Homeಮುಖಪುಟಗುಂಪು ಹಲ್ಲೆಯನ್ನು ಸಮರ್ಥಿಸಿದ ಯುವತಿಗೆ ಕುರಾನ್ ಹಂಚುವಂತೆ ಆದೇಶಿಸಿದ ಕೋರ್ಟ್

ಗುಂಪು ಹಲ್ಲೆಯನ್ನು ಸಮರ್ಥಿಸಿದ ಯುವತಿಗೆ ಕುರಾನ್ ಹಂಚುವಂತೆ ಆದೇಶಿಸಿದ ಕೋರ್ಟ್

- Advertisement -
- Advertisement -

ಗುಂಪುಹಲ್ಲೆಯಿಂದ ಮೃತರಾಗಿದ್ದ ತಬ್ರೇಜ್ ಹತ್ಯೆಯನ್ನು ಫೇಸ್ ಬುಕ್ಕಿನಲ್ಲಿ ಸಮರ್ಥಿಸಿ ಬಂಧನಕ್ಕೊಳಗಾಗಿದ್ದ ರಾಂಚಿಯ ರಿಚಾ ಭಾರತಿಗೆ ಅಲ್ಲಿನ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ಅದರೆ ಜಾಮೀನು ನೀಡಲು ವಿಧಿಸಿರುವ ಷರತ್ತು ಮಾತ್ರ ವಿಶೇಷವಾಗಿದೆ.

ಮುಸ್ಲೀಮರ ಭಾವನೆಗಳಿಗೆ ದಕ್ಕೆ ತಂದುದಕ್ಕಾಗಿ ನ್ಯಾಯಾಧೀಶ ಮನೀಶ್ ಸಿಂಗ್ ಅವರು ಆಕೆಗೆ ಹದಿನೈದು ದಿನಗಳ ಒಳಗಾಗಿ ಪವಿತ್ರ ಕುರಾನಿನ ಐದು ಪ್ರತಿಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ದಾನ ಮಾಡುವಂತೆ ಷರತ್ತು ವಿಧಿಸಿದೆ.

ಈ ಕುರಿತ ಮಾತನಾಡಿರುವ ಆರೋಪಿ ಪರ ವಕೀಲರಾದ ರಾಮ್ ಪರ್ವೇಶ್ವರ್ ಸಿಂಗ್ ರವರು “ಒಂದು ಪ್ರತಿಯನ್ನು ದೂರುದಾರ ಸದಾರ್ ಅಂಜುಮಾನ್ ಇಸ್ಲಾಮಿಕ್ ಸಂಘಕ್ಕೆ ನೀಡಿ ರಶೀದ ಪಡೆಯಬೇಕು ಜೊತೆಗೆ ಇನ್ನು ನಾಲ್ಕು ಪ್ರತಿಗಳನ್ನು ಲೈಬ್ರರಿ, ಕಾಲೇಜು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಗೆ ದಾನ ನೀಡಿ ಆ ರಶೀದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ” ಎಂದಿದ್ದಾರೆ.

ಗುಂಪು ಹತ್ಯೆಯನ್ನು ರಿಚಾ ಭಾರತಿ ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದುದ್ದರ ವಿರುದ್ಧ ಪೀಥೋರಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಪೊಲೀಸರು ರಿಚಾರನ್ನು ಬಂಧಿಸಿದ್ದರು. ಇದರಿಂದ ಕುಪಿತಗೊಂಡ ಬಲಪಂಥೀಯ ಸಂಘಟನೆಗಳು, ಸ್ಥಳೀಯ ನಿವಾಸಿಗಳು ಪೊಲೀಸರ ಮೇಲೆ ತೀವ್ರ ರೀತಿಯ ಒತ್ತಡ ತಂದಿದ್ದರು. ಕಳೆದ ಶನಿವಾರ ಪಿಥೋರಿಯಾ ಪೊಲೀಸ್ ಠಾಣೆ ಎದುರು ದೊಡ್ಡ ಪ್ರತಿಭಟನೆ ಸಹ ನಡೆದಿತ್ತು.

ಈಗ ನ್ಯಾಯಾಲಯ ಆಕೆಗೆ ತನ್ನ ತಪ್ಪಿನ ಅರಿವಾಗುವಂತೆ ಮಾಡಲು ಈ ನಿಬಂಧನೆಯನ್ನು ವಿಧಿಸಿದೆ. ಜಾತ್ಯಾತೀತತೆಯ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯೇ ಆಗಿದೆ. ಈ ಹಿಂದೆ 2013ರಲ್ಲಿ ದೆಹಲಿಯ ಹೈಕೋರ್ಟ್ ಶಿಕ್ಷಕಿಯೊಬ್ಬರಿಗೆ ಸುಳ್ಳು ಹೇಳಿದ ಕಾರಣಕ್ಕಾಗಿ ಪ್ರಾಯಶ್ಚಿತವಾಗಿ ಮಹಾತ್ಮ ಗಾಂಧಿಯವರ ಸಮಾಧಿ ಇರುವ ರಾಜ್ ಘಾಟ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸುವಂತೆ ಆದೇಶಿಸಿತ್ತು. ಮತ್ತು ನಿನ್ನೆ ಬಾಲಾಪರಾಧಿಯೊಬ್ಬರು ನಂತರ ಮೆಡಿಕಲ್ ಸ್ಟೂಟೆಂಡ್ ಆದ ನಂತರ ಗಿಡ ನೆಡಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಈಗ ಈ ರಿಚಾ ಭಾರತಿ ರಾಂಚಿ ಕೋರ್ಟಿನ ಆದೇಶವನ್ನು ಯಾವ ರೀತಿ ಪರಿಗಣಿಸುತ್ತಾರೆ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...