HomeಮುಖಪುಟCAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು!

CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು!

- Advertisement -
- Advertisement -

ಸಿಎಎ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದ ಕಾರಣಕ್ಕಾಗಿ ಬಂಧಿಸಿದ್ದ ಪಿಂಜ್ರಾತೋಡ್‌ ಸಂಘಟನೆಯ ಇಬ್ಬರು ಕಾರ್ಯಕರ್ತೆಯರಿಗೆ ದೆಹಲಿ ನ್ಯಾಯಾಲಯವು ಜಾಮೀನು ನೀಡಿದೆ. ಇವರು ಕೇವಲ ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಕೆಲಸಕ್ಕೆ ಅಡ್ಡಿ, ಹಲ್ಲೆಯತ್ನ) ಹಾಕುವುದು ಸಮರ್ಥನೀಯವಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಇದಾದ ಸ್ವಲ್ಪ ಸಮಯದಲ್ಲಿಯೇ ಆಶ್ಚರ್‍ಯಕರ ರೀತಿಯಲ್ಲಿ ಅಪರಾಧ ಶಾಖೆಯ ವಿಶೇಷ ತನಿಖಾ ತಂಡವು ಕೊಲೆ, ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದಡಿ ಅವರನ್ನು ಮತ್ತೆ ಬಂಧಿಸಿ 14 ದಿನಗಳ ಕಾಲ ಅವರ ಪೊಲೀಸ್ ಕಸ್ಟಡಿಗೆ ಕೋರಿದೆ. ಕೊನೆಗೆ ನ್ಯಾಯಾಲಯವು ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಘಟನೆ ಜರುಗಿದೆ.

ಫೆಬ್ರವರಿ 22-23ರಂದು ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ದೇವಾಂಗನಾ ಕಾಳಿತಾ (30) ಮತ್ತು ನತಾಶಾ ನರ್ವಾಲ್ (32) ಇಬ್ಬರು ಪ್ರಮುಖರು ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರತಿಭಟನೆಯು ಫೆಬ್ರವರಿ 23 ರಂದು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ಅವರ ಬೆಂಬಲಿಗರನ್ನು ಕೆರಳಿಸಿ ಗಲಭೆಗಳು ಭುಗಿಲೆದ್ದವು.

ಬಂಧಿತರಾಗಿರುವ ಹೋರಾಟಗಾರ್ತಿಯರು ಸ್ಪೆಷಲ್‌ ಸೆಲ್‌, ಜಾಫ್ರಾಬಾದ್ ಪೊಲೀಸ್ ಠಾಣೆ ಮತ್ತು ಅಪರಾಧ ಶಾಖೆಯ ವಿಶೇಷ ತನಿಖಾ ತಂಡ ಈ ಮೂರು ವಿಭಾಗಗಳಿಂದಲೂ ತನಿಖೆಗೊಳಗಾಗಬೇಕಿದೆ.

ಜಾಫ್ರಾಬಾದ್ ಪೊಲೀಸ್ ಠಾಣೆಯ ತಂಡವು ಅವರನ್ನು ಐಪಿಸಿ ಸೆಕ್ಷನ್ 186 (ಸಾರ್ವಜನಿಕ ಸೇವೆಗೆ ತಡೆ) ಮತ್ತು 353 (ಸಾರ್ವಜನಿಕ ಸೇವಕನ ಮೇಲೆ ಕ್ರಿಮಿನಲ್‌ ಹಲ್ಲೆ) ಅಡಿಯಲ್ಲಿ ಬಂಧಿಸಿದೆ.

ಈ ಕುರಿತು ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು ಅವರಿಗೆ ಜಾಮೀನು ನೀಡುತ್ತಾ, “ಎಫ್ಐಆರ್ ಮತ್ತು ಕೇಸ್ ಫೈಲ್ ಪರಿಶೀಲನೆಯಿಂದ, ಸೆಕ್ಷನ್ 353 ರ ಅಡಿಯಲ್ಲಿ ಈ ಅಪರಾಧವನ್ನು ನಿರ್ವಹಿಸಲಾಗುವುದಿಲ್ಲ” ಎಂದು ಡ್ಯೂಟಿ ಮ್ಯಾಜಿಸ್ಟ್ರೇಟ್ ಅಜೀತ್ ನಾರಾಯಣ್ ಹೇಳಿದ್ದಾರೆ.

“ಆರೋಪಿಗಳು ಕೇವಲ ಎನ್ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದರು. ಅಲ್ಲದೇ ಆರೋಪಿಗಳಿಂದ ಯಾವುದೇ ಹಿಂಸಾಚಾರ ಉಂಟಾಗಿಲ್ಲ ಎಂದು ಪ್ರಕರಣದ ಸಂಗತಿಗಳು ಬಹಿರಂಗಪಡಿಸುತ್ತವೆ. ಅಲ್ಲದೆ, ಆರೋಪಿಗಳು ಸುಶಿಕ್ಷಿತರಾಗಿದ್ದು, ತಮ್ಮನ್ನು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ. ತನಿಖೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರೊಂದಿಗೆ ಸಹಕರಿಸಲು ಸಿದ್ಧರಾಗಿದ್ದಾರೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಅಲ್ಲದೆ, ಪ್ರಸ್ತುತ ಕೋವಿಡ್ -19 ರ ಸಾಂಕ್ರಾಮಿಕ ರೋಗಕ್ಕೆ ಆರೋಪಿಗಳು ಗುರಿಯಾಗುತ್ತಾರೆ ಎಂಬ ಪರಿಸ್ಥಿತಿಯನ್ನು ಪರಿಗಣಿಸಿ, ಈ ನ್ಯಾಯಾಲಯವು ಆರೋಪಿಗಳಿಗೆ ಪಿಸಿ ರಿಮಾಂಡ್ ನೀಡಲು ಒಲವು ತೋರುತ್ತಿಲ್ಲ ಮತ್ತು ಪೊಲೀಸ್ ರಿಮಾಂಡ್ ಅರ್ಜಿಯನ್ನು ನಿರಾಕರಿಸಲಾಗಿದೆ” ಎಂದು ಅದು ಹೇಳಿದೆ.

ಈ ಮಧ್ಯೆ, ಅಪರಾಧ ವಿಭಾಗದ ತನಿಖಾ ಅಧಿಕಾರಿ (ಐಒ) ಕುಲದೀಪ್ ಸಿಂಗ್ ಅವರು ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಲು ಕೋರಿ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

15 ನಿಮಿಷಗಳ ನಂತರ ತನಿಖಾ ಅಧಿಕಾರಿ ಕುಲದೀಪ್ ಸಿಂಗ್ ಅವರನ್ನು ಮತ್ತೆ ಬಂಧಿಸಿ ಇಬ್ಬರೂ ಆರೋಪಿಗಳನ್ನು ಹಾಜರುಪಡಿಸಿದರು. ಅಲ್ಲದೆ “14 ದಿನಗಳ ಕಾಲ ಪಿಸಿ ರಿಮಾಂಡ್‌ಗಾಗಿ ಅರ್ಜಿ ಸಲ್ಲಿಸಿದರು. ಘಟನೆಗಳ ಹಿಂದಿನ ಪಿತೂರಿ ತಿಳಿಯಲು ಆರೋಪಿಗಳನ್ನು ಕೂಲಂಕಷವಾಗಿ ವಿಚಾರಣೆ ನಡೆಸಬೇಕು ಮತ್ತು ಸಹ-ಆರೋಪಿಗಳ ಗುರುತನ್ನು ಸ್ಥಾಪಿಸಬೇಕಾಗಿದೆ ಮತ್ತು ಸಹ-ಆರೋಪಿಗಳನ್ನು ಬಂಧಿಸಲು ಪಿಸಿ ರಿಮಾಂಡ್ ಅಗತ್ಯ” ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.

ಪೊಲೀಸ್ ಅರ್ಜಿಯನ್ನು ವಿರೋಧಿಸಿದ ಆರೋಪಿಗಳ ಪರ ವಕೀಲರಾದ ಆದಿತ್ ಎಸ್ ಪೂಜಾರಿ, ತುಶಾರಿಕಾ ಮಟ್ಟೂ ಮತ್ತು ಕುನಾಲ್ ನೇಗಿ, ಕಲಿತಾ ಮತ್ತು ನರ್ವಾಲ್ ಅವರನ್ನು ಈ ಪ್ರಕರಣದಲ್ಲಿ ತಪ್ಪಾಗಿ ಗುರುತಿಸಲಾಗಿದೆ ಎಂದು ವಾದಿಸಿದರು.

“ಪ್ರಕರಣದ ಸಂಗತಿಗಳು ಮತ್ತು ಸನ್ನಿವೇಶಗಳನ್ನು ಮತ್ತು ತನಿಖೆಯ ಆರಂಭಿಕ ಹಂತವನ್ನು ಪರಿಗಣಿಸಿ, ಆರೋಪಿಗಳನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ವಿಧಿಸಲಾಗಿದೆ” ಎಂದು ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

ಕಲಿತಾ ಜೆಎನ್‌ಯುನ ಮಹಿಳಾ ಅಧ್ಯಯನ ಕೇಂದ್ರದಲ್ಲಿ ಎಂಫಿಲ್ ವಿದ್ಯಾರ್ಥಿಯಾಗಿದ್ದರೆ, ನರ್ವಾಲ್ ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದಾಳೆ. ಅವರಿಬ್ಬರೂ 2015 ರಲ್ಲಿ ರೂಪುಗೊಂಡ ಪಿಂಜ್ರಾ ತೋಡ್‌ ಸಂಘಟನೆಯ ಸ್ಥಾಪಕ ಸದಸ್ಯರಾಗಿದ್ದಾರೆ. ಇದು ಮುಖ್ಯವಾಗಿ ದೆಹಲಿಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿನ ಹಾಸ್ಟೆಲ್ ಕರ್ಫ್ಯೂಗಳನ್ನು ವಿರೋಧಿಸುತ್ತದೆ.

ಪೊಲೀಸರ ಈ ಮರುಬಂಧನದ ಕ್ರಮವನ್ನು ಜೆಎನ್‌ಯು ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿ ಸಂಘ ತೀವ್ರವಾಗಿ ಖಂಡಿಸಿವೆ. “ದೆಹಲಿ ಪೊಲೀಸರು ಬಂಧಿಸಿದ ಮಾದರಿ ನಮಗೆ ಆಘಾತ ತಂದಿದೆ. ದೆಹಲಿ ಗಲಭೆಯ ಕುರಿತು ಹಲವಾರು ಸ್ವತಂತ್ರ ಸತ್ಯಶೋಧನಾ ತಂಡಗಳು ದಾಖಲಿಸಿರುವ ಹಿಂಸಾಚಾರದ ವರದಿಗಳನ್ನು ಪೊಲೀಸರು ಸತತವಾಗಿ ನಿರಾಕರಿಸಿದ್ದಾರೆ. ಗಲಭೆ ನಡೆಯುವ ಮೊದಲು ದ್ವೇಷವನ್ನು ಹುಟ್ಟುಹಾಕುವ ಮತ್ತು ಹಿಂಸಾಚಾರವನ್ನು ಒತ್ತಾಯಿಸುವ ಹೇಳಿಕೆಗಳನ್ನು ನೀಡಿದವರ ಕುರಿತು ಹಲವಾರು ಟಿವಿ ಕ್ಯಾಮೆರಾಗಳು ಪದೇ ಪದೇ ತೋರಿಸಿತ್ತಿದ್ದರೂ ಅವರನ್ನು ಪೊಲೀಸರು ಬಂಧಿಸಿಲ್ಲ. ಬದಲಿಗೆ ಪ್ರಜಾಪ್ರಭುತ್ವ ರೀತಿಯಲ್ಲಿ ಸರ್ಕಾರದ ನಡೆಗಳನ್ನು ವಿರೋಧಿಸಿದ ನಾಗರೀಕರನ್ನು ದೆಹಲಿ ಪೊಲೀಸರು ಭೇಟೆಯಾಡುತ್ತಿದ್ದಾರೆ. ಸ್ಪಷ್ಟವಾಗಿ ಸಂವಿಧಾನ ವಿರೋಧಿ ಕೃತ್ಯದಲ್ಲಿ ದೆಹಲಿ ಪೊಲೀಸರು ತೊಡಿಗಿದ್ದಾರೆ ಎಂದು ಜೆಎನ್‌ಯು ಶಿಕ್ಷಕರ ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಜೆಎನ್‌ಯು ವಿದ್ಯಾರ್ಥಿ ಸಂಘವು ತನ್ನ ಹೇಳಿಕೆಯಲ್ಲಿ “ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಪಿಲ್ ಮಿಶ್ರಾನನ್ನು ದೆಹಲಿ ಪೊಲೀಸರು ಬಂಧಿಸುವುದಿರಲಿ, ಎಂದಿಗೂ ಆತನ ಒಂದೇ ರೀತಿಯ ಅಚಾತುರ್ಯವನ್ನು ಪ್ರಶ್ನಿಸಿಲ್ಲ… ಇಬ್ಬರು ಮಹಿಳಾ ಕಾರ್ಯಕರ್ತರನ್ನು ಈಗ ಬಂಧಿಸುವ ಮೂಲಕ ನ್ಯಾಯ ಮತ್ತು ಕಾನೂನಿನ ನಿಯಮಗಳು ದುಷ್ಟರ ಕೈಯಲ್ಲಿವೆ ಎಂದು ಸಾಬೀತುಪಡಿಸಿದ್ದಾರೆ” ಎಂದು ಟೀಕಿಸಿದೆ.


ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...