Homeಮುಖಪುಟಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

- Advertisement -
- Advertisement -

ಅಕ್ಟೋಬರ್ 15, 2016ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್.30) ಸ್ವೀಕರಿಸಿದೆ.

ಸಿಬಿಐ 2018ರಲ್ಲಿ ತನ್ನ ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಪ್ರತಿಭಟನಾ ಅರ್ಜಿಯೊಂದಿಗೆ ಅದನ್ನು ಪ್ರಶ್ನಿಸಿದ್ದರು. ಈ ವಿಷಯವನ್ನು ವಿಲೇವಾರಿ ಮಾಡುವಾಗ, ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ನಿರ್ದೇಶನ ನೀಡಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

“ಪ್ರಸ್ತುತ ಪ್ರಕರಣದ ವಿಚಾರಣೆಯು ಈ ಮುಕ್ತಾಯ ವರದಿಯೊಂದಿಗೆ ಕೊನೆಗೊಂಡರೂ, ನಜೀಬ್ ಅವರ ತಾಯಿ ಮತ್ತು ಇತರ ಪ್ರೀತಿಪಾತ್ರರ ನಿರೀಕ್ಷೆ ಬಗ್ಗೆ ನಮಗೆ ಇನ್ನೂ ಅರ್ಥವಾಗಿಲ್ಲ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿದೆ. ಈ ಮೂಲಕ ನಜೀಬ್ ಅವರ ಕುಟುಂಬ ಹೊಂದಿರುವ ಭಾವನಾತ್ಮಕ ನೋವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ. ತನಿಖಾ ಯಂತ್ರದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ನಡೆಸಿದ ತನಿಖೆಯು ಅದರ ತಾರ್ಕಿಕ ತೀರ್ಮಾನವನ್ನು ಸಾಧಿಸಲು ಸಾಧ್ಯವಾಗದ ಪ್ರಕರಣಗಳಿವೆ” ಎಂದು ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಸಿಬಿಐ ತನಿಖೆಯಲ್ಲಿನ ಲೋಪಗಳ ಕುರಿತು ನಜೀಬ್ ಅವರ ತಾಯಿ ಎತ್ತಿದ ಎಲ್ಲಾ ಪ್ರಶ್ನೆಗಳನ್ನು ನ್ಯಾಯಾಲಯವು ಪರಿಶೀಲಿಸಿ ತಿರಸ್ಕರಿಸಿದೆ. ಸಂಸ್ಥೆಯು ಸಮಗ್ರ ತನಿಖೆಯನ್ನು ಕೈಗೊಂಡಿದೆ ಮತ್ತು ಎಲ್ಲಾ ತನಿಖಾ ಆಯ್ಕೆಗಳನ್ನು ಬಳಸಿಕೊಂಡಿದೆ ಎಂದಿದೆ.

ನ್ಯಾಯಾಲಯದ ಇತರ ಅವಲೋಕನಗಳು:

  • ನಜೀಬ್ ತನ್ನ ಹಾಸ್ಟೆಲ್ ಕೊಠಡಿಯಿಂದ ಹೊರಬಂದಾಗ, ತನ್ನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಿಟ್ಟು ಹೋಗಿದ್ದರು.
  • ಅವರು ಎಲ್ಲಿದ್ದಾರೆಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುವ ಯಾವುದೇ ಸುಳಿವು ಅಥವಾ ಮಾಹಿತಿ ಹೊರಬಂದಿಲ್ಲ.
  • ನಜೀಬ್ ಅವರ ತಾಯಿ ಮತ್ತು ಅವರ ವೈದ್ಯರ ಹೇಳಿಕೆಗಳು ಅವರು ಪುನರಾವರ್ತಿತ ಖಿನ್ನತೆ ಮತ್ತು ಚಿಂತೆಯಿಂದ ಬಳಲುತ್ತಿದ್ದಾರೆ ಎಂದು ದೃಢಪಡಿಸಿವೆ.
  • ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ನಜೀಬ್ ಹಾಸ್ಟೆಲ್‌ಗೆ ಹಿಂತಿರುಗಲು ನಿರಾಕರಿಸಿದ್ದರು ಎಂಬ ಹೇಳಿಕೆಯು ಊಹಾಪೋಹವಾಗಿಯೇ ಉಳಿದಿದೆ. ಅವರು ಸ್ವಯಂ ಪ್ರೇರಣೆಯಿಂದ ಹಾಸ್ಟೆಲ್ ತೊರೆದಿರಬಹುದು ಎಂಬ ಸಾಧ್ಯತೆಯನ್ನು ಸೂಚಿಸುತ್ತದೆ.
  • ನಜೀಬ್ ಕಣ್ಮರೆಯಾಗುವ ಹಿಂದಿನ ರಾತ್ರಿ ‘ಆತಂಕಕಾರಿ ಘಟನೆ’ ನಡೆದಿದ್ದರೂ, ಶಂಕಿತರು ಅವರ ಕಣ್ಮರೆಯೊಂದಿಗೆ ಯಾವುದೇ ಪಾತ್ರ ಹೊಂದಿದ್ದಾರೆಂದು ತೀರ್ಮಾನಿಸಲು ಸಾಧ್ಯವಾಗಿಲ್ಲ.
  • ಜೆಎನ್‌ಯುನಂತಹ ಕ್ಯಾಂಪಸ್‌ಗಳ ಚುನಾವಣೆಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಗಳಲು ಸಾಮಾನ್ಯ. ಆದರೆ, ಅದು ವಿದ್ಯಾರ್ಥಿಗಳು ಇನ್ನೊಬ್ಬ ವಿದ್ಯಾರ್ಥಿಯ ಕಣ್ಮರೆಗೆ ಕಾರಣವಾಗುವ ಮಟ್ಟಿಗೆ ಹೋಗುತ್ತಾರೆ ಎಂದು ತೀರ್ಮಾನಿಸಲು ಆ ಜಗಳಲು ಸರಿಯಾದ ಆಧಾರವಲ್ಲ, ವಿಶೇಷವಾಗಿ ದಾಖಲೆಗಳಲ್ಲಿ ಅದೇ ರೀತಿ ಸೂಚಿಸಲು ಯಾವುದೇ ಪುರಾವೆಗಳಿಲ್ಲದಿದ್ದಾಗ ಎಂದು ನ್ಯಾಯಾಲಯ ಹೇಳಿದೆ.
  • ಕೊನೆಯದಾಗಿ, ನಜೀಬ್ ಅಹ್ಮದ್ ಅವರನ್ನು ಶೀಘ್ರದಲ್ಲೇ ಪತ್ತೆಹಚ್ಚಲಾಗುವುದು ಎಂಬ ಆಶಾ ಭಾವನೆಯನ್ನು ನ್ಯಾಯಾಲಯ ವ್ಯಕ್ತಪಡಿಸಿದೆ.

27 ವರ್ಷದ ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹ್ಮದ್, ಎಬಿವಿಪಿ ಸದಸ್ಯರೊಂದಿಗಿನ ವಾಗ್ವಾದದ ನಂತರ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ ದೆಹಲಿ ಪೊಲೀಸರು, ನಂತರ ಸಿಬಿಐ ತನಿಖೆ ನಡೆಸಿದರೂ, ಇಂದಿಗೂ ಅವರು ಎಲ್ಲಿ ಹೋದರೂ ಎಂಬುವುದನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...