Homeಮುಖಪುಟಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

- Advertisement -
- Advertisement -

ಅಕ್ಟೋಬರ್ 15, 2016ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್.30) ಸ್ವೀಕರಿಸಿದೆ.

ಸಿಬಿಐ 2018ರಲ್ಲಿ ತನ್ನ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಪ್ರತಿಭಟನಾ ಅರ್ಜಿಯೊಂದಿಗೆ ಅದನ್ನು ಪ್ರಶ್ನಿಸಿದ್ದರು. ಈ ವಿಷಯವನ್ನು ವಿಲೇವಾರಿ ಮಾಡುವಾಗ, ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ನಿರ್ದೇಶನ ನೀಡಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಪ್ರಸ್ತುತ ಪ್ರಕರಣದ ವಿಚಾರಣೆಯು ಈ ಮುಕ್ತಾಯ ವರದಿಯೊಂದಿಗೆ ಕೊನೆಗೊಂಡರೂ, ನಜೀಬ್ ಅವರ ತಾಯಿ ಮತ್ತು ಇತರ ಪ್ರೀತಿಪಾತ್ರರ ನಿರೀಕ್ಷೆ ಬಗ್ಗೆ ನಮಗೆ ಇನ್ನೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿದೆ. ಈ ಮೂಲಕ ನಜೀಬ್ ಅವರ ಕುಟುಂಬ ಹೊಂದಿರುವ ಭಾವನಾತ್ಮಕ ನೋವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ. ತನಿಖಾ ಯಂತ್ರದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ನಡೆಸಿದ ತನಿಖೆಯು ಅದರ ತಾರ್ಕಿಕ ತೀರ್ಮಾನವನ್ನು ಸಾಧಿಸಲು ಸಾಧ್ಯವಾಗದ ಪ್ರಕರಣಗಳಿವೆ” ಎಂದು ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಸಿಬಿಐ ತನಿಖೆಯಲ್ಲಿನ ಲೋಪಗಳ ಕುರಿತು ನಜೀಬ್ ಅವರ ತಾಯಿ ಎತ್ತಿದ ಎಲ್ಲಾ ಪ್ರಶ್ನೆಗಳನ್ನು ನ್ಯಾಯಾಲಯವು ಪರಿಶೀಲಿಸಿ ತಿರಸ್ಕರಿಸಿದೆ. ಸಂಸ್ಥೆಯು ಸಮಗ್ರ ತನಿಖೆಯನ್ನು ಕೈಗೊಂಡಿದೆ ಮತ್ತು ಎಲ್ಲಾ ತನಿಖಾ ಆಯ್ಕೆಗಳನ್ನು ಬಳಸಿಕೊಂಡಿದೆ ಎಂದಿದೆ.

ನ್ಯಾಯಾಲಯದ ಇತರ ಅವಲೋಕನಗಳು:

  • ನಜೀಬ್ ತನ್ನ ಹಾಸ್ಟೆಲ್ ಕೊಠಡಿಯಿಂದ ಹೊರಬಂದಾಗ, ತನ್ನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಿಟ್ಟು ಹೋಗಿದ್ದರು.
  • ಅವರು ಎಲ್ಲಿದ್ದಾರೆಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುವ ಯಾವುದೇ ಸುಳಿವು ಅಥವಾ ಮಾಹಿತಿ ಹೊರಬಂದಿಲ್ಲ.
  • ನಜೀಬ್ ಅವರ ತಾಯಿ ಮತ್ತು ಅವರ ವೈದ್ಯರ ಹೇಳಿಕೆಗಳು ಅವರು ಪುನರಾವರ್ತಿತ ಖಿನ್ನತೆ ಮತ್ತು ಚಿಂತೆಯಿಂದ ಬಳಲುತ್ತಿದ್ದಾರೆ ಎಂದು ದೃಢಪಡಿಸಿವೆ.
  • ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ನಜೀಬ್ ಹಾಸ್ಟೆಲ್‌ಗೆ ಹಿಂತಿರುಗಲು ನಿರಾಕರಿಸಿದ್ದರು ಎಂಬ ಹೇಳಿಕೆಯು ಊಹಾಪೋಹವಾಗಿಯೇ ಉಳಿದಿದೆ. ಅವರು ಸ್ವಯಂ ಪ್ರೇರಣೆಯಿಂದ ಹಾಸ್ಟೆಲ್ ತೊರೆದಿರಬಹುದು ಎಂಬ ಸಾಧ್ಯತೆಯನ್ನು ಸೂಚಿಸುತ್ತದೆ.
  • ನಜೀಬ್ ಕಣ್ಮರೆಯಾಗುವ ಹಿಂದಿನ ರಾತ್ರಿ ‘ಆತಂಕಕಾರಿ ಘಟನೆ’ ನಡೆದಿದ್ದರೂ, ಶಂಕಿತರು ಅವರ ಕಣ್ಮರೆಯೊಂದಿಗೆ ಯಾವುದೇ ಪಾತ್ರ ಹೊಂದಿದ್ದಾರೆಂದು ತೀರ್ಮಾನಿಸಲು ಸಾಧ್ಯವಾಗಿಲ್ಲ.
  • ಜೆಎನ್‌ಯುನಂತಹ ಕ್ಯಾಂಪಸ್‌ಗಳ ಚುನಾವಣೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಗಳಲು ಸಾಮಾನ್ಯ. ಆದರೆ, ಅದು ವಿದ್ಯಾರ್ಥಿಗಳು ಇನ್ನೊಬ್ಬ ವಿದ್ಯಾರ್ಥಿಯ ಕಣ್ಮರೆಗೆ ಕಾರಣವಾಗುವ ಮಟ್ಟಿಗೆ ಹೋಗುತ್ತಾರೆ ಎಂದು ತೀರ್ಮಾನಿಸಲು ಆ ಜಗಳಲು ಸರಿಯಾದ ಆಧಾರವಲ್ಲ, ವಿಶೇಷವಾಗಿ ದಾಖಲೆಗಳಲ್ಲಿ ಅದೇ ರೀತಿ ಸೂಚಿಸಲು ಯಾವುದೇ ಪುರಾವೆಗಳಿಲ್ಲದಿದ್ದಾಗ ಎಂದು ನ್ಯಾಯಾಲಯ ಹೇಳಿದೆ.
  • ಕೊನೆಯದಾಗಿ, ನಜೀಬ್ ಅಹ್ಮದ್ ಅವರನ್ನು ಶೀಘ್ರದಲ್ಲೇ ಪತ್ತೆಹಚ್ಚಲಾಗುವುದು ಎಂಬ ಆಶಾ ಭಾವನೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

27 ವರ್ಷದ ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹ್ಮದ್, ಎಬಿವಿಪಿ ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ ದೆಹಲಿ ಪೊಲೀಸರು, ನಂತರ ಸಿಬಿಐ ತನಿಖೆ ನಡೆಸಿದರೂ, ಇಂದಿಗೂ ಅವರು ಎಲ್ಲಿ ಹೋದರೂ ಎಂಬುವುದನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...