Homeಮುಖಪುಟಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

ಪಹಲ್ಗಾಮ್ ದಾಳಿ ಕುರಿತು ಪೋಸ್ಟ್: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧದ ದೂರು ವಜಾಗೊಳಿಸಿದ ಕೋರ್ಟ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಕ್ಕೆ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ನೀಡಿದ್ದ ಕ್ರಿಮಿನಲ್ ದೂರನ್ನು ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲಾ ನ್ಯಾಯಾಲಯ ಮಂಗಳವಾರ (ಮೇ.6) ವಜಾಗೊಳಿಸಿದೆ ಎಂದು livelaw.in ವರದಿ ಮಾಡಿದೆ.

ಅಯೋಧ್ಯೆಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ (ಸೀನಿಯರ್ ವಿಭಾಗ) ಏಕ್ತಾ ಸಿಂಗ್ ಅವರು ದೂರು ವಿಚಾರಣೆಗೆ ಅರ್ಹವಲ್ಲ ಮತ್ತು ದೂರುದಾರರಿಗೆ ದೂರು ನೀಡಲು ನಿರ್ದಿಷ್ಟ ಸ್ಥಳವಿಲ್ಲ ಎಂದು ಹೇಳಿದ್ದಾರೆ.

ಶಿವೇಂದ್ರ ಸಿಂಗ್ ಎಂಬವರು ಬಿಎನ್‌ಎಸ್‌ಎಸ್ ಸೆಕ್ಷನ್ 210ರ (ನ್ಯಾಯಾಧೀಶರಿಂದ ಅಪರಾಧಗಳ ಸಂಜ್ಞೆ) ಅಡಿಯಲ್ಲಿ ನೇಹಾ ಸಿಂಗ್ ವಿರುದ್ದ ಅಯೋಧ್ಯೆ ಜಿಲ್ಲಾ ನ್ಯಾಯಾಲಯಕ್ಕೆ ದೂರ ನೀಡಿದ್ದರು. ವಕೀಲ ಮಾರ್ತಾಂಡ ಪ್ರತಾಪ್ ಸಿಂಗ್ ಶಿವೇಂದ್ರ ಸಿಂಗ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

“ಸಾರ್ವಜನಿಕ ಶಾಂತಿಯನ್ನು ಕದಡಲು ಮತ್ತು ಚುನಾವಣಾ ಲಾಭ ಪಡೆಯಲು ನೇಹಾ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಗೂ ‘ಸುಳ್ಳು’ ಸಂಬಂಧ ಕಲ್ಪಿಸಿದ್ದಾರೆ” ಎಂದು ಶಿವೇಂದ್ರ ಸಿಂಗ್ ತನ್ನ ದೂರಿನಲ್ಲಿ ಆರೋಪಿಸಿದ್ದರು.

“ನೇಹಾ ಸಿಂಗ್ ಅವರ ಸುಳ್ಳು ಮತ್ತು ಕಾನೂನುಬಾಹಿರ ಹೇಳಿಕೆಗಳು ರಾಷ್ಟ್ರವ್ಯಾಪಿ ಅಶಾಂತಿಯನ್ನು ಸೃಷ್ಟಿಸಿವೆ. ಇದು ದೇಶವನ್ನು ಅಂತರ್ಯುದ್ಧದತ್ತ ತಳ್ಳಿದೆ. ಅವರ ಕೃತ್ಯಗಳು ದೇಶದ್ರೋಹಕ್ಕೆ ಸಮಾನಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ” ಎಂದು ಹೇಳಿದ್ದರು.

“ನೇಹಾ ಅವರ ‘ಅಸಭ್ಯ’ ಮತ್ತು ‘ಅವಹೇಳನಕಾರಿ’ ಹೇಳಿಕೆಗಳು ಆಡಳಿತಾರೂಢ ಬಿಜೆಪಿ ನಾಯಕರ ವರ್ಚಸ್ಸಿಗೆ ಕಳಂಕ ತಂದಿವೆ. ದೇಶದಲ್ಲಿ ನಡೆಯುವ ಹೆಚ್ಚಿನ ಭಯೋತ್ಪಾದಕ ದಾಳಿಗಳಿಗೆ ಬಿಜೆಪಿಯೇ ಕಾರಣ ಎಂದು ಅವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದಿದ್ದರು.

ವಿಚಾರಣೆಯ ಆರಂಭದಲ್ಲಿಯೇ ನ್ಯಾಯಾಲಯವು, ನೇಹಾ ಸಿಂಗ್ ವಿರುದ್ಧದ ಪ್ರಾಥಮಿಕ ಆರೋಪವೆಂದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ಮತ್ತು ಭಾರತೀಯ ಜನತಾ ಪಕ್ಷದ ಎಲ್ಲಾ ನಾಯಕರ ವಿರುದ್ಧ ಅಸಭ್ಯ ಮತ್ತು ಅನುಚಿತ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮಾನಹಾನಿ ಮಾಡಿದ್ದಾರೆ ಮತ್ತು ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂಬುವುದನ್ನು ಗಮನಿಸಿದೆ.

ನಂತರ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 222 (2) [ಮಾನನಷ್ಟ ಮೊಕದ್ದಮೆ] ಯನ್ನು ಉಲ್ಲೇಖಿಸಿದೆ. ಇದು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಮತ್ತು ರಾಜ್ಯ ಸಚಿವರು ಅಥವಾ ಯಾವುದೇ ಸಾರ್ವಜನಿಕ ಸೇವಕರ ವಿರುದ್ಧ ಅವರ ಅಧಿಕೃತ ನಡವಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಸಂಬಂಧಿಸಿದೆ. ಸೆಷನ್ಸ್ ನ್ಯಾಯಾಲಯವು ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ ಲಿಖಿತ ದೂರಿನ ಮೇರೆಗೆ ನೇರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬಹುದು.

ಇದಲ್ಲದೆ, ನ್ಯಾಯಾಲಯವು ಬಿಎನ್‌ಎಸ್‌ಎಸ್‌ ಸೆಕ್ಷನ್ 222 ರ ಸಬ್‌ ಸೆಕ್ಷನ್‌ (4)ರ ಆದೇಶವನ್ನು ಸಹ ಗಣನೆಗೆ ತೆಗೆದುಕೊಂಡಿದೆ. ಇದು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದೆ, ಸಬ್‌ ಸೆಕ್ಷನ್‌ (2) ರ ಅಡಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಯಾವುದೇ ದೂರು ನೀಡಬಾರದು ಎಂದು ಹೇಳುತ್ತದೆ.

ನೇಹಾ ಸಿಂಗ್ ಅವರು ಪ್ರಧಾನ ಮಂತ್ರಿ, ಗೃಹ ಸಚಿವರು, ರಕ್ಷಣಾ ಸಚಿವರು ಮತ್ತು ಕೇಂದ್ರ ಅಥವಾ ರಾಜ್ಯ ಸಚಿವರಾಗಿರುವ ಇತರ ಬಿಜೆಪಿ ನಾಯಕರ ಪ್ರತಿಷ್ಠೆಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ದರಿಂದ, ಅವರ ವಿರುದ್ಧ ಯಾವುದೇ ಮಾನನಷ್ಟ ಮೊಕದ್ದಮೆಯನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿಯೊಂದಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಬೇಕು. ಆದರೆ, ಈಗ ನೀಡಿದ ದೂರು ಅದಲ್ಲ.

ಹೀಗಾಗಿ, ಸೂಕ್ತ ಅನುಮತಿ ಪಡೆಯದೆ ದೂರುದಾರರು ತಕ್ಷಣದ ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ಇನ್ನೊಂದು, ಬಿಎನ್‌ಎಸ್‌ನ ಅಧ್ಯಾಯ VII ಅಡಿಯಲ್ಲಿ ಬರುವ ಅಪರಾಧಗಳನ್ನು ನೇಹಾ ಸಿಂಗ್ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು, ಸೆಕ್ಷನ್ 217 ಬಿಎನ್‌ಎಸ್‌ಎಸ್ ಪ್ರಕಾರ ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದೆ ಬಿಎನ್‌ಎಸ್‌ನ ಅಧ್ಯಾಯ VII [ರಾಜ್ಯ ವಿರುದ್ಧದ ಅಪರಾಧಗಳು] ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಯಾವುದೇ ನ್ಯಾಯಾಲಯವು ಅರಿಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಹೀಗಾಗಿ, ದೂರು ಸಲ್ಲಿಸುವ ಮೊದಲು ಅಂತಹ ಪೂರ್ವಾನುಮತಿ ಪಡೆಯಲಾಗಿದೆ ಎಂದು ತೋರಿಸುವ ಯಾವುದೇ ದಾಖಲೆಯನ್ನು ದೂರುದಾರರು ಸಲ್ಲಿಸದ ಕಾರಣ, ಅವರು ಸದರಿ ಅಪರಾಧದ ಕುರಿತು ದೂರು ದಾಖಲಿಸುವ ಹಕ್ಕನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ನೇಹಾ ಸಿಂಗ್ ವಿರುದ್ಧದ ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದಂತೆ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ದೇಶದ್ರೋಹದ ಅಪರಾಧವನ್ನು ವ್ಯಾಖ್ಯಾನಿಸಲಾಗಿಲ್ಲ. ಅದಕ್ಕೆ ಹತ್ತಿರದ ಸೆಕ್ಷನ್ 152 ದಾಖಲಾಗಿದೆ. ಇದು ಅಧ್ಯಾಯ VII ರ ಅಡಿಯಲ್ಲಿ ಬರುತ್ತದೆ. ಆದ್ದರಿಂದ, ಇದಕ್ಕೆ ಪೂರ್ವಾನುಮತಿಯ ಅಗತ್ಯವಿರುತ್ತದೆ. ಅದನ್ನು ತೆಗೆದುಕೊಳ್ಳಲಾಗಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಈ ಹಿನ್ನೆಲೆಯಲ್ಲಿ, ದೂರು ದಾಖಲಿಸಲು ಈ ದೂರಿಗೆ ಯಾವುದೇ ನಿರ್ದಿಷ್ಟ ಸ್ಥಳವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ, ದೂರನ್ನು ವಜಾಗೊಳಿಸಿದೆ ಎಂದು livelaw.in ವರದಿ ಮಾಡಿದೆ.

Courtesy : livelaw.in

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...