Homeಮುಖಪುಟಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

- Advertisement -
- Advertisement -

ಅಕ್ಟೋಬರ್ 15, 2016ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್.30) ಸ್ವೀಕರಿಸಿದೆ.

ಸಿಬಿಐ 2018ರಲ್ಲಿ ತನ್ನ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಪ್ರತಿಭಟನಾ ಅರ್ಜಿಯೊಂದಿಗೆ ಅದನ್ನು ಪ್ರಶ್ನಿಸಿದ್ದರು. ಈ ವಿಷಯವನ್ನು ವಿಲೇವಾರಿ ಮಾಡುವಾಗ, ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ನಿರ್ದೇಶನ ನೀಡಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಪ್ರಸ್ತುತ ಪ್ರಕರಣದ ವಿಚಾರಣೆಯು ಈ ಮುಕ್ತಾಯ ವರದಿಯೊಂದಿಗೆ ಕೊನೆಗೊಂಡರೂ, ನಜೀಬ್ ಅವರ ತಾಯಿ ಮತ್ತು ಇತರ ಪ್ರೀತಿಪಾತ್ರರ ನಿರೀಕ್ಷೆ ಬಗ್ಗೆ ನಮಗೆ ಇನ್ನೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿದೆ. ಈ ಮೂಲಕ ನಜೀಬ್ ಅವರ ಕುಟುಂಬ ಹೊಂದಿರುವ ಭಾವನಾತ್ಮಕ ನೋವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ. ತನಿಖಾ ಯಂತ್ರದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ನಡೆಸಿದ ತನಿಖೆಯು ಅದರ ತಾರ್ಕಿಕ ತೀರ್ಮಾನವನ್ನು ಸಾಧಿಸಲು ಸಾಧ್ಯವಾಗದ ಪ್ರಕರಣಗಳಿವೆ” ಎಂದು ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಸಿಬಿಐ ತನಿಖೆಯಲ್ಲಿನ ಲೋಪಗಳ ಕುರಿತು ನಜೀಬ್ ಅವರ ತಾಯಿ ಎತ್ತಿದ ಎಲ್ಲಾ ಪ್ರಶ್ನೆಗಳನ್ನು ನ್ಯಾಯಾಲಯವು ಪರಿಶೀಲಿಸಿ ತಿರಸ್ಕರಿಸಿದೆ. ಸಂಸ್ಥೆಯು ಸಮಗ್ರ ತನಿಖೆಯನ್ನು ಕೈಗೊಂಡಿದೆ ಮತ್ತು ಎಲ್ಲಾ ತನಿಖಾ ಆಯ್ಕೆಗಳನ್ನು ಬಳಸಿಕೊಂಡಿದೆ ಎಂದಿದೆ.

ನ್ಯಾಯಾಲಯದ ಇತರ ಅವಲೋಕನಗಳು:

  • ನಜೀಬ್ ತನ್ನ ಹಾಸ್ಟೆಲ್ ಕೊಠಡಿಯಿಂದ ಹೊರಬಂದಾಗ, ತನ್ನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಿಟ್ಟು ಹೋಗಿದ್ದರು.
  • ಅವರು ಎಲ್ಲಿದ್ದಾರೆಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುವ ಯಾವುದೇ ಸುಳಿವು ಅಥವಾ ಮಾಹಿತಿ ಹೊರಬಂದಿಲ್ಲ.
  • ನಜೀಬ್ ಅವರ ತಾಯಿ ಮತ್ತು ಅವರ ವೈದ್ಯರ ಹೇಳಿಕೆಗಳು ಅವರು ಪುನರಾವರ್ತಿತ ಖಿನ್ನತೆ ಮತ್ತು ಚಿಂತೆಯಿಂದ ಬಳಲುತ್ತಿದ್ದಾರೆ ಎಂದು ದೃಢಪಡಿಸಿವೆ.
  • ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ನಜೀಬ್ ಹಾಸ್ಟೆಲ್‌ಗೆ ಹಿಂತಿರುಗಲು ನಿರಾಕರಿಸಿದ್ದರು ಎಂಬ ಹೇಳಿಕೆಯು ಊಹಾಪೋಹವಾಗಿಯೇ ಉಳಿದಿದೆ. ಅವರು ಸ್ವಯಂ ಪ್ರೇರಣೆಯಿಂದ ಹಾಸ್ಟೆಲ್ ತೊರೆದಿರಬಹುದು ಎಂಬ ಸಾಧ್ಯತೆಯನ್ನು ಸೂಚಿಸುತ್ತದೆ.
  • ನಜೀಬ್ ಕಣ್ಮರೆಯಾಗುವ ಹಿಂದಿನ ರಾತ್ರಿ ‘ಆತಂಕಕಾರಿ ಘಟನೆ’ ನಡೆದಿದ್ದರೂ, ಶಂಕಿತರು ಅವರ ಕಣ್ಮರೆಯೊಂದಿಗೆ ಯಾವುದೇ ಪಾತ್ರ ಹೊಂದಿದ್ದಾರೆಂದು ತೀರ್ಮಾನಿಸಲು ಸಾಧ್ಯವಾಗಿಲ್ಲ.
  • ಜೆಎನ್‌ಯುನಂತಹ ಕ್ಯಾಂಪಸ್‌ಗಳ ಚುನಾವಣೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಗಳಲು ಸಾಮಾನ್ಯ. ಆದರೆ, ಅದು ವಿದ್ಯಾರ್ಥಿಗಳು ಇನ್ನೊಬ್ಬ ವಿದ್ಯಾರ್ಥಿಯ ಕಣ್ಮರೆಗೆ ಕಾರಣವಾಗುವ ಮಟ್ಟಿಗೆ ಹೋಗುತ್ತಾರೆ ಎಂದು ತೀರ್ಮಾನಿಸಲು ಆ ಜಗಳಲು ಸರಿಯಾದ ಆಧಾರವಲ್ಲ, ವಿಶೇಷವಾಗಿ ದಾಖಲೆಗಳಲ್ಲಿ ಅದೇ ರೀತಿ ಸೂಚಿಸಲು ಯಾವುದೇ ಪುರಾವೆಗಳಿಲ್ಲದಿದ್ದಾಗ ಎಂದು ನ್ಯಾಯಾಲಯ ಹೇಳಿದೆ.
  • ಕೊನೆಯದಾಗಿ, ನಜೀಬ್ ಅಹ್ಮದ್ ಅವರನ್ನು ಶೀಘ್ರದಲ್ಲೇ ಪತ್ತೆಹಚ್ಚಲಾಗುವುದು ಎಂಬ ಆಶಾ ಭಾವನೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

27 ವರ್ಷದ ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹ್ಮದ್, ಎಬಿವಿಪಿ ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ ದೆಹಲಿ ಪೊಲೀಸರು, ನಂತರ ಸಿಬಿಐ ತನಿಖೆ ನಡೆಸಿದರೂ, ಇಂದಿಗೂ ಅವರು ಎಲ್ಲಿ ಹೋದರೂ ಎಂಬುವುದನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...