Homeಮುಖಪುಟಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಕ್ಕೆ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ನೀಡಿದ್ದ ಕ್ರಿಮಿನಲ್ ದೂರನ್ನು ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲಾ ನ್ಯಾಯಾಲಯ ಮಂಗಳವಾರ (ಮೇ.6) ವಜಾಗೊಳಿಸಿದೆ ಎಂದು livelaw.in ವರದಿ ಮಾಡಿದೆ.

ಅಯೋಧ್ಯೆಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ (ಸೀನಿಯರ್ ವಿಭಾಗ) ಏಕ್ತಾ ಸಿಂಗ್ ಅವರು ದೂರು ವಿಚಾರಣೆಗೆ ಅರ್ಹವಲ್ಲ ಮತ್ತು ದೂರುದಾರರಿಗೆ ದೂರು ನೀಡಲು ನಿರ್ದಿಷ್ಟ ಸ್ಥಳವಿಲ್ಲ ಎಂದು ಹೇಳಿದ್ದಾರೆ.

ಶಿವೇಂದ್ರ ಸಿಂಗ್ ಎಂಬವರು ಬಿಎನ್‌ಎಸ್‌ಎಸ್ ಸೆಕ್ಷನ್ 210ರ (ನ್ಯಾಯಾಧೀಶರಿಂದ ಅಪರಾಧಗಳ ಸಂಜ್ಞೆ) ಅಡಿಯಲ್ಲಿ ನೇಹಾ ಸಿಂಗ್ ವಿರುದ್ದ ಅಯೋಧ್ಯೆ ಜಿಲ್ಲಾ ನ್ಯಾಯಾಲಯಕ್ಕೆ ದೂರ ನೀಡಿದ್ದರು. ವಕೀಲ ಮಾರ್ತಾಂಡ ಪ್ರತಾಪ್ ಸಿಂಗ್ ಶಿವೇಂದ್ರ ಸಿಂಗ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

“ಸಾರ್ವಜನಿಕ ಶಾಂತಿಯನ್ನು ಕದಡಲು ಮತ್ತು ಚುನಾವಣಾ ಲಾಭ ಪಡೆಯಲು ನೇಹಾ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಗೂ ‘ಸುಳ್ಳು’ ಸಂಬಂಧ ಕಲ್ಪಿಸಿದ್ದಾರೆ” ಎಂದು ಶಿವೇಂದ್ರ ಸಿಂಗ್ ತನ್ನ ದೂರಿನಲ್ಲಿ ಆರೋಪಿಸಿದ್ದರು.

“ನೇಹಾ ಸಿಂಗ್ ಅವರ ಸುಳ್ಳು ಮತ್ತು ಕಾನೂನುಬಾಹಿರ ಹೇಳಿಕೆಗಳು ರಾಷ್ಟ್ರವ್ಯಾಪಿ ಅಶಾಂತಿಯನ್ನು ಸೃಷ್ಟಿಸಿವೆ. ಇದು ದೇಶವನ್ನು ಅಂತರ್ಯುದ್ಧದತ್ತ ತಳ್ಳಿದೆ. ಅವರ ಕೃತ್ಯಗಳು ದೇಶದ್ರೋಹಕ್ಕೆ ಸಮಾನಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ” ಎಂದು ಹೇಳಿದ್ದರು.

“ನೇಹಾ ಅವರ ‘ಅಸಭ್ಯ’ ಮತ್ತು ‘ಅವಹೇಳನಕಾರಿ’ ಹೇಳಿಕೆಗಳು ಆಡಳಿತಾರೂಢ ಬಿಜೆಪಿ ನಾಯಕರ ವರ್ಚಸ್ಸಿಗೆ ಕಳಂಕ ತಂದಿವೆ. ದೇಶದಲ್ಲಿ ನಡೆಯುವ ಹೆಚ್ಚಿನ ಭಯೋತ್ಪಾದಕ ದಾಳಿಗಳಿಗೆ ಬಿಜೆಪಿಯೇ ಕಾರಣ ಎಂದು ಅವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದಿದ್ದರು.

ವಿಚಾರಣೆಯ ಆರಂಭದಲ್ಲಿಯೇ ನ್ಯಾಯಾಲಯವು, ನೇಹಾ ಸಿಂಗ್ ವಿರುದ್ಧದ ಪ್ರಾಥಮಿಕ ಆರೋಪವೆಂದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ಮತ್ತು ಭಾರತೀಯ ಜನತಾ ಪಕ್ಷದ ಎಲ್ಲಾ ನಾಯಕರ ವಿರುದ್ಧ ಅಸಭ್ಯ ಮತ್ತು ಅನುಚಿತ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮಾನಹಾನಿ ಮಾಡಿದ್ದಾರೆ ಮತ್ತು ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂಬುವುದನ್ನು ಗಮನಿಸಿದೆ.

ನಂತರ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 222 (2) [ಮಾನನಷ್ಟ ಮೊಕದ್ದಮೆ] ಯನ್ನು ಉಲ್ಲೇಖಿಸಿದೆ. ಇದು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಮತ್ತು ರಾಜ್ಯ ಸಚಿವರು ಅಥವಾ ಯಾವುದೇ ಸಾರ್ವಜನಿಕ ಸೇವಕರ ವಿರುದ್ಧ ಅವರ ಅಧಿಕೃತ ನಡವಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಸಂಬಂಧಿಸಿದೆ. ಸೆಷನ್ಸ್ ನ್ಯಾಯಾಲಯವು ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ನೇರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬಹುದು.

ಇದಲ್ಲದೆ, ನ್ಯಾಯಾಲಯವು ಬಿಎನ್‌ಎಸ್‌ಎಸ್‌ ಸೆಕ್ಷನ್ 222 ರ ಸಬ್‌ ಸೆಕ್ಷನ್‌ (4)ರ ಆದೇಶವನ್ನು ಸಹ ಗಣನೆಗೆ ತೆಗೆದುಕೊಂಡಿದೆ. ಇದು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದೆ, ಸಬ್‌ ಸೆಕ್ಷನ್‌ (2) ರ ಅಡಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಯಾವುದೇ ದೂರು ನೀಡಬಾರದು ಎಂದು ಹೇಳುತ್ತದೆ.

ನೇಹಾ ಸಿಂಗ್ ಅವರು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರು ಮತ್ತು ಕೇಂದ್ರ ಅಥವಾ ರಾಜ್ಯ ಸಚಿವರಾಗಿರುವ ಇತರ ಬಿಜೆಪಿ ನಾಯಕರ ಪ್ರತಿಷ್ಠೆಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ದರಿಂದ, ಅವರ ವಿರುದ್ಧ ಯಾವುದೇ ಮಾನನಷ್ಟ ಮೊಕದ್ದಮೆಯನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿಯೊಂದಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಬೇಕು. ಆದರೆ, ಈಗ ನೀಡಿದ ದೂರು ಅದಲ್ಲ.

ಹೀಗಾಗಿ, ಸೂಕ್ತ ಅನುಮತಿ ಪಡೆಯದೆ ದೂರುದಾರರು ತಕ್ಷಣದ ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ಇನ್ನೊಂದು, ಬಿಎನ್‌ಎಸ್‌ನ ಅಧ್ಯಾಯ VII ಅಡಿಯಲ್ಲಿ ಬರುವ ಅಪರಾಧಗಳನ್ನು ನೇಹಾ ಸಿಂಗ್ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು, ಸೆಕ್ಷನ್ 217 ಬಿಎನ್‌ಎಸ್‌ಎಸ್ ಪ್ರಕಾರ ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದೆ ಬಿಎನ್‌ಎಸ್‌ನ ಅಧ್ಯಾಯ VII [ರಾಜ್ಯ ವಿರುದ್ಧದ ಅಪರಾಧಗಳು] ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಯಾವುದೇ ನ್ಯಾಯಾಲಯವು ಅರಿಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಹೀಗಾಗಿ, ದೂರು ಸಲ್ಲಿಸುವ ಮೊದಲು ಅಂತಹ ಪೂರ್ವಾನುಮತಿ ಪಡೆಯಲಾಗಿದೆ ಎಂದು ತೋರಿಸುವ ಯಾವುದೇ ದಾಖಲೆಯನ್ನು ದೂರುದಾರರು ಸಲ್ಲಿಸದ ಕಾರಣ, ಅವರು ಸದರಿ ಅಪರಾಧದ ಕುರಿತು ದೂರು ದಾಖಲಿಸುವ ಹಕ್ಕನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ನೇಹಾ ಸಿಂಗ್ ವಿರುದ್ಧದ ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದಂತೆ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ದೇಶದ್ರೋಹದ ಅಪರಾಧವನ್ನು ವ್ಯಾಖ್ಯಾನಿಸಲಾಗಿಲ್ಲ. ಅದಕ್ಕೆ ಹತ್ತಿರದ ಸೆಕ್ಷನ್ 152 ದಾಖಲಾಗಿದೆ. ಇದು ಅಧ್ಯಾಯ VII ರ ಅಡಿಯಲ್ಲಿ ಬರುತ್ತದೆ. ಆದ್ದರಿಂದ, ಇದಕ್ಕೆ ಪೂರ್ವಾನುಮತಿಯ ಅಗತ್ಯವಿರುತ್ತದೆ. ಅದನ್ನು ತೆಗೆದುಕೊಳ್ಳಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಈ ಹಿನ್ನೆಲೆಯಲ್ಲಿ, ದೂರು ದಾಖಲಿಸಲು ಈ ದೂರಿಗೆ ಯಾವುದೇ ನಿರ್ದಿಷ್ಟ ಸ್ಥಳವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ, ದೂರನ್ನು ವಜಾಗೊಳಿಸಿದೆ ಎಂದು livelaw.in ವರದಿ ಮಾಡಿದೆ.

Courtesy : livelaw.in

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...