HomeಮುಖಪುಟCAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು!

CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು!

- Advertisement -
- Advertisement -

ಸಿಎಎ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದ ಕಾರಣಕ್ಕಾಗಿ ಬಂಧಿಸಿದ್ದ ಪಿಂಜ್ರಾತೋಡ್‌ ಸಂಘಟನೆಯ ಇಬ್ಬರು ಕಾರ್ಯಕರ್ತೆಯರಿಗೆ ದೆಹಲಿ ನ್ಯಾಯಾಲಯವು ಜಾಮೀನು ನೀಡಿದೆ. ಇವರು ಕೇವಲ ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಕೆಲಸಕ್ಕೆ ಅಡ್ಡಿ, ಹಲ್ಲೆಯತ್ನ) ಹಾಕುವುದು ಸಮರ್ಥನೀಯವಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಇದಾದ ಸ್ವಲ್ಪ ಸಮಯದಲ್ಲಿಯೇ ಆಶ್ಚರ್‍ಯಕರ ರೀತಿಯಲ್ಲಿ ಅಪರಾಧ ಶಾಖೆಯ ವಿಶೇಷ ತನಿಖಾ ತಂಡವು ಕೊಲೆ, ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದಡಿ ಅವರನ್ನು ಮತ್ತೆ ಬಂಧಿಸಿ 14 ದಿನಗಳ ಕಾಲ ಅವರ ಪೊಲೀಸ್ ಕಸ್ಟಡಿಗೆ ಕೋರಿದೆ. ಕೊನೆಗೆ ನ್ಯಾಯಾಲಯವು ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಘಟನೆ ಜರುಗಿದೆ.

ಫೆಬ್ರವರಿ 22-23ರಂದು ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಬಳಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ದೇವಾಂಗನಾ ಕಾಳಿತಾ (30) ಮತ್ತು ನತಾಶಾ ನರ್ವಾಲ್ (32) ಇಬ್ಬರು ಪ್ರಮುಖರು ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರತಿಭಟನೆಯು ಫೆಬ್ರವರಿ 23 ರಂದು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ಅವರ ಬೆಂಬಲಿಗರನ್ನು ಕೆರಳಿಸಿ ಗಲಭೆಗಳು ಭುಗಿಲೆದ್ದವು.

ಬಂಧಿತರಾಗಿರುವ ಹೋರಾಟಗಾರ್ತಿಯರು ಸ್ಪೆಷಲ್‌ ಸೆಲ್‌, ಜಾಫ್ರಾಬಾದ್ ಪೊಲೀಸ್ ಠಾಣೆ ಮತ್ತು ಅಪರಾಧ ಶಾಖೆಯ ವಿಶೇಷ ತನಿಖಾ ತಂಡ ಈ ಮೂರು ವಿಭಾಗಗಳಿಂದಲೂ ತನಿಖೆಗೊಳಗಾಗಬೇಕಿದೆ.

ಜಾಫ್ರಾಬಾದ್ ಪೊಲೀಸ್ ಠಾಣೆಯ ತಂಡವು ಅವರನ್ನು ಐಪಿಸಿ ಸೆಕ್ಷನ್ 186 (ಸಾರ್ವಜನಿಕ ಸೇವೆಗೆ ತಡೆ) ಮತ್ತು 353 (ಸಾರ್ವಜನಿಕ ಸೇವಕನ ಮೇಲೆ ಕ್ರಿಮಿನಲ್‌ ಹಲ್ಲೆ) ಅಡಿಯಲ್ಲಿ ಬಂಧಿಸಿದೆ.

ಈ ಕುರಿತು ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು ಅವರಿಗೆ ಜಾಮೀನು ನೀಡುತ್ತಾ, “ಎಫ್ಐಆರ್ ಮತ್ತು ಕೇಸ್ ಫೈಲ್ ಪರಿಶೀಲನೆಯಿಂದ, ಸೆಕ್ಷನ್ 353 ರ ಅಡಿಯಲ್ಲಿ ಈ ಅಪರಾಧವನ್ನು ನಿರ್ವಹಿಸಲಾಗುವುದಿಲ್ಲ” ಎಂದು ಡ್ಯೂಟಿ ಮ್ಯಾಜಿಸ್ಟ್ರೇಟ್ ಅಜೀತ್ ನಾರಾಯಣ್ ಹೇಳಿದ್ದಾರೆ.

“ಆರೋಪಿಗಳು ಕೇವಲ ಎನ್ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದರು. ಅಲ್ಲದೇ ಆರೋಪಿಗಳಿಂದ ಯಾವುದೇ ಹಿಂಸಾಚಾರ ಉಂಟಾಗಿಲ್ಲ ಎಂದು ಪ್ರಕರಣದ ಸಂಗತಿಗಳು ಬಹಿರಂಗಪಡಿಸುತ್ತವೆ. ಅಲ್ಲದೆ, ಆರೋಪಿಗಳು ಸುಶಿಕ್ಷಿತರಾಗಿದ್ದು, ತಮ್ಮನ್ನು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ. ತನಿಖೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರೊಂದಿಗೆ ಸಹಕರಿಸಲು ಸಿದ್ಧರಾಗಿದ್ದಾರೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಅಲ್ಲದೆ, ಪ್ರಸ್ತುತ ಕೋವಿಡ್ -19 ರ ಸಾಂಕ್ರಾಮಿಕ ರೋಗಕ್ಕೆ ಆರೋಪಿಗಳು ಗುರಿಯಾಗುತ್ತಾರೆ ಎಂಬ ಪರಿಸ್ಥಿತಿಯನ್ನು ಪರಿಗಣಿಸಿ, ಈ ನ್ಯಾಯಾಲಯವು ಆರೋಪಿಗಳಿಗೆ ಪಿಸಿ ರಿಮಾಂಡ್ ನೀಡಲು ಒಲವು ತೋರುತ್ತಿಲ್ಲ ಮತ್ತು ಪೊಲೀಸ್ ರಿಮಾಂಡ್ ಅರ್ಜಿಯನ್ನು ನಿರಾಕರಿಸಲಾಗಿದೆ” ಎಂದು ಅದು ಹೇಳಿದೆ.

ಈ ಮಧ್ಯೆ, ಅಪರಾಧ ವಿಭಾಗದ ತನಿಖಾ ಅಧಿಕಾರಿ (ಐಒ) ಕುಲದೀಪ್ ಸಿಂಗ್ ಅವರು ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಲು ಕೋರಿ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

15 ನಿಮಿಷಗಳ ನಂತರ ತನಿಖಾ ಅಧಿಕಾರಿ ಕುಲದೀಪ್ ಸಿಂಗ್ ಅವರನ್ನು ಮತ್ತೆ ಬಂಧಿಸಿ ಇಬ್ಬರೂ ಆರೋಪಿಗಳನ್ನು ಹಾಜರುಪಡಿಸಿದರು. ಅಲ್ಲದೆ “14 ದಿನಗಳ ಕಾಲ ಪಿಸಿ ರಿಮಾಂಡ್‌ಗಾಗಿ ಅರ್ಜಿ ಸಲ್ಲಿಸಿದರು. ಘಟನೆಗಳ ಹಿಂದಿನ ಪಿತೂರಿ ತಿಳಿಯಲು ಆರೋಪಿಗಳನ್ನು ಕೂಲಂಕಷವಾಗಿ ವಿಚಾರಣೆ ನಡೆಸಬೇಕು ಮತ್ತು ಸಹ-ಆರೋಪಿಗಳ ಗುರುತನ್ನು ಸ್ಥಾಪಿಸಬೇಕಾಗಿದೆ ಮತ್ತು ಸಹ-ಆರೋಪಿಗಳನ್ನು ಬಂಧಿಸಲು ಪಿಸಿ ರಿಮಾಂಡ್ ಅಗತ್ಯ” ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.

ಪೊಲೀಸ್ ಅರ್ಜಿಯನ್ನು ವಿರೋಧಿಸಿದ ಆರೋಪಿಗಳ ಪರ ವಕೀಲರಾದ ಆದಿತ್ ಎಸ್ ಪೂಜಾರಿ, ತುಶಾರಿಕಾ ಮಟ್ಟೂ ಮತ್ತು ಕುನಾಲ್ ನೇಗಿ, ಕಲಿತಾ ಮತ್ತು ನರ್ವಾಲ್ ಅವರನ್ನು ಈ ಪ್ರಕರಣದಲ್ಲಿ ತಪ್ಪಾಗಿ ಗುರುತಿಸಲಾಗಿದೆ ಎಂದು ವಾದಿಸಿದರು.

“ಪ್ರಕರಣದ ಸಂಗತಿಗಳು ಮತ್ತು ಸನ್ನಿವೇಶಗಳನ್ನು ಮತ್ತು ತನಿಖೆಯ ಆರಂಭಿಕ ಹಂತವನ್ನು ಪರಿಗಣಿಸಿ, ಆರೋಪಿಗಳನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ವಿಧಿಸಲಾಗಿದೆ” ಎಂದು ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

ಕಲಿತಾ ಜೆಎನ್‌ಯುನ ಮಹಿಳಾ ಅಧ್ಯಯನ ಕೇಂದ್ರದಲ್ಲಿ ಎಂಫಿಲ್ ವಿದ್ಯಾರ್ಥಿಯಾಗಿದ್ದರೆ, ನರ್ವಾಲ್ ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದಾಳೆ. ಅವರಿಬ್ಬರೂ 2015 ರಲ್ಲಿ ರೂಪುಗೊಂಡ ಪಿಂಜ್ರಾ ತೋಡ್‌ ಸಂಘಟನೆಯ ಸ್ಥಾಪಕ ಸದಸ್ಯರಾಗಿದ್ದಾರೆ. ಇದು ಮುಖ್ಯವಾಗಿ ದೆಹಲಿಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿನ ಹಾಸ್ಟೆಲ್ ಕರ್ಫ್ಯೂಗಳನ್ನು ವಿರೋಧಿಸುತ್ತದೆ.

ಪೊಲೀಸರ ಈ ಮರುಬಂಧನದ ಕ್ರಮವನ್ನು ಜೆಎನ್‌ಯು ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿ ಸಂಘ ತೀವ್ರವಾಗಿ ಖಂಡಿಸಿವೆ. “ದೆಹಲಿ ಪೊಲೀಸರು ಬಂಧಿಸಿದ ಮಾದರಿ ನಮಗೆ ಆಘಾತ ತಂದಿದೆ. ದೆಹಲಿ ಗಲಭೆಯ ಕುರಿತು ಹಲವಾರು ಸ್ವತಂತ್ರ ಸತ್ಯಶೋಧನಾ ತಂಡಗಳು ದಾಖಲಿಸಿರುವ ಹಿಂಸಾಚಾರದ ವರದಿಗಳನ್ನು ಪೊಲೀಸರು ಸತತವಾಗಿ ನಿರಾಕರಿಸಿದ್ದಾರೆ. ಗಲಭೆ ನಡೆಯುವ ಮೊದಲು ದ್ವೇಷವನ್ನು ಹುಟ್ಟುಹಾಕುವ ಮತ್ತು ಹಿಂಸಾಚಾರವನ್ನು ಒತ್ತಾಯಿಸುವ ಹೇಳಿಕೆಗಳನ್ನು ನೀಡಿದವರ ಕುರಿತು ಹಲವಾರು ಟಿವಿ ಕ್ಯಾಮೆರಾಗಳು ಪದೇ ಪದೇ ತೋರಿಸಿತ್ತಿದ್ದರೂ ಅವರನ್ನು ಪೊಲೀಸರು ಬಂಧಿಸಿಲ್ಲ. ಬದಲಿಗೆ ಪ್ರಜಾಪ್ರಭುತ್ವ ರೀತಿಯಲ್ಲಿ ಸರ್ಕಾರದ ನಡೆಗಳನ್ನು ವಿರೋಧಿಸಿದ ನಾಗರೀಕರನ್ನು ದೆಹಲಿ ಪೊಲೀಸರು ಭೇಟೆಯಾಡುತ್ತಿದ್ದಾರೆ. ಸ್ಪಷ್ಟವಾಗಿ ಸಂವಿಧಾನ ವಿರೋಧಿ ಕೃತ್ಯದಲ್ಲಿ ದೆಹಲಿ ಪೊಲೀಸರು ತೊಡಿಗಿದ್ದಾರೆ ಎಂದು ಜೆಎನ್‌ಯು ಶಿಕ್ಷಕರ ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಜೆಎನ್‌ಯು ವಿದ್ಯಾರ್ಥಿ ಸಂಘವು ತನ್ನ ಹೇಳಿಕೆಯಲ್ಲಿ “ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಪಿಲ್ ಮಿಶ್ರಾನನ್ನು ದೆಹಲಿ ಪೊಲೀಸರು ಬಂಧಿಸುವುದಿರಲಿ, ಎಂದಿಗೂ ಆತನ ಒಂದೇ ರೀತಿಯ ಅಚಾತುರ್ಯವನ್ನು ಪ್ರಶ್ನಿಸಿಲ್ಲ… ಇಬ್ಬರು ಮಹಿಳಾ ಕಾರ್ಯಕರ್ತರನ್ನು ಈಗ ಬಂಧಿಸುವ ಮೂಲಕ ನ್ಯಾಯ ಮತ್ತು ಕಾನೂನಿನ ನಿಯಮಗಳು ದುಷ್ಟರ ಕೈಯಲ್ಲಿವೆ ಎಂದು ಸಾಬೀತುಪಡಿಸಿದ್ದಾರೆ” ಎಂದು ಟೀಕಿಸಿದೆ.


ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...