Homeಮುಖಪುಟಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಕ್ಕೆ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ನೀಡಿದ್ದ ಕ್ರಿಮಿನಲ್ ದೂರನ್ನು ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲಾ ನ್ಯಾಯಾಲಯ ಮಂಗಳವಾರ (ಮೇ.6) ವಜಾಗೊಳಿಸಿದೆ ಎಂದು livelaw.in ವರದಿ ಮಾಡಿದೆ.

ಅಯೋಧ್ಯೆಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ (ಸೀನಿಯರ್ ವಿಭಾಗ) ಏಕ್ತಾ ಸಿಂಗ್ ಅವರು ದೂರು ವಿಚಾರಣೆಗೆ ಅರ್ಹವಲ್ಲ ಮತ್ತು ದೂರುದಾರರಿಗೆ ದೂರು ನೀಡಲು ನಿರ್ದಿಷ್ಟ ಸ್ಥಳವಿಲ್ಲ ಎಂದು ಹೇಳಿದ್ದಾರೆ.

ಶಿವೇಂದ್ರ ಸಿಂಗ್ ಎಂಬವರು ಬಿಎನ್‌ಎಸ್‌ಎಸ್ ಸೆಕ್ಷನ್ 210ರ (ನ್ಯಾಯಾಧೀಶರಿಂದ ಅಪರಾಧಗಳ ಸಂಜ್ಞೆ) ಅಡಿಯಲ್ಲಿ ನೇಹಾ ಸಿಂಗ್ ವಿರುದ್ದ ಅಯೋಧ್ಯೆ ಜಿಲ್ಲಾ ನ್ಯಾಯಾಲಯಕ್ಕೆ ದೂರ ನೀಡಿದ್ದರು. ವಕೀಲ ಮಾರ್ತಾಂಡ ಪ್ರತಾಪ್ ಸಿಂಗ್ ಶಿವೇಂದ್ರ ಸಿಂಗ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

“ಸಾರ್ವಜನಿಕ ಶಾಂತಿಯನ್ನು ಕದಡಲು ಮತ್ತು ಚುನಾವಣಾ ಲಾಭ ಪಡೆಯಲು ನೇಹಾ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಗೂ ‘ಸುಳ್ಳು’ ಸಂಬಂಧ ಕಲ್ಪಿಸಿದ್ದಾರೆ” ಎಂದು ಶಿವೇಂದ್ರ ಸಿಂಗ್ ತನ್ನ ದೂರಿನಲ್ಲಿ ಆರೋಪಿಸಿದ್ದರು.

“ನೇಹಾ ಸಿಂಗ್ ಅವರ ಸುಳ್ಳು ಮತ್ತು ಕಾನೂನುಬಾಹಿರ ಹೇಳಿಕೆಗಳು ರಾಷ್ಟ್ರವ್ಯಾಪಿ ಅಶಾಂತಿಯನ್ನು ಸೃಷ್ಟಿಸಿವೆ. ಇದು ದೇಶವನ್ನು ಅಂತರ್ಯುದ್ಧದತ್ತ ತಳ್ಳಿದೆ. ಅವರ ಕೃತ್ಯಗಳು ದೇಶದ್ರೋಹಕ್ಕೆ ಸಮಾನಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ” ಎಂದು ಹೇಳಿದ್ದರು.

“ನೇಹಾ ಅವರ ‘ಅಸಭ್ಯ’ ಮತ್ತು ‘ಅವಹೇಳನಕಾರಿ’ ಹೇಳಿಕೆಗಳು ಆಡಳಿತಾರೂಢ ಬಿಜೆಪಿ ನಾಯಕರ ವರ್ಚಸ್ಸಿಗೆ ಕಳಂಕ ತಂದಿವೆ. ದೇಶದಲ್ಲಿ ನಡೆಯುವ ಹೆಚ್ಚಿನ ಭಯೋತ್ಪಾದಕ ದಾಳಿಗಳಿಗೆ ಬಿಜೆಪಿಯೇ ಕಾರಣ ಎಂದು ಅವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದಿದ್ದರು.

ವಿಚಾರಣೆಯ ಆರಂಭದಲ್ಲಿಯೇ ನ್ಯಾಯಾಲಯವು, ನೇಹಾ ಸಿಂಗ್ ವಿರುದ್ಧದ ಪ್ರಾಥಮಿಕ ಆರೋಪವೆಂದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ಮತ್ತು ಭಾರತೀಯ ಜನತಾ ಪಕ್ಷದ ಎಲ್ಲಾ ನಾಯಕರ ವಿರುದ್ಧ ಅಸಭ್ಯ ಮತ್ತು ಅನುಚಿತ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮಾನಹಾನಿ ಮಾಡಿದ್ದಾರೆ ಮತ್ತು ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂಬುವುದನ್ನು ಗಮನಿಸಿದೆ.

ನಂತರ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 222 (2) [ಮಾನನಷ್ಟ ಮೊಕದ್ದಮೆ] ಯನ್ನು ಉಲ್ಲೇಖಿಸಿದೆ. ಇದು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಮತ್ತು ರಾಜ್ಯ ಸಚಿವರು ಅಥವಾ ಯಾವುದೇ ಸಾರ್ವಜನಿಕ ಸೇವಕರ ವಿರುದ್ಧ ಅವರ ಅಧಿಕೃತ ನಡವಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಸಂಬಂಧಿಸಿದೆ. ಸೆಷನ್ಸ್ ನ್ಯಾಯಾಲಯವು ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ನೇರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬಹುದು.

ಇದಲ್ಲದೆ, ನ್ಯಾಯಾಲಯವು ಬಿಎನ್‌ಎಸ್‌ಎಸ್‌ ಸೆಕ್ಷನ್ 222 ರ ಸಬ್‌ ಸೆಕ್ಷನ್‌ (4)ರ ಆದೇಶವನ್ನು ಸಹ ಗಣನೆಗೆ ತೆಗೆದುಕೊಂಡಿದೆ. ಇದು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದೆ, ಸಬ್‌ ಸೆಕ್ಷನ್‌ (2) ರ ಅಡಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಯಾವುದೇ ದೂರು ನೀಡಬಾರದು ಎಂದು ಹೇಳುತ್ತದೆ.

ನೇಹಾ ಸಿಂಗ್ ಅವರು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರು ಮತ್ತು ಕೇಂದ್ರ ಅಥವಾ ರಾಜ್ಯ ಸಚಿವರಾಗಿರುವ ಇತರ ಬಿಜೆಪಿ ನಾಯಕರ ಪ್ರತಿಷ್ಠೆಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ದರಿಂದ, ಅವರ ವಿರುದ್ಧ ಯಾವುದೇ ಮಾನನಷ್ಟ ಮೊಕದ್ದಮೆಯನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿಯೊಂದಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಬೇಕು. ಆದರೆ, ಈಗ ನೀಡಿದ ದೂರು ಅದಲ್ಲ.

ಹೀಗಾಗಿ, ಸೂಕ್ತ ಅನುಮತಿ ಪಡೆಯದೆ ದೂರುದಾರರು ತಕ್ಷಣದ ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ಇನ್ನೊಂದು, ಬಿಎನ್‌ಎಸ್‌ನ ಅಧ್ಯಾಯ VII ಅಡಿಯಲ್ಲಿ ಬರುವ ಅಪರಾಧಗಳನ್ನು ನೇಹಾ ಸಿಂಗ್ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು, ಸೆಕ್ಷನ್ 217 ಬಿಎನ್‌ಎಸ್‌ಎಸ್ ಪ್ರಕಾರ ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದೆ ಬಿಎನ್‌ಎಸ್‌ನ ಅಧ್ಯಾಯ VII [ರಾಜ್ಯ ವಿರುದ್ಧದ ಅಪರಾಧಗಳು] ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಯಾವುದೇ ನ್ಯಾಯಾಲಯವು ಅರಿಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಹೀಗಾಗಿ, ದೂರು ಸಲ್ಲಿಸುವ ಮೊದಲು ಅಂತಹ ಪೂರ್ವಾನುಮತಿ ಪಡೆಯಲಾಗಿದೆ ಎಂದು ತೋರಿಸುವ ಯಾವುದೇ ದಾಖಲೆಯನ್ನು ದೂರುದಾರರು ಸಲ್ಲಿಸದ ಕಾರಣ, ಅವರು ಸದರಿ ಅಪರಾಧದ ಕುರಿತು ದೂರು ದಾಖಲಿಸುವ ಹಕ್ಕನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ನೇಹಾ ಸಿಂಗ್ ವಿರುದ್ಧದ ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದಂತೆ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ದೇಶದ್ರೋಹದ ಅಪರಾಧವನ್ನು ವ್ಯಾಖ್ಯಾನಿಸಲಾಗಿಲ್ಲ. ಅದಕ್ಕೆ ಹತ್ತಿರದ ಸೆಕ್ಷನ್ 152 ದಾಖಲಾಗಿದೆ. ಇದು ಅಧ್ಯಾಯ VII ರ ಅಡಿಯಲ್ಲಿ ಬರುತ್ತದೆ. ಆದ್ದರಿಂದ, ಇದಕ್ಕೆ ಪೂರ್ವಾನುಮತಿಯ ಅಗತ್ಯವಿರುತ್ತದೆ. ಅದನ್ನು ತೆಗೆದುಕೊಳ್ಳಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಈ ಹಿನ್ನೆಲೆಯಲ್ಲಿ, ದೂರು ದಾಖಲಿಸಲು ಈ ದೂರಿಗೆ ಯಾವುದೇ ನಿರ್ದಿಷ್ಟ ಸ್ಥಳವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ, ದೂರನ್ನು ವಜಾಗೊಳಿಸಿದೆ ಎಂದು livelaw.in ವರದಿ ಮಾಡಿದೆ.

Courtesy : livelaw.in

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...