Homeಮುಖಪುಟರಾಜ್ಯಸಭೆ ನಾಮನಿರ್ದೇಶನಕ್ಕೆ ಸಹಿ ಹಾಕಲು ಸಂಜಯ್ ಸಿಂಗ್‌ಗೆ ಕೋರ್ಟ್‌ ಅನುಮತಿ

ರಾಜ್ಯಸಭೆ ನಾಮನಿರ್ದೇಶನಕ್ಕೆ ಸಹಿ ಹಾಕಲು ಸಂಜಯ್ ಸಿಂಗ್‌ಗೆ ಕೋರ್ಟ್‌ ಅನುಮತಿ

- Advertisement -
- Advertisement -

ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರ ರಾಜ್ಯಸಭೆಗೆ ಮರು ನಾಮನಿರ್ದೇಶನಕ್ಕಾಗಿ ದಾಖಲೆಗಳಿಗೆ ಸಹಿ ಹಾಕಲು ದೆಹಲಿ ನ್ಯಾಯಾಲಯವು ಅನುಮತಿ ನೀಡಿದ್ದು, ಸಂಜಯ್ ಸಿಂಗ್ ಅವರ ಅಧಿಕಾರಾವಧಿ ಜನವರಿ 27ಕ್ಕೆ ಕೊನೆಗೊಳ್ಳಲಿದೆ.

ಅರ್ಜಿದಾರರಾದ ಸಂಜಯ್ ಸಿಂಗ್ ಅವರಿಗೆ ರಾಜ್ಯಸಭೆಯಿಂದ ‘ನಿರಾಕ್ಷೇಪಣಾ ಪ್ರಮಾಣ ಪತ್ರ’ ಪಡೆಯುವ ಸಂಬಂಧದ ಅಗತ್ಯವಿರುವ ಪತ್ರಗಳಲ್ಲಿ ಸಿಂಗ್ ಅವರ ಸಹಿ ತೆಗೆದುಕೊಳ್ಳಲು ಅನುಮತಿಗಾಗಿ ದೆಹಲಿಯ ರೂಸ್ ಅವೆನ್ಯೂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಯಿತು.

ರಾಜ್ಯಸಭಾ ಸದಸ್ಯರಾಗಿರುವ ಅವರ ಹಾಲಿ ಅವಧಿ ಜನವರಿ 27ಕ್ಕೆ ಮುಕ್ತಾಯವಾಗುತ್ತಿದ್ದು, ‘ಜನವರಿ 2ರಂದು ಚುನಾವಣೆ ನಡೆಸಲು ಚುನಾವಣಾಧಿಕಾರಿ ನೋಟಿಸ್ ಜಾರಿಗೊಳಿಸಿದ್ದಾರೆ’ ಎಂದು ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಈ ಆದೇಶ ನೀಡಿದ್ದಾರೆ. ನಾಮಪತ್ರಗಳನ್ನು ಜನವರಿ 9 ರೊಳಗೆ ಸಲ್ಲಿಸಬೇಕು ಎನ್ನಲಾಗಿದೆ.

ಅರ್ಜಿಯು ದಾಖಲೆಗಳಿಗೆ ಸಹಿ ಹಾಕಲು ಸಿಂಗ್‌ಗೆ ಅನುಮತಿ ನೀಡುವಂತೆ ತಿಹಾರ್ ಜೈಲು ಅಧೀಕ್ಷಕರಿಂದ ನಿರ್ದೇಶನವನ್ನು ಕೋರಿದೆ.

‘ಜನವರಿ 6, 2024 ರಂದು ಜೈಲು ಅಧಿಕಾರಿಗಳ ಮುಂದೆ ಸಿಂಗ್ ಪರ ವಕೀಲರು ದಾಖಲೆಗಳನ್ನು ಹಾಜರುಪಡಿಸಿದರೆ, ಜೈಲು ಅಧೀಕ್ಷಕರು ಆರೋಪಿಯ ಸಹಿಯನ್ನು ಈ ದಾಖಲೆಗಳಲ್ಲಿ ತೆಗೆದುಕೊಳ್ಳಲು ಅನುಮತಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅವರನ್ನು ಭೇಟಿ ಮಾಡಲು ಸಹ ಅನುಮತಿಸಲಾಗಿದ್ದು, ನಾಮನಿರ್ದೇಶನ ಸಲ್ಲಿಕೆಗೆ ಸಂಬಂಧಿಸಿದಂತೆ ವಿಧಾನಗಳ ಬಗ್ಗೆ ಚರ್ಚಿಸಲು ಅವರ ವಕೀಲರು ಅರ್ಧ ಘಂಟೆ ಸಮಾಯವಾಕಾಶ ನೀಡಬೇಕು’ ಎಂದು ನ್ಯಾಯಾಧೀಶರು ಗುರುವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಮನಿ ಲಾಂಡರಿಂಗ್ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯವು ಅಕ್ಟೋಬರ್ 4 ರಂದು ಸಿಂಗ್ ಅವರನ್ನು ಬಂಧಿಸಿತ್ತು. ಕೆಲವು ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ವಿತ್ತೀಯ ಪರಿಗಣನೆಗಾಗಿ ಲಾಭದಾಯಕವಾದ ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಆದರೆ, ಎಎಪಿ ನಾಯಕರು ಈ ಆರೋಪವನ್ನು ಬಲವಾಗಿ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆ ಸಿದ್ಧತೆ: ಜನವರಿ 7ರಿಂದ ರಾಜ್ಯಗಳಿಗೆ ಚುನಾವಣಾ ಆಯೋಗ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...