Homeಮುಖಪುಟರಾಜ್ಯಸಭೆ ನಾಮನಿರ್ದೇಶನಕ್ಕೆ ಸಹಿ ಹಾಕಲು ಸಂಜಯ್ ಸಿಂಗ್‌ಗೆ ಕೋರ್ಟ್‌ ಅನುಮತಿ

ರಾಜ್ಯಸಭೆ ನಾಮನಿರ್ದೇಶನಕ್ಕೆ ಸಹಿ ಹಾಕಲು ಸಂಜಯ್ ಸಿಂಗ್‌ಗೆ ಕೋರ್ಟ್‌ ಅನುಮತಿ

- Advertisement -
- Advertisement -

ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರ ರಾಜ್ಯಸಭೆಗೆ ಮರು ನಾಮನಿರ್ದೇಶನಕ್ಕಾಗಿ ದಾಖಲೆಗಳಿಗೆ ಸಹಿ ಹಾಕಲು ದೆಹಲಿ ನ್ಯಾಯಾಲಯವು ಅನುಮತಿ ನೀಡಿದ್ದು, ಸಂಜಯ್ ಸಿಂಗ್ ಅವರ ಅಧಿಕಾರಾವಧಿ ಜನವರಿ 27ಕ್ಕೆ ಕೊನೆಗೊಳ್ಳಲಿದೆ.

ಅರ್ಜಿದಾರರಾದ ಸಂಜಯ್ ಸಿಂಗ್ ಅವರಿಗೆ ರಾಜ್ಯಸಭೆಯಿಂದ ‘ನಿರಾಕ್ಷೇಪಣಾ ಪ್ರಮಾಣ ಪತ್ರ’ ಪಡೆಯುವ ಸಂಬಂಧದ ಅಗತ್ಯವಿರುವ ಪತ್ರಗಳಲ್ಲಿ ಸಿಂಗ್ ಅವರ ಸಹಿ ತೆಗೆದುಕೊಳ್ಳಲು ಅನುಮತಿಗಾಗಿ ದೆಹಲಿಯ ರೂಸ್ ಅವೆನ್ಯೂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಯಿತು.

ರಾಜ್ಯಸಭಾ ಸದಸ್ಯರಾಗಿರುವ ಅವರ ಹಾಲಿ ಅವಧಿ ಜನವರಿ 27ಕ್ಕೆ ಮುಕ್ತಾಯವಾಗುತ್ತಿದ್ದು, ‘ಜನವರಿ 2ರಂದು ಚುನಾವಣೆ ನಡೆಸಲು ಚುನಾವಣಾಧಿಕಾರಿ ನೋಟಿಸ್ ಜಾರಿಗೊಳಿಸಿದ್ದಾರೆ’ ಎಂದು ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಈ ಆದೇಶ ನೀಡಿದ್ದಾರೆ. ನಾಮಪತ್ರಗಳನ್ನು ಜನವರಿ 9 ರೊಳಗೆ ಸಲ್ಲಿಸಬೇಕು ಎನ್ನಲಾಗಿದೆ.

ಅರ್ಜಿಯು ದಾಖಲೆಗಳಿಗೆ ಸಹಿ ಹಾಕಲು ಸಿಂಗ್‌ಗೆ ಅನುಮತಿ ನೀಡುವಂತೆ ತಿಹಾರ್ ಜೈಲು ಅಧೀಕ್ಷಕರಿಂದ ನಿರ್ದೇಶನವನ್ನು ಕೋರಿದೆ.

‘ಜನವರಿ 6, 2024 ರಂದು ಜೈಲು ಅಧಿಕಾರಿಗಳ ಮುಂದೆ ಸಿಂಗ್ ಪರ ವಕೀಲರು ದಾಖಲೆಗಳನ್ನು ಹಾಜರುಪಡಿಸಿದರೆ, ಜೈಲು ಅಧೀಕ್ಷಕರು ಆರೋಪಿಯ ಸಹಿಯನ್ನು ಈ ದಾಖಲೆಗಳಲ್ಲಿ ತೆಗೆದುಕೊಳ್ಳಲು ಅನುಮತಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅವರನ್ನು ಭೇಟಿ ಮಾಡಲು ಸಹ ಅನುಮತಿಸಲಾಗಿದ್ದು, ನಾಮನಿರ್ದೇಶನ ಸಲ್ಲಿಕೆಗೆ ಸಂಬಂಧಿಸಿದಂತೆ ವಿಧಾನಗಳ ಬಗ್ಗೆ ಚರ್ಚಿಸಲು ಅವರ ವಕೀಲರು ಅರ್ಧ ಘಂಟೆ ಸಮಾಯವಾಕಾಶ ನೀಡಬೇಕು’ ಎಂದು ನ್ಯಾಯಾಧೀಶರು ಗುರುವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಮನಿ ಲಾಂಡರಿಂಗ್ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯವು ಅಕ್ಟೋಬರ್ 4 ರಂದು ಸಿಂಗ್ ಅವರನ್ನು ಬಂಧಿಸಿತ್ತು. ಕೆಲವು ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ವಿತ್ತೀಯ ಪರಿಗಣನೆಗಾಗಿ ಲಾಭದಾಯಕವಾದ ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಆದರೆ, ಎಎಪಿ ನಾಯಕರು ಈ ಆರೋಪವನ್ನು ಬಲವಾಗಿ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಸಿದ್ಧತೆ: ಜನವರಿ 7ರಿಂದ ರಾಜ್ಯಗಳಿಗೆ ಚುನಾವಣಾ ಆಯೋಗ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...