Homeಮುಖಪುಟಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಪಟಿಯಾಲ ಹೌಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತ್ ಬನ್ಸಾಲ್ ಅವರು, ಆರೋಪಿಗಳಾದ ಜಮ್ಶೀದ್ ಜಹೂರ್ ಪಾಲ್ ಮತ್ತು ಪರ್ವೈಜ್ ರಶೀದ್ ಅವರ ಮೇಲಿನ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದ್ದಾರೆ.

ಭಯೋತ್ಪಾದಕ ಸಂಘಟನೆಯ ಸದಸ್ಯತ್ವ ಮತ್ತು ಪಿತೂರಿಗೆ ಸಂಬಂಧಿಸಿದ ಯುಎಪಿಎ ನಿಬಂಧನೆಗಳ ಅಡಿಯಲ್ಲಿ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಇಬ್ಬರ ವಿರುದ್ಧ ಆರೋಪ ಹೊರಿಸಲಾಗಿತ್ತು. ಈ ಪ್ರಕರಣದ ಎಫ್‌ಐಆರ್‌ನಲ್ಲಿ ಇನ್ನೂ ಇಬ್ಬರನ್ನು ಹೆಸರಿಸಲಾಗಿದೆ, ಅವರಲ್ಲಿ ಒಬ್ಬರು ಬಂಧನಕ್ಕೆ ಮುನ್ನ 2018ರಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ತಲೆಮರೆಸಿಕೊಂಡಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಜಮ್ಮು ಕಾಶ್ಮೀರದ ಕೆಲ ವ್ಯಕ್ತಿಗಳು ಐಸಿಸ್ ಸಂಘಟನೆಗೆ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ್ದಾರೆ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ಬಳಸಲು ಉತ್ತರ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಮಾಹಿತಿ ಸೂಚಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವಿಶೇಷ ಘಟಕದ ತಂಡವು, ಸೆಪ್ಟೆಂಬರ್ 6, 2018 ರಂದು ದೆಹಲಿಯ ಜಾಮಾ ಮಸೀದಿಯ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿತ್ತು. ಬಂಧಿತರ ಬಳಿಯಿಂದ ತಲಾ ಒಂದು ಪಿಸ್ತೂಲ್ ಮತ್ತು ಐದು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಆರೋಪಿಗಳು ಬಿಬಿಎಂ ಚಾಟ್‌ಗಳ ಮೂಲಕ ಶಂಕಿತ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದರು ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸಲು ಹಣವನ್ನು ಪಡೆದಿದ್ದರು ಎಂದು ಪ್ರಾಸಿಕ್ಯೂಷನ್ ಪ್ರತಿಪಾದಿಸಿದೆ.

ವಿಚಾರಣೆಯ ಸಮಯದಲ್ಲಿ, ಪ್ರಾಸಿಕ್ಯೂಷನ್ ಪೊಲೀಸ್ ಸಿಬ್ಬಂದಿ ಮತ್ತು ವಿಧಿವಿಜ್ಞಾನ ತಜ್ಞರು ಸೇರಿದಂತೆ 23 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ಆರೋಪಿಗಳು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು ಮತ್ತು ವಿಚಾರಣೆಯನ್ನು ಕೋರಿದ್ದರು.

ಪ್ರಾಸಿಕ್ಯೂಷನ್ ಮಂಡಿಸಿದ ವಾದದಲ್ಲಿನ ಗಂಭೀರ ಅಸಂಗತತೆಗಳನ್ನು ಮತ್ತು ತನಿಖೆಯಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದ ನ್ಯಾಯಾಲಯವು, ಆರೋಪಿಗಳಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಿವರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.

ಪೊಲೀಸರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಾಗ ತಯಾರಿಸಿದ ದಾಖಲೆಗಳ ಮೇಲೆ ಎಫ್‌ಐಆರ್ ಸಂಖ್ಯೆಯನ್ನು ಮೊದಲೇ ಬರೆಯಲಾಗಿತ್ತು. ಸಾಮಾನ್ಯವಾಗಿ, ಎಫ್‌ಐಆರ್ ದಾಖಲಾದ ಮೇಲಷ್ಟೇ ಅದಕ್ಕೊಂದು ಸಂಖ್ಯೆ ಸಿಗುತ್ತದೆ. ಆದರೆ ಇಲ್ಲಿ ಶಸ್ತ್ರಾಸ್ತ್ರ ಸಿಕ್ಕವು ಎನ್ನಲಾದ ಸಮಯದಲ್ಲಿಯೇ ದಾಖಲೆಗಳ ಮೇಲೆ ಆ ಸಂಖ್ಯೆ ಇತ್ತು. ಹಾಗಾಗಿ, ಪೊಲೀಸರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಮೊದಲೇ ಎಫ್‌ಐಆರ್ ದಾಖಲಿಸಿರಬೇಕು. ಅಥವಾ, ನಂತರ ಎಫ್‌ಐಆರ್ ಸಂಖ್ಯೆಯನ್ನು ಆ ದಾಖಲೆಗಳಿಗೆ ಸೇರಿಸಿರಬೇಕು. ಈ ಗೊಂದಲದಿಂದಾಗಿ, ಪೊಲೀಸರು ಹೇಳುತ್ತಿರುವ ಕಥೆ ಸುಳ್ಳಿರಬಹುದು ಮತ್ತು ಅವರು ಹೇಳಿದ ಜಾಗದಲ್ಲಿ, ಹೇಳಿದ ರೀತಿಯಲ್ಲಿ ಶಸ್ತ್ರಾಸ್ತ್ರಗಳು ಸಿಕ್ಕಿಲ್ಲದಿರಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು ‘ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದಂತಹ ಅತೀ ಹೆಚ್ಚು ಸಾರ್ವಜನಿಕರು ಇರುವ ಜನನಿಬಿಡ ಪ್ರದೇಶದಲ್ಲಿ’ ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಅಲ್ಲದೆ, ಅಲ್ಲಿ ಅನೇಕ ಸಾರ್ವಜನಿಕರು ಸಾಕ್ಷಿಗಳಾಗಿ ಇದ್ದರು ಎಂದು ಪ್ರಾಸಿಕ್ಯೂಷನ್ ಸಾಕ್ಷಿಗಳೇ ಒಪ್ಪಿಕೊಂಡಿದ್ದರು. ಹೀಗಿದ್ದರೂ ಸಹ, ಈ ಪ್ರಕರಣದ ಯಾವುದೇ ಹಂತದಲ್ಲಿ ಒಬ್ಬರೇ ಒಬ್ಬ ಸ್ವತಂತ್ರ ಸಾರ್ವಜನಿಕ ಸಾಕ್ಷಿಗಳನ್ನು ಏಕೆ ಸೇರಿಸಿಕೊಳ್ಳಲಿಲ್ಲ ಎಂಬುದಕ್ಕೆ ಪೊಲೀಸರು ಯಾವುದೇ ಸಮರ್ಥನೆಯನ್ನು ನೀಡಿಲ್ಲ ಎಂದಿದೆ.

ಆರೋಪಿಗಳಿಂದ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳನ್ನು ಸುಮಾರು ಎರಡು ತಿಂಗಳ ಕಾಲ ಸೀಲ್ ಮಾಡದೆ ಹಾಗೆಯೇ ಇಡಲಾಗಿತ್ತು. ಈ ಫೋನ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮೊದಲು ಇಷ್ಟು ದಿನಗಳ ಕಾಲ ಏಕೆ ವಿಳಂಬ ಮಾಡಲಾಯಿತು ಅಥವಾ ಅವುಗಳನ್ನು ತಕ್ಷಣವೇ ಪೊಲೀಸ್ ‘ಮಲ್ಖಾನಾ’ (ಸಾಕ್ಷ್ಯಗಳನ್ನು ಇಡುವ ಕೊಠಡಿ) ದಲ್ಲಿ ಏಕೆ ಇರಿಸಲಿಲ್ಲ ಎಂಬುದಕ್ಕೆ ಪೊಲೀಸರು ಸರಿಯಾದ ಉತ್ತರ ನೀಡಿಲ್ಲ. ಎರಡು ತಿಂಗಳ ಕಾಲ ಫೋನ್‌ಗಳು ಪೊಲೀಸರ ವಶದಲ್ಲಿ ಸೀಲ್ ಇಲ್ಲದೆ ಇದ್ದುದರಿಂದ, ಅದರಲ್ಲಿರುವ ಮಾಹಿತಿಯನ್ನು ಯಾರಾದರೂ ಬದಲಿಸಿರಬಹುದು ಅಥವಾ ಹೊಸದಾಗಿ ಸೇರಿಸಿರಬಹುದು ಎಂಬ ಸಂಶಯ ನ್ಯಾಯಾಲಯಕ್ಕೆ ಬಂದಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಈ ಕಾರಣದಿಂದಾಗಿ, ಪೊಲೀಸರು ಸಾಕ್ಷ್ಯವಾಗಿ ನೀಡಿದ್ದ ಬಿಬಿಎಂ ಚಾಟ್ ರೆಕಾರ್ಡ್‌ಗಳನ್ನು ನಂಬಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಅವುಗಳನ್ನು ತಿರಸ್ಕರಿಸಿದೆ.

ಆರೋಪಿಗಳ ಪರ ವಕೀಲರಾದ ಅಹ್ಮದ್ ಇಬ್ರಾಹಿಂ, ತಮನ್ನಾ ಪಂಕಜ್, ಅರ್ಚಿತ್ ಕೃಷ್ಣ ಮತ್ತು ಪ್ರಿಯಾ ವತ್ಸ್ ವಾದ ಮಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...