Homeಚಳವಳಿಪತ್ರಕರ್ತ ಸಿದ್ದೀಕ್ ಕಪ್ಪನ್ ವಿರುದ್ದ ದಾಖಲಾದ ಆರೋಪ ಕೈಬಿಟ್ಟ ಕೋರ್ಟ್

ಪತ್ರಕರ್ತ ಸಿದ್ದೀಕ್ ಕಪ್ಪನ್ ವಿರುದ್ದ ದಾಖಲಾದ ಆರೋಪ ಕೈಬಿಟ್ಟ ಕೋರ್ಟ್

- Advertisement -
- Advertisement -

ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಮಂಗಳವಾರ ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.

ಯುಪಿಯ ಹತ್ರಾಸ್‌‌ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ಅಕ್ಟೋಬರ್‌ 5 ರಂದು ತೆರಳಿದ್ದ ಸಿದ್ದೀಕ್ ಕಪ್ಪನ್‌ ಅವರನ್ನು, ದಾರಿ ಮಧ್ಯದಲ್ಲಿ ಪಿಎಫ್‌ಐ ಜೊತೆಗೆ ಸಂಪರ್ಕವಿದೆ ಎಂದು ಶಂಕಿಸಿ ಬಂಧಿಸಲಾಗಿತ್ತು. ಅವರ ಜೊತೆಗೆ ಅವರೊಂದಿಗೆ ಇದ್ದ ಮೂವರನ್ನೂ ಬಂಧಿಸಲಾಗಿತ್ತು.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ಅವರ ಭೇಟಿಯಿಂದಾಗಿ, ಶಾಂತಿ ಕದಡುವ ಅಪಾಯವಿದೆ ಎಂಬ ಕಾರಣ ನೀಡಿ ಬಂಧಿಸಲಾಗಿತ್ತು. ಆದರೆ ನಂತರ ದೇಶದ್ರೋಹ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನು(ಯುಎಪಿಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಉಲ್ಲಂಘನೆಯ ಆರೋಪಗಳನ್ನು ಹೊರಿಸಲಾಗಿತ್ತು.

ಕಾನೂನಿನಡಿಯಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವ ಮಿತಿ ಮುಗಿದ ಕಾರಣ, ನಾಲ್ವರು ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಕೈಬಿಡಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ತಿಳಿಸಿದ್ದಾರೆ.

ಇಂದು ಮಾಧ್ಯಮದ ಜೊತೆ ಮಾತನಾಡಿದ ಪತ್ರಕರ್ತ ಸಿದ್ದೀಕ್ ಕಪ್ಪನ್, “ನಾನು ಇನ್ನೂ ನಮ್ಮ ಸಂವಿಧಾನವನ್ನು ನಂಬಿದ್ದೇನೆ, ಆದರೆ ನ್ಯಾಯವನ್ನು ವಿಳಂಬ ಮಾಡಲಾಗಿದೆ. ಇದು ನಕಲಿ ಪ್ರಕರಣ, ಸಂಪೂರ್ಣ ನಕಲಿ ಪ್ರಕರಣ” ಎಂದು ಹೇಳಿದ್ದಾರೆ.

ಇದೇ ವೇಳೆ ಮತ್ತೊಬ್ಬ ಆರೋಪಿ ಮಾತನಾಡಿ, “ನಮಗೆ ಯಾರೊಂದಿಗೂ ಸಂಪರ್ಕವಿಲ್ಲ, ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಯೋಗಿ ಸರ್ಕಾರ ಸರ್ವಾಧಿಕಾರ ನಡೆಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ), 124 ಎ (ದೇಶದ್ರೋಹ), ಐಪಿಸಿಯ 120 ಬಿ (ಪಿತೂರಿ), ಯುಎಪಿಎ 17/18 (ಭಯೋತ್ಪಾದಕ ಕೃತ್ಯಕ್ಕಾಗಿ ಹಣವನ್ನು ಸಂಗ್ರಹಿಸುವುದು) ಮತ್ತು ಐಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳು ಕಳೆದ ಅಕ್ಟೋಬರ್ 7 ರಿಂದ ಜೈಲಿನಲ್ಲಿದ್ದಾರೆ.

ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರು ಪಿಎಫ್‌ಐ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಹತ್ರಾಸ್‌ನಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದಿಕ್ ಕಪ್ಪನ್ ಪ್ರಕರಣದಲ್ಲಿ ಆರೋಪಿ ಪದ ಬಳಸುವಂತಿಲ್ಲ. ಅವ್ರು ಆಪಾಧಿತರು.

LEAVE A REPLY

Please enter your comment!
Please enter your name here

- Advertisment -

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...