Homeಮುಖಪುಟಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

- Advertisement -
- Advertisement -

ಅಕ್ಟೋಬರ್ 15, 2016ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್.30) ಸ್ವೀಕರಿಸಿದೆ.

ಸಿಬಿಐ 2018ರಲ್ಲಿ ತನ್ನ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಪ್ರತಿಭಟನಾ ಅರ್ಜಿಯೊಂದಿಗೆ ಅದನ್ನು ಪ್ರಶ್ನಿಸಿದ್ದರು. ಈ ವಿಷಯವನ್ನು ವಿಲೇವಾರಿ ಮಾಡುವಾಗ, ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ನಿರ್ದೇಶನ ನೀಡಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಪ್ರಸ್ತುತ ಪ್ರಕರಣದ ವಿಚಾರಣೆಯು ಈ ಮುಕ್ತಾಯ ವರದಿಯೊಂದಿಗೆ ಕೊನೆಗೊಂಡರೂ, ನಜೀಬ್ ಅವರ ತಾಯಿ ಮತ್ತು ಇತರ ಪ್ರೀತಿಪಾತ್ರರ ನಿರೀಕ್ಷೆ ಬಗ್ಗೆ ನಮಗೆ ಇನ್ನೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿದೆ. ಈ ಮೂಲಕ ನಜೀಬ್ ಅವರ ಕುಟುಂಬ ಹೊಂದಿರುವ ಭಾವನಾತ್ಮಕ ನೋವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ. ತನಿಖಾ ಯಂತ್ರದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ನಡೆಸಿದ ತನಿಖೆಯು ಅದರ ತಾರ್ಕಿಕ ತೀರ್ಮಾನವನ್ನು ಸಾಧಿಸಲು ಸಾಧ್ಯವಾಗದ ಪ್ರಕರಣಗಳಿವೆ” ಎಂದು ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಸಿಬಿಐ ತನಿಖೆಯಲ್ಲಿನ ಲೋಪಗಳ ಕುರಿತು ನಜೀಬ್ ಅವರ ತಾಯಿ ಎತ್ತಿದ ಎಲ್ಲಾ ಪ್ರಶ್ನೆಗಳನ್ನು ನ್ಯಾಯಾಲಯವು ಪರಿಶೀಲಿಸಿ ತಿರಸ್ಕರಿಸಿದೆ. ಸಂಸ್ಥೆಯು ಸಮಗ್ರ ತನಿಖೆಯನ್ನು ಕೈಗೊಂಡಿದೆ ಮತ್ತು ಎಲ್ಲಾ ತನಿಖಾ ಆಯ್ಕೆಗಳನ್ನು ಬಳಸಿಕೊಂಡಿದೆ ಎಂದಿದೆ.

ನ್ಯಾಯಾಲಯದ ಇತರ ಅವಲೋಕನಗಳು:

  • ನಜೀಬ್ ತನ್ನ ಹಾಸ್ಟೆಲ್ ಕೊಠಡಿಯಿಂದ ಹೊರಬಂದಾಗ, ತನ್ನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಿಟ್ಟು ಹೋಗಿದ್ದರು.
  • ಅವರು ಎಲ್ಲಿದ್ದಾರೆಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುವ ಯಾವುದೇ ಸುಳಿವು ಅಥವಾ ಮಾಹಿತಿ ಹೊರಬಂದಿಲ್ಲ.
  • ನಜೀಬ್ ಅವರ ತಾಯಿ ಮತ್ತು ಅವರ ವೈದ್ಯರ ಹೇಳಿಕೆಗಳು ಅವರು ಪುನರಾವರ್ತಿತ ಖಿನ್ನತೆ ಮತ್ತು ಚಿಂತೆಯಿಂದ ಬಳಲುತ್ತಿದ್ದಾರೆ ಎಂದು ದೃಢಪಡಿಸಿವೆ.
  • ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ನಜೀಬ್ ಹಾಸ್ಟೆಲ್‌ಗೆ ಹಿಂತಿರುಗಲು ನಿರಾಕರಿಸಿದ್ದರು ಎಂಬ ಹೇಳಿಕೆಯು ಊಹಾಪೋಹವಾಗಿಯೇ ಉಳಿದಿದೆ. ಅವರು ಸ್ವಯಂ ಪ್ರೇರಣೆಯಿಂದ ಹಾಸ್ಟೆಲ್ ತೊರೆದಿರಬಹುದು ಎಂಬ ಸಾಧ್ಯತೆಯನ್ನು ಸೂಚಿಸುತ್ತದೆ.
  • ನಜೀಬ್ ಕಣ್ಮರೆಯಾಗುವ ಹಿಂದಿನ ರಾತ್ರಿ ‘ಆತಂಕಕಾರಿ ಘಟನೆ’ ನಡೆದಿದ್ದರೂ, ಶಂಕಿತರು ಅವರ ಕಣ್ಮರೆಯೊಂದಿಗೆ ಯಾವುದೇ ಪಾತ್ರ ಹೊಂದಿದ್ದಾರೆಂದು ತೀರ್ಮಾನಿಸಲು ಸಾಧ್ಯವಾಗಿಲ್ಲ.
  • ಜೆಎನ್‌ಯುನಂತಹ ಕ್ಯಾಂಪಸ್‌ಗಳ ಚುನಾವಣೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಗಳಲು ಸಾಮಾನ್ಯ. ಆದರೆ, ಅದು ವಿದ್ಯಾರ್ಥಿಗಳು ಇನ್ನೊಬ್ಬ ವಿದ್ಯಾರ್ಥಿಯ ಕಣ್ಮರೆಗೆ ಕಾರಣವಾಗುವ ಮಟ್ಟಿಗೆ ಹೋಗುತ್ತಾರೆ ಎಂದು ತೀರ್ಮಾನಿಸಲು ಆ ಜಗಳಲು ಸರಿಯಾದ ಆಧಾರವಲ್ಲ, ವಿಶೇಷವಾಗಿ ದಾಖಲೆಗಳಲ್ಲಿ ಅದೇ ರೀತಿ ಸೂಚಿಸಲು ಯಾವುದೇ ಪುರಾವೆಗಳಿಲ್ಲದಿದ್ದಾಗ ಎಂದು ನ್ಯಾಯಾಲಯ ಹೇಳಿದೆ.
  • ಕೊನೆಯದಾಗಿ, ನಜೀಬ್ ಅಹ್ಮದ್ ಅವರನ್ನು ಶೀಘ್ರದಲ್ಲೇ ಪತ್ತೆಹಚ್ಚಲಾಗುವುದು ಎಂಬ ಆಶಾ ಭಾವನೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

27 ವರ್ಷದ ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹ್ಮದ್, ಎಬಿವಿಪಿ ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ ದೆಹಲಿ ಪೊಲೀಸರು, ನಂತರ ಸಿಬಿಐ ತನಿಖೆ ನಡೆಸಿದರೂ, ಇಂದಿಗೂ ಅವರು ಎಲ್ಲಿ ಹೋದರೂ ಎಂಬುವುದನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...