Homeಮುಖಪುಟಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

- Advertisement -
- Advertisement -

ಅಕ್ಟೋಬರ್ 15, 2016ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್.30) ಸ್ವೀಕರಿಸಿದೆ.

ಸಿಬಿಐ 2018ರಲ್ಲಿ ತನ್ನ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಪ್ರತಿಭಟನಾ ಅರ್ಜಿಯೊಂದಿಗೆ ಅದನ್ನು ಪ್ರಶ್ನಿಸಿದ್ದರು. ಈ ವಿಷಯವನ್ನು ವಿಲೇವಾರಿ ಮಾಡುವಾಗ, ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ನಿರ್ದೇಶನ ನೀಡಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಪ್ರಸ್ತುತ ಪ್ರಕರಣದ ವಿಚಾರಣೆಯು ಈ ಮುಕ್ತಾಯ ವರದಿಯೊಂದಿಗೆ ಕೊನೆಗೊಂಡರೂ, ನಜೀಬ್ ಅವರ ತಾಯಿ ಮತ್ತು ಇತರ ಪ್ರೀತಿಪಾತ್ರರ ನಿರೀಕ್ಷೆ ಬಗ್ಗೆ ನಮಗೆ ಇನ್ನೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿದೆ. ಈ ಮೂಲಕ ನಜೀಬ್ ಅವರ ಕುಟುಂಬ ಹೊಂದಿರುವ ಭಾವನಾತ್ಮಕ ನೋವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ. ತನಿಖಾ ಯಂತ್ರದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ನಡೆಸಿದ ತನಿಖೆಯು ಅದರ ತಾರ್ಕಿಕ ತೀರ್ಮಾನವನ್ನು ಸಾಧಿಸಲು ಸಾಧ್ಯವಾಗದ ಪ್ರಕರಣಗಳಿವೆ” ಎಂದು ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಸಿಬಿಐ ತನಿಖೆಯಲ್ಲಿನ ಲೋಪಗಳ ಕುರಿತು ನಜೀಬ್ ಅವರ ತಾಯಿ ಎತ್ತಿದ ಎಲ್ಲಾ ಪ್ರಶ್ನೆಗಳನ್ನು ನ್ಯಾಯಾಲಯವು ಪರಿಶೀಲಿಸಿ ತಿರಸ್ಕರಿಸಿದೆ. ಸಂಸ್ಥೆಯು ಸಮಗ್ರ ತನಿಖೆಯನ್ನು ಕೈಗೊಂಡಿದೆ ಮತ್ತು ಎಲ್ಲಾ ತನಿಖಾ ಆಯ್ಕೆಗಳನ್ನು ಬಳಸಿಕೊಂಡಿದೆ ಎಂದಿದೆ.

ನ್ಯಾಯಾಲಯದ ಇತರ ಅವಲೋಕನಗಳು:

  • ನಜೀಬ್ ತನ್ನ ಹಾಸ್ಟೆಲ್ ಕೊಠಡಿಯಿಂದ ಹೊರಬಂದಾಗ, ತನ್ನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಿಟ್ಟು ಹೋಗಿದ್ದರು.
  • ಅವರು ಎಲ್ಲಿದ್ದಾರೆಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುವ ಯಾವುದೇ ಸುಳಿವು ಅಥವಾ ಮಾಹಿತಿ ಹೊರಬಂದಿಲ್ಲ.
  • ನಜೀಬ್ ಅವರ ತಾಯಿ ಮತ್ತು ಅವರ ವೈದ್ಯರ ಹೇಳಿಕೆಗಳು ಅವರು ಪುನರಾವರ್ತಿತ ಖಿನ್ನತೆ ಮತ್ತು ಚಿಂತೆಯಿಂದ ಬಳಲುತ್ತಿದ್ದಾರೆ ಎಂದು ದೃಢಪಡಿಸಿವೆ.
  • ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ನಜೀಬ್ ಹಾಸ್ಟೆಲ್‌ಗೆ ಹಿಂತಿರುಗಲು ನಿರಾಕರಿಸಿದ್ದರು ಎಂಬ ಹೇಳಿಕೆಯು ಊಹಾಪೋಹವಾಗಿಯೇ ಉಳಿದಿದೆ. ಅವರು ಸ್ವಯಂ ಪ್ರೇರಣೆಯಿಂದ ಹಾಸ್ಟೆಲ್ ತೊರೆದಿರಬಹುದು ಎಂಬ ಸಾಧ್ಯತೆಯನ್ನು ಸೂಚಿಸುತ್ತದೆ.
  • ನಜೀಬ್ ಕಣ್ಮರೆಯಾಗುವ ಹಿಂದಿನ ರಾತ್ರಿ ‘ಆತಂಕಕಾರಿ ಘಟನೆ’ ನಡೆದಿದ್ದರೂ, ಶಂಕಿತರು ಅವರ ಕಣ್ಮರೆಯೊಂದಿಗೆ ಯಾವುದೇ ಪಾತ್ರ ಹೊಂದಿದ್ದಾರೆಂದು ತೀರ್ಮಾನಿಸಲು ಸಾಧ್ಯವಾಗಿಲ್ಲ.
  • ಜೆಎನ್‌ಯುನಂತಹ ಕ್ಯಾಂಪಸ್‌ಗಳ ಚುನಾವಣೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಗಳಲು ಸಾಮಾನ್ಯ. ಆದರೆ, ಅದು ವಿದ್ಯಾರ್ಥಿಗಳು ಇನ್ನೊಬ್ಬ ವಿದ್ಯಾರ್ಥಿಯ ಕಣ್ಮರೆಗೆ ಕಾರಣವಾಗುವ ಮಟ್ಟಿಗೆ ಹೋಗುತ್ತಾರೆ ಎಂದು ತೀರ್ಮಾನಿಸಲು ಆ ಜಗಳಲು ಸರಿಯಾದ ಆಧಾರವಲ್ಲ, ವಿಶೇಷವಾಗಿ ದಾಖಲೆಗಳಲ್ಲಿ ಅದೇ ರೀತಿ ಸೂಚಿಸಲು ಯಾವುದೇ ಪುರಾವೆಗಳಿಲ್ಲದಿದ್ದಾಗ ಎಂದು ನ್ಯಾಯಾಲಯ ಹೇಳಿದೆ.
  • ಕೊನೆಯದಾಗಿ, ನಜೀಬ್ ಅಹ್ಮದ್ ಅವರನ್ನು ಶೀಘ್ರದಲ್ಲೇ ಪತ್ತೆಹಚ್ಚಲಾಗುವುದು ಎಂಬ ಆಶಾ ಭಾವನೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

27 ವರ್ಷದ ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹ್ಮದ್, ಎಬಿವಿಪಿ ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ ದೆಹಲಿ ಪೊಲೀಸರು, ನಂತರ ಸಿಬಿಐ ತನಿಖೆ ನಡೆಸಿದರೂ, ಇಂದಿಗೂ ಅವರು ಎಲ್ಲಿ ಹೋದರೂ ಎಂಬುವುದನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...