Homeಮುಖಪುಟಗುಂಪು ಹಲ್ಲೆಯನ್ನು ಸಮರ್ಥಿಸಿದ ಯುವತಿಗೆ ಕುರಾನ್ ಹಂಚುವಂತೆ ಆದೇಶಿಸಿದ ಕೋರ್ಟ್

ಗುಂಪು ಹಲ್ಲೆಯನ್ನು ಸಮರ್ಥಿಸಿದ ಯುವತಿಗೆ ಕುರಾನ್ ಹಂಚುವಂತೆ ಆದೇಶಿಸಿದ ಕೋರ್ಟ್

- Advertisement -
- Advertisement -

ಗುಂಪುಹಲ್ಲೆಯಿಂದ ಮೃತರಾಗಿದ್ದ ತಬ್ರೇಜ್ ಹತ್ಯೆಯನ್ನು ಫೇಸ್ ಬುಕ್ಕಿನಲ್ಲಿ ಸಮರ್ಥಿಸಿ ಬಂಧನಕ್ಕೊಳಗಾಗಿದ್ದ ರಾಂಚಿಯ ರಿಚಾ ಭಾರತಿಗೆ ಅಲ್ಲಿನ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ಅದರೆ ಜಾಮೀನು ನೀಡಲು ವಿಧಿಸಿರುವ ಷರತ್ತು ಮಾತ್ರ ವಿಶೇಷವಾಗಿದೆ.

ಮುಸ್ಲೀಮರ ಭಾವನೆಗಳಿಗೆ ದಕ್ಕೆ ತಂದುದಕ್ಕಾಗಿ ನ್ಯಾಯಾಧೀಶ ಮನೀಶ್ ಸಿಂಗ್ ಅವರು ಆಕೆಗೆ ಹದಿನೈದು ದಿನಗಳ ಒಳಗಾಗಿ ಪವಿತ್ರ ಕುರಾನಿನ ಐದು ಪ್ರತಿಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ದಾನ ಮಾಡುವಂತೆ ಷರತ್ತು ವಿಧಿಸಿದೆ.

ಈ ಕುರಿತ ಮಾತನಾಡಿರುವ ಆರೋಪಿ ಪರ ವಕೀಲರಾದ ರಾಮ್ ಪರ್ವೇಶ್ವರ್ ಸಿಂಗ್ ರವರು “ಒಂದು ಪ್ರತಿಯನ್ನು ದೂರುದಾರ ಸದಾರ್ ಅಂಜುಮಾನ್ ಇಸ್ಲಾಮಿಕ್ ಸಂಘಕ್ಕೆ ನೀಡಿ ರಶೀದ ಪಡೆಯಬೇಕು ಜೊತೆಗೆ ಇನ್ನು ನಾಲ್ಕು ಪ್ರತಿಗಳನ್ನು ಲೈಬ್ರರಿ, ಕಾಲೇಜು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಗೆ ದಾನ ನೀಡಿ ಆ ರಶೀದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ” ಎಂದಿದ್ದಾರೆ.

ಗುಂಪು ಹತ್ಯೆಯನ್ನು ರಿಚಾ ಭಾರತಿ ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದುದ್ದರ ವಿರುದ್ಧ ಪೀಥೋರಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಪೊಲೀಸರು ರಿಚಾರನ್ನು ಬಂಧಿಸಿದ್ದರು. ಇದರಿಂದ ಕುಪಿತಗೊಂಡ ಬಲಪಂಥೀಯ ಸಂಘಟನೆಗಳು, ಸ್ಥಳೀಯ ನಿವಾಸಿಗಳು ಪೊಲೀಸರ ಮೇಲೆ ತೀವ್ರ ರೀತಿಯ ಒತ್ತಡ ತಂದಿದ್ದರು. ಕಳೆದ ಶನಿವಾರ ಪಿಥೋರಿಯಾ ಪೊಲೀಸ್ ಠಾಣೆ ಎದುರು ದೊಡ್ಡ ಪ್ರತಿಭಟನೆ ಸಹ ನಡೆದಿತ್ತು.

ಈಗ ನ್ಯಾಯಾಲಯ ಆಕೆಗೆ ತನ್ನ ತಪ್ಪಿನ ಅರಿವಾಗುವಂತೆ ಮಾಡಲು ಈ ನಿಬಂಧನೆಯನ್ನು ವಿಧಿಸಿದೆ. ಜಾತ್ಯಾತೀತತೆಯ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯೇ ಆಗಿದೆ. ಈ ಹಿಂದೆ 2013ರಲ್ಲಿ ದೆಹಲಿಯ ಹೈಕೋರ್ಟ್ ಶಿಕ್ಷಕಿಯೊಬ್ಬರಿಗೆ ಸುಳ್ಳು ಹೇಳಿದ ಕಾರಣಕ್ಕಾಗಿ ಪ್ರಾಯಶ್ಚಿತವಾಗಿ ಮಹಾತ್ಮ ಗಾಂಧಿಯವರ ಸಮಾಧಿ ಇರುವ ರಾಜ್ ಘಾಟ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸುವಂತೆ ಆದೇಶಿಸಿತ್ತು. ಮತ್ತು ನಿನ್ನೆ ಬಾಲಾಪರಾಧಿಯೊಬ್ಬರು ನಂತರ ಮೆಡಿಕಲ್ ಸ್ಟೂಟೆಂಡ್ ಆದ ನಂತರ ಗಿಡ ನೆಡಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಈಗ ಈ ರಿಚಾ ಭಾರತಿ ರಾಂಚಿ ಕೋರ್ಟಿನ ಆದೇಶವನ್ನು ಯಾವ ರೀತಿ ಪರಿಗಣಿಸುತ್ತಾರೆ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...