Homeಮುಖಪುಟಜಮ್ಮು-ಕಾಶ್ಮೀರ: ಉಪನ್ಯಾಸಕರಿಗೆ ಏಕೆ ಅಮಾನತು ಮಾಡಲಾಗಿದೆ? ಪ್ರತಿಕಾರವೇ? ಸುಪ್ರೀಂಕೋರ್ಟ್ ಪ್ರಶ್ನೆ

ಜಮ್ಮು-ಕಾಶ್ಮೀರ: ಉಪನ್ಯಾಸಕರಿಗೆ ಏಕೆ ಅಮಾನತು ಮಾಡಲಾಗಿದೆ? ಪ್ರತಿಕಾರವೇ? ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

370ನೇ ವಿಧಿ ರದ್ದತಿಯ ವಿರುದ್ಧ ವಾದ ಮಂಡಿಸಲು ನ್ಯಾಯಾಲಯಕ್ಕೆ ಹಾಜರಾದ ಎರಡೇ  ದಿನಗಳಲ್ಲಿ  ಜಮ್ಮು-ಕಾಶ್ಮೀರದ  ಶಿಕ್ಷಣ ಇಲಾಖೆ ಉಪನ್ಯಾಸಕರನ್ನು ಏಕೆ ಅಮಾನತುಗೊಳಿಸಿದೆ ಎಂಬುವುದನ್ನು  ಜಮ್ಮು &  ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡುವಂತೆ ಕೇಂದ್ರದ ಉನ್ನತ ಕಾನೂನು ಅಧಿಕಾರಿ(ಎಜಿ)ಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ನ್ಯಾಯಾಲಯದ ಮುಂದೆ ಉಪನ್ಯಾಸಕರ ಹಾಜರಾಗಿದ್ಗಕ್ಕೆ ಅಮಾನತು ಮಾಡಲಾಗಿದೆಯಾ? ಇದು ಪ್ರತಿಕಾರದಂತೆ ಕಾಣುತ್ತದೆ  ಎಂದು ನ್ಯಾಯಾಲಯ ಹೇಳಿದೆ.

ಕಾನೂನು ಪದವಿ ಹೊಂದಿರುವ ಹಿರಿಯ ರಾಜ್ಯಶಾಸ್ತ್ರ ಉಪನ್ಯಾಸಕ ಜಹೂರ್ ಅಹ್ಮದ್ ಭಟ್  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ಹಾಜರಾಗಿ  370ನೇ ವಿಧಿ ರದ್ಧತಿ ಬಗ್ಗೆ ವಾದ ಮಂಡಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಶುಕ್ರವಾರ, ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವಾ ನಿಯಮಗಳು, ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರ ನಡವಳಿಕೆ ನಿಯಮಗಳು ಮತ್ತು ಜಮ್ಮು ಮತ್ತು ಕಾಶ್ಮೀರ ರಜೆ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ತಕ್ಷಣವೇ ಜಾರಿಗೆ ಬರುವಂತೆ ಜಹೂರ್ ಅಹ್ಮದ್ ಭಟ್ ಅವರನ್ನು ಅಮಾನತುಗೊಳಿಸಿ ಜಮ್ಮು ಮತ್ತು ಕಾಶ್ಮೀರದ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಅಮಾನತು ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿರುವ ಹಿರಿಯ ವಕೀಲ ಕಪಿಲ್ ಸಿಬಲ್, ಇಲ್ಲಿಗೆ ಬಂದು 5 ನಿಮಿಷಗಳ ಕಾಲ ವಾದ ಮಂಡಿಸಿದ ಉಪನ್ಯಾಸಕ ಅಮಾನತುಗೊಂಡಿದ್ದಾರೆ. ಅವರು ಎರಡು ದಿನ ರಜೆ ತೆಗೆದುಕೊಂಡಿದ್ದರು. ವಾಪಾಸ್ಸು ಹೋಗುವಾಗ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ  ಮುಖ್ಯ ನ್ಯಾಯಮೂರ್ತಿ ಅವರು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ಸಮಸ್ಯೆ ಬಗ್ಗೆ ಪರಿಶೀಲಿಸುವಂತೆ  ಹೇಳಿದ್ದಾರೆ.  AG ಏನಾಯಿತು ಎಂದು ನೋಡಿ. ಈ ನ್ಯಾಯಾಲಯಕ್ಕೆ ಹಾಜರಾಗಿದ್ದ ಓರ್ವರು ಈಗ ಅಮಾನತುಗೊಂಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಿ ಎಂದು ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಮಾನತು ಬೇರೆ ವಿಷಯಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. ಆಗಿದ್ದರೆ ಅಮಾನತು ಮೊದಲೇ ಆಗಬೇಕಿತ್ತು ಎಂದು ಕಪಿಲ್ ಸಿಬಲ್ ಕೋರ್ಟ್ ಗೆ ಹೇಳಿದ್ದಾರೆ.

ಈ ಬಗ್ಗೆ ಕ್ರಮವು ಪ್ರತೀಕಾರವಾಗಿರಬಹುದು ಎಂದ ನ್ಯಾಯಮೂರ್ತಿ ಬಿಆರ್ ಗವಾಯಿ, ಇಲ್ಲಿ ಕಾಣಿಸಿಕೊಂಡ ಕಾರಣ ಅದು ಸಂಭವಿಸಿದರೆ ಅದು ನಿಜವಾಗಿಯೂ ಪ್ರತೀಕಾರ ಎಂದು ಅವರು ಹೇಳಿದರು.

ಭಟ್ ಅವರು ಕೋರ್ಟ್ ಮುಂದೆ 5 ನಿಮಿಷಗಳ ಕಾಲ ಹಾಜರಾಗಿ, 2019ರಲ್ಲಿ 370 ವಿಧಿ ರದ್ಧತಿ ಬಳಿಕ ಜಮ್ಮು ಮತ್ತು ಕಾಶ್ಮೀರದ ಮಕ್ಕಳಿಗೆ  ರಾಜಕೀಯ ಶಾಸ್ತ್ರ ವಿಷಯ ಬೋಧಿಸುವುದು ಕಷ್ಟವಾಗಿದೆ. ಮಕ್ಕಳು ಈಗ ಇಲ್ಲಿ ಪ್ರಜಾಪ್ರಭತ್ವ ಇದೆಯಾ ಎಂದು ಪಶ್ನಿಸುತ್ತಿದ್ದಾರೆ. ಭಟ್ ಅವರು ವಾದಿಸುತ್ತಾ 370ನೇ ವಿಧಿ ರದ್ಧತಿ ಸಂವಿಧಾನದ ತತ್ವಕ್ಕೆ ವಿರುದ್ಧವಾಗಿದೆ ಎಂದು ಕೋರ್ಟ್ ಮುಂದೆ ವಾದಿಸಿದ್ದರು.

ಇದನ್ನು ಓದಿ: ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ: ವಿಚಿತ್ರ ಆಗ್ರಹ ಮುಂದಿಟ್ಟ ಹಿಂದೂ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...