Homeಕರ್ನಾಟಕಉಳಿದು ಹೋದ ಪ್ರಶ್ನೆ: ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುವುದನ್ನು ಮಾಧ್ಯಮ ಸಂಸ್ಥೆಗಳೇಕೆ ಕೋರ್ಟಿನಲ್ಲಿ ಪ್ರಶ್ನಿಸಲಿಲ್ಲ?

ಉಳಿದು ಹೋದ ಪ್ರಶ್ನೆ: ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುವುದನ್ನು ಮಾಧ್ಯಮ ಸಂಸ್ಥೆಗಳೇಕೆ ಕೋರ್ಟಿನಲ್ಲಿ ಪ್ರಶ್ನಿಸಲಿಲ್ಲ?

- Advertisement -
- Advertisement -

ಮಾಧ್ಯಮ ಸಂಸ್ಥೆಗಳ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿದ ಹೈಕೋರ್ಟ್ ಆದೇಶ ಇಂದು ಹೊರಬಿದ್ದಿದೆ. ಆದರೆ, ಇದು ಮಾಧ್ಯಮ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಬದ್ಧತೆಯ ಕುರಿತೂ ಹಲವು ಪ್ರಶ್ನೆಗಳನ್ನು ಎಬ್ಬಿಸುತ್ತಿದೆ.

ರಾಜ್ಯದ ಮತ್ತು ದೇಶದ ಪ್ರಮುಖ ಮಾಧ್ಯಮ ಸಂಸ್ಥೆಗಳೆಲ್ಲವುಗಳ ಮೇಲೆ ಬೆಂ.ದ. ಅಭ್ಯರ್ಥಿ ತೇಜಸ್ವಿ ಸೂರ್ಯ ನಿರ್ಬಂಧದ ಆದೇಶ ತಂದಿದ್ದರು. ತನ್ನ ಮೇಲೆ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸಬಾರದು ಎಂಬುದು ಅವರು ಕೇಸು ಹಾಕಿದ ಉದ್ದೇಶವಾಗಿತ್ತು. ಮೇಲ್ನೋಟಕ್ಕೇ ಅವರು ಮಾನಹಾನಿ ಮಾಡಿಕೊಳ್ಳುವಂತಹ ಪ್ರಕರಣಗಳಲ್ಲಿ ಭಾಗಿಯಾದದ್ದು ಕಾಣುತ್ತಿತ್ತು. ಅದರಲ್ಲೂ ಮಹಿಳೆಯರಿಗೆ ಕಿರುಕುಳ, ವಂಚನೆ ಇತ್ಯಾದಿ ಗಂಭೀರ ಪ್ರಕರಣಗಳು ಅವಾಗಿದ್ದವು.

ಇದನ್ನು ಬಹಿರಂಗಪಡಿಸಿದ ಮಹಿಳೆ, ಆತನಿಂದ ಇಂತಹ ವಂಚನೆಗೊಳಗಾದವರಲ್ಲಿ ತಾನು ಮೊದಲನೆಯವಳೂ ಅಲ್ಲ, ಕೊನೆಯವಳೂ ಅಲ್ಲ ಎಂದೂ ಹೇಳಿದ್ದರು. ಲೋಕಸಭಾ ಅಭ್ಯರ್ಥಿಯಾಗಿ ರಾಷ್ಟ್ರೀಯ ಪಕ್ಷವೊಂದರಿಂದ ನಿಯೋಜಿತಗೊಂಡ ವ್ಯಕ್ತಿಯ ಕುರಿತ ಇಂತಹ ಸುದ್ದಿಗಳು ನಿಜಕ್ಕೂ ಗಾಬರಿಗೊಳಿಸುತ್ತಿದ್ದವು.

ಜೊತೆಗೆ ಈ ಸುದ್ದಿಗಳನ್ನು ತಿಳಿದುಕೊಳ್ಳುವುದು ಮತದಾರರ ಹಕ್ಕೂ ಆಗಿತ್ತು. ಅದನ್ನು ನಿರ್ಬಂಧಿಸಿದ ಕೋರ್ಟ್ ತೀರ್ಪು ಖಂಡನೆಗೆ ಒಳಗಾಗಿತ್ತು. ಆದೇಶ ಬಂದ ಕೆಲ ದಿನಗಳ ನಂತರ ಮೊದಲು ಇಂಡಿಯನ್ ಎಕ್ಸ್‍ಪ್ರೆಸ್ ನಿರ್ಬಂಧ ಖಂಡಿಸಿ ಸಂಪಾದಕೀಯ ಬರೆಯಿತು. ಅದಾದ ಇನ್ನೂ ಕೆಲ ದಿನಗಳ ನಂತರ ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಗಳು ಸಂಪಾದಕೀಯ ಬರೆದವು. ಆದರೆ, ಉಳಿದ ಸಂಸ್ಥೆಗಳು ಅದರ ಗೋಜಿಗೇ ಹೋಗಲಿಲ್ಲ.

ಇಲ್ಲೇ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ, ಯಾವೊಂದು ಮಾಧ್ಯಮ ಸಂಸ್ಥೆಯೂ ಇದನ್ನು ಕೋರ್ಟಿನಲ್ಲಿ ಪ್ರಶ್ನಿಸುವ ಗೋಜಿಗೆ ಹೋಗಲಿಲ್ಲ. ಅಂದರೆ ಮಾಧ್ಯಮ ಸಂಸ್ಥೆಗಳು ತಮ್ಮ ಸ್ವಾತಂತ್ರ್ಯದ ಕುರಿತು ಅಷ್ಟು ಗಂಭೀರವಾಗಿಲ್ಲವೇ ಎಂಬ ಪ್ರಶ್ನೆ ಏಳುತ್ತದೆ.
ಹೈಕೋರ್ಟ್ ಮೊಕದ್ದಮೆಯಲ್ಲಿ ತೇಜಸ್ವಿ ಪರ ವಕೀಲ ಅಶೋಕ್ ಹಾರನಹಳ್ಳಿ ಅವರು ಮುಂದಿಟ್ಟಿರುವ ವಾದವನ್ನು ನೋಡಿದಾಗಲೂ ಇದು ಉದ್ಭವಿಸುತ್ತದೆ. ಅವರ ಪ್ರಕಾರ ‘ಅರ್ಜಿದಾರರು (ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ತ್ರಿಲೋಚನ್ ಶಾಸ್ತ್ರಿ) ಅಸಲು ದಾವೆಯ ಪ್ರತಿವಾದಿಗಳಲ್ಲ. ಈ ಪ್ರಕರಣದ ಯಾವೊಬ್ಬ ಪ್ರತಿವಾದಿಯೂ ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿಲ್ಲ’. ಹೌದು ಏಕೆಂದರೆ ಅಸಲು ದಾವೆಯ ಪ್ರತಿವಾದಿಗಳಿಗೆ ಇದು ಅಷ್ಟು ಮುಖ್ಯ ಎನಿಸೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...