Homeಮುಖಪುಟನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

ನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಾಣಾವತ್ ಟ್ವೀಟ್ ಮಾಡಿದ್ದರು.

- Advertisement -
- Advertisement -

ವಿವಾದಿತ ರೈತ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯ ನಿರ್ದೇಶಿಸಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.

ನ್ಯಾಯಾಧೀಶ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ಎಫ್‌ಐಆರ್‌ ದಾಖಲಿಸಲು ನಿರ್ದೇಶನ ನೀಡಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಾಣಾವತ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರೈತರು ಮೋದಿಗೆ ಕೃತಜ್ಞತೆ ಹೇಳುತ್ತಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೊಂಡ ಬಿಜೆಪಿ ನಾಯಕ!

ಕಂಗನಾ ವಿರುದ್ಧ ಡಿಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಮಕೂರು ತಾಲ್ಲೂಕು ಕದರನಹಳ್ಳಿ ತಾಂಡಾ ವಾಸಿ ಹಾಗೂ ಹೈಕೋರ್ಟ್ ವಕೀಲ ಎಲ್‌.ರಮೇಶ್ ನಾಯಕ್ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು.

2020 ರ ಸೆಪ್ಟೆಂಬರ್ 21 ರಂದು ರಾಣಾವತ್ ತನ್ನ ಟ್ವಿಟ್ಟರ್ ಖಾತೆ ‘ಕಂಗನಾಟೀಮ್’ ನಿಂದ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 156 (3) ರ ಅಡಿಯಲ್ಲಿ ವಕೀಲ ಎಲ್. ರಮೇಶ್ ನಾಯಕ್ ದೂರು ದಾಖಲಿಸಿದ್ದರು.

ನಟಿಯ ವಿರುದ್ಧ ಪೊಲೀಸ್ ಅಧಿಕಾರಿಗಳು ಅಥವಾ ಸರ್ಕಾರ ಯಾವುದೇ ಕ್ರಮವನ್ನು ತೆಗೆದುಕೊಳ್ಳದ ಹಿನ್ನೆಲೆ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಅಥವಾ ನ್ಯಾಯಾಲಯವೇ ನೇರವಾಗಿ ಕ್ರಮಕೈಗೊಳ್ಳಬೇಕು ಎಂದು ರಮೇಶ್ ನಾಯಕ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ನಟಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ, 504, 108 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ದೂರುದಾರರು ಕೋರಿದ್ದಾರೆ.

ನಟಿಯ ಟ್ವೀಟ್ ವಿರುದ್ಧ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ರೈತ ಸಂಘಟನೆಗಳು, ರೈತ ಪರ ಹೋರಾಟಗಾರರು ಆಕ್ರೋಶ ಹೊರಹಾಕಿದ್ದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...