Homeಮುಖಪುಟಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

- Advertisement -
- Advertisement -

ತಮಿಳುನಾಡು ಸರ್ಕಾರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್‌ಇಪಿ) ಮತ್ತು ಅದರ ‘ತ್ರಿಭಾಷಾ ಸೂತ್ರ’ವನ್ನು ಜಾರಿಗೊಳಿಸುವಂತೆ ನಿರ್ದೇಶಿಸಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಶುಕ್ರವಾರ (ಮೇ.9) ವಜಾಗೊಳಿಸಿದೆ.

ಸಂವಿಧಾನದ 32ನೇ ವಿಧಿಯಡಿಯಲ್ಲಿ ಯಾವುದೇ ರಾಜ್ಯ ಎನ್‌ಇಪಿ ಅಳವಡಿಸಿಕೊಳ್ಳುವಂತೆ ಒತ್ತಾಯಿಸಿ ನ್ಯಾಯಾಲಯ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ಹೇಳಿದೆ.

ಜಿ.ಎಸ್ ಮಣಿ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು ಹೀಗೆ ಹೇಳಿದೆ:

“ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ, 2020 ಅನ್ನು ಅಳವಡಿಸಿಕೊಳ್ಳಬೇಕೇ ಅಥವಾ ಬೇಡವೇ ಎಂಬುದು ಒಂದು ಸಂಕೀರ್ಣ ವಿಷಯವಾಗಿದೆ. ಸಂವಿಧಾನದ 32ನೇ ವಿಧಿಯ ಮೂಲಕ ಸುಪ್ರೀಂ ಕೋರ್ಟ್ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಬಹುದು. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ 2020ರಂತಹ ನೀತಿಯನ್ನು ಅಳವಡಿಸಿಕೊಳ್ಳಲು ರಾಜ್ಯವನ್ನು ನೇರವಾಗಿ ಒತ್ತಾಯಿಸಲು ಸಾಧ್ಯವಿಲ್ಲ. ಆದಾಗ್ಯೂ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದ ರಾಜ್ಯದ ಕ್ರಮ ಅಥವಾ ನಿಷ್ಕ್ರಿಯತೆಯು ಯಾವುದೇ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ನ್ಯಾಯಾಲಯವು ಮಧ್ಯಪ್ರವೇಶಿಸಬಹುದು. ಈ ಅರ್ಜಿಯಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾದ ಬಗ್ಗೆ ಪ್ರಸ್ತಾಪಿಸಿಲ್ಲ. ಹಾಗಾಗಿ, ಈ ಬಗ್ಗೆ ಪರಿಶೀಲಿಸಲು ಸೂಚಿಸುವ ಅಗತ್ಯವಿಲ್ಲ. ಅರ್ಜಿದಾರರು ತಮಿಳುನಾಡು ರಾಜ್ಯದವರಾಗಿರಬಹುದು. ಆದರೆ, ಅವರ ಸ್ವಂತ ಒಪ್ಪಿಗೆಯ ಮೇರೆಗೆ, ಅವರು ಈಗ ನವದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ, ಈ ಅರ್ಜಿಯನ್ನು ವಜಾಗೊಳಿಸಲಾಗಿದೆ.”

“ಪಿಐಎಲ್‌ನ ಮುಖ್ಯ ವಿಷಯವನ್ನು ನ್ಯಾಯಾಲಯವು ಸೂಕ್ತ ಕ್ರಮದಲ್ಲಿ ಪರಿಶೀಲಿಸಬಹುದು” ಎಂದು ಇದೇ ವೇಳೆ ನ್ಯಾಯಪೀಠ ಹೇಳಿದೆ.

ಅಲ್ಲದೆ, ತಕ್ಷಣ ವಿಷಯವನ್ನು ಕೈಗೆತ್ತಿಕೊಂಡಿದೆ. ಈ ವೇಳೆ ಖುದ್ದಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ಅರ್ಜಿದಾರರನ್ನು, “ನೀವು ಯಾರು? ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ನಿಮಗೆ ಏಕೆ ಕಾಳಜಿ ಅಥವಾ ಯಾವ ರೀತಿಯ ಕಾಳಜಿ? ಎಂದು ಪೀಠ ಪ್ರಶ್ನಿಸಿದೆ.

ಅದಕ್ಕೆ ಉತ್ತರಿಸಿದ ಅರ್ಜಿದಾರ, “ತಾನು ತಮಿಳುನಾಡಿನವನು, ಈಗ ದೆಹಲಿಯಲ್ಲಿ ನೆಲೆಸಿದ್ದೇನೆ. ಹಿಂದಿ ಕಲಿಸುವುದಿಲ್ಲ ಎಂಬ ತಮಿಳುನಾಡಿನ ನೀತಿಯಿಂದಾಗಿ, ತನಗೆ ಸುಲಭವಾಗಿ ಹಿಂದಿ ಕಲಿಯಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಪಾರ್ದಿವಾಲಾ ಅವರು, “ಈಗ ದೆಹಲಿಯಲ್ಲಿ ಇದ್ದೀರಲ್ವ ಹಿಂದಿ ಕಲಿಯಿರಿ” ಎಂದು ಹೇಳಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಎನ್‌ಇಪಿಗೆ ಜಾರಿಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2020ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿಯನ್ನು (ಎನ್‌ಇಪಿ) ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಎನ್‌ಇಪಿಯ ತ್ರಿಭಾಷ ಸೂತ್ರ ಹಿಂದಿ ಹೇರಿಕೆಯ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...