನಿಸಿತು.

“ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಈ ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನಾನು ಕಂಡುಕೊಂಡಿದ್ದೇನೆ. ಅದಕ್ಕೆ ಅನುಗುಣವಾಗಿ ಆರೋಪಿಗಳು ಅನುಮಾನದ ಲಾಭಕ್ಕೆ ಅರ್ಹರು ಎಂದು ನಾನು ಕಂಡುಕೊಂಡಿದ್ದೇನೆ” ಎಂದು ನ್ಯಾಯಾಲಯವು ಹೇಳಿತು. ಅವರ ಜಾಮೀನುದಾರರನ್ನು ಬಿಡುಗಡೆ ಮಾಡಯವ ಜೊತೆಗೆ ಜಾಮೀನು ಬಾಂಡ್‌ಗಳನ್ನು ರದ್ದುಗೊಳಿಸಬೇಕು ಎಂದು ಆದೇಶಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...