Homeಚಳವಳಿಪತ್ರಕರ್ತ ಸಿದ್ದೀಕ್ ಕಪ್ಪನ್ ವಿರುದ್ದ ದಾಖಲಾದ ಆರೋಪ ಕೈಬಿಟ್ಟ ಕೋರ್ಟ್

ಪತ್ರಕರ್ತ ಸಿದ್ದೀಕ್ ಕಪ್ಪನ್ ವಿರುದ್ದ ದಾಖಲಾದ ಆರೋಪ ಕೈಬಿಟ್ಟ ಕೋರ್ಟ್

- Advertisement -
- Advertisement -

ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಮಂಗಳವಾರ ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.

ಯುಪಿಯ ಹತ್ರಾಸ್‌‌ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ಅಕ್ಟೋಬರ್‌ 5 ರಂದು ತೆರಳಿದ್ದ ಸಿದ್ದೀಕ್ ಕಪ್ಪನ್‌ ಅವರನ್ನು, ದಾರಿ ಮಧ್ಯದಲ್ಲಿ ಪಿಎಫ್‌ಐ ಜೊತೆಗೆ ಸಂಪರ್ಕವಿದೆ ಎಂದು ಶಂಕಿಸಿ ಬಂಧಿಸಲಾಗಿತ್ತು. ಅವರ ಜೊತೆಗೆ ಅವರೊಂದಿಗೆ ಇದ್ದ ಮೂವರನ್ನೂ ಬಂಧಿಸಲಾಗಿತ್ತು.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ಅವರ ಭೇಟಿಯಿಂದಾಗಿ, ಶಾಂತಿ ಕದಡುವ ಅಪಾಯವಿದೆ ಎಂಬ ಕಾರಣ ನೀಡಿ ಬಂಧಿಸಲಾಗಿತ್ತು. ಆದರೆ ನಂತರ ದೇಶದ್ರೋಹ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನು(ಯುಎಪಿಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಉಲ್ಲಂಘನೆಯ ಆರೋಪಗಳನ್ನು ಹೊರಿಸಲಾಗಿತ್ತು.

ಕಾನೂನಿನಡಿಯಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವ ಮಿತಿ ಮುಗಿದ ಕಾರಣ, ನಾಲ್ವರು ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಕೈಬಿಡಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ತಿಳಿಸಿದ್ದಾರೆ.

ಇಂದು ಮಾಧ್ಯಮದ ಜೊತೆ ಮಾತನಾಡಿದ ಪತ್ರಕರ್ತ ಸಿದ್ದೀಕ್ ಕಪ್ಪನ್, “ನಾನು ಇನ್ನೂ ನಮ್ಮ ಸಂವಿಧಾನವನ್ನು ನಂಬಿದ್ದೇನೆ, ಆದರೆ ನ್ಯಾಯವನ್ನು ವಿಳಂಬ ಮಾಡಲಾಗಿದೆ. ಇದು ನಕಲಿ ಪ್ರಕರಣ, ಸಂಪೂರ್ಣ ನಕಲಿ ಪ್ರಕರಣ” ಎಂದು ಹೇಳಿದ್ದಾರೆ.

ಇದೇ ವೇಳೆ ಮತ್ತೊಬ್ಬ ಆರೋಪಿ ಮಾತನಾಡಿ, “ನಮಗೆ ಯಾರೊಂದಿಗೂ ಸಂಪರ್ಕವಿಲ್ಲ, ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಯೋಗಿ ಸರ್ಕಾರ ಸರ್ವಾಧಿಕಾರ ನಡೆಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ), 124 ಎ (ದೇಶದ್ರೋಹ), ಐಪಿಸಿಯ 120 ಬಿ (ಪಿತೂರಿ), ಯುಎಪಿಎ 17/18 (ಭಯೋತ್ಪಾದಕ ಕೃತ್ಯಕ್ಕಾಗಿ ಹಣವನ್ನು ಸಂಗ್ರಹಿಸುವುದು) ಮತ್ತು ಐಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳು ಕಳೆದ ಅಕ್ಟೋಬರ್ 7 ರಿಂದ ಜೈಲಿನಲ್ಲಿದ್ದಾರೆ.

ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರು ಪಿಎಫ್‌ಐ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಹತ್ರಾಸ್‌ನಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದಿಕ್ ಕಪ್ಪನ್ ಪ್ರಕರಣದಲ್ಲಿ ಆರೋಪಿ ಪದ ಬಳಸುವಂತಿಲ್ಲ. ಅವ್ರು ಆಪಾಧಿತರು.

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...