Homeಮುಖಪುಟಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ವರದಿ ಮಾಡದಂತೆ ತಡೆಯಲು ಸಾಧ್ಯವಿಲ್ಲ: ಸುಪ್ರೀಂ

ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ವರದಿ ಮಾಡದಂತೆ ತಡೆಯಲು ಸಾಧ್ಯವಿಲ್ಲ: ಸುಪ್ರೀಂ

- Advertisement -
- Advertisement -

ನ್ಯಾಯಾಲಯದ ಯಾವುದೆ ವಿಚಾರಣೆಯನ್ನು ವರದಿ ಮಾಡದಂತೆ ಮಾಧ್ಯಮಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ಆದರೆ ಮಾಧ್ಯಮಗಳು ನ್ಯಾಯಾಲಯದಲ್ಲಿ ಏನಾಗುತ್ತಿದೆ ಎಂಬುವುದನ್ನು ಸಂಪೂರ್ಣವಾಗಿ ವರದಿ ಮಾಡಬೇಕು ಎಂದು ಅದು ಹೇಳಿದೆ.

“ಮಾಧ್ಯಮವು ಶಕ್ತಿಯುತವಾಗಿದೆ, ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬುದನ್ನು ತಿಳಿಸುತ್ತದೆ. ನಮ್ಮ ತೀರ್ಪುಗಳು ಮಾತ್ರವಲ್ಲದೆ, ಜನರ ಹಿತಕ್ಕಾಗಿ ಪ್ರಶ್ನೆಗಳು, ಉತ್ತರಗಳು ಮತ್ತು ಹೇಳಿಕೆಗಳನ್ನು ಮುಂದಿಡುತ್ತದೆ. ಆದರೆ ಮಾಧ್ಯಮಗಳು ನ್ಯಾಯಾಲಯದ ಹೇಳಿಕೆಗಳನ್ನು ವರದಿ ಮಾಡದೇ ಇರುವುದು ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಇದನ್ನೂ ಓದಿ: ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

ಕಳೆದ ವಾರ ಮದ್ರಾಸ್ ಹೈಕೋರ್ಟ್ ಮಾಡಿದ ಹೇಳಿಕೆಗಳು, ಆಯೋಗದ ಘನತೆಗೆ ಧಕ್ಕೆ ತಂದಿವೆ ಮತ್ತು ಕೋರ್ಟ್ ಆದೇಶದಲ್ಲಿ ಇರದ, ಮೌಖಿಕವಾಗಿ ಪ್ರಸ್ತಾಪಿಸಿದ ಆಕ್ಷೇಪಣೆಗಳನ್ನು ವರದಿ ಮಾಡುವುದನ್ನು ಮಾಧ್ಯಮಗಳು ನಿಲ್ಲಿಸಬೇಕೆಂದು ಚುನಾವಣಾ ಆಯೋಗ ಆಗ್ರಹಿಸಿದ ಅರ್ಜಿ ವಿಚಾರಣೆ ವೇಳೆ ಕೊರ್ಟ್ ಹೀಗೆ ಅಭಿಪ್ರಾಯ ಪಟ್ಟಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಐದು ರಾಜ್ಯಗಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನಡೆದ ರಾಜಕೀಯ ರ್‍ಯಾಲಿಗಳ ವಿಷಯಗಳಲ್ಲಿ ಸುಪ್ರೀಂಕೋರ್ಟ್ ಚುನಾವಣಾ ಆಯೋಗದ ಮೇಲೆ ‘ಬಹುಷಃ ಕೊಲೆ ಪ್ರಕರಣ ದಾಖಲಿಸಬೇಕು’ ಎಂದು ಕಟುವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ವಿಚಾರವಾಗಿ ಮಾಧ್ಯಮಗಳು ವರದಿ ಮಾಡದಂತೆ ಆಯೋಗವು ಕೋರ್ಟ್‌ ಮೆಟ್ಟಿಲೇರಿತ್ತು.

“ಚುನಾವಣಾ ಆಯೋಗಕ್ಕೆ ಯಾವುದೇ ಅವಕಾಶ ನೀಡದೆ ಅಥವಾ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜವಾಬ್ದಾರಿಯುತ ಅಧಿಕಾರಿಗಳಿಂದ ಯಾವುದೇ ಉತ್ತರವನ್ನು ಪಡೆಯದೆ, ನಮ್ಮನ್ನು ಅಪರಾಧಿಗಳನ್ನಾಗಿ ಮಾಡಲಾಗಿದೆ” ಎಂದು ಚುನಾವಣಾ ಆಯೋಗವು ಇಂದು ವಾದಿಸಿದೆ.

“ನ್ಯಾಯಾಲಯದ ವಿಚಾರಣೆಯ ವಿಷಯಗಳನ್ನು ಮಾಧ್ಯಮಗಳು ವರದಿ ಮಾಡುವಂತಿಲ್ಲ ಎಂದು ನಾವು ಇಂದಿನ ಕಾಲದಲ್ಲಿ ಹೇಳಲು ಸಾಧ್ಯವಿಲ್ಲ. ಅಂತಿಮ ಆದೇಶದಂತೆಯೆ, ನ್ಯಾಯಾಲಯದಲ್ಲಿ ನಡೆಯುವ ಚರ್ಚೆಗಳು ಕೂಡಾ ಸಮಾನ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿವೆ” ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಚುನಾವಣಾ ಆಯೋಗ, ಈಗ ಆಡಳಿತಾರೂಡರ “ಚುನಾವಣಾ ಏಜೆಂಟ್ “ಆಗಿ ಪರಿವರ್ತನೆ ಆಗಿದೆ. ಇಂತಹ ವಿಶಮ ಪರಿಸ್ಥಿತಿಯಲ್ಲಿ ನಮ್ಮ ನ್ಯಾಯಾಂಗವು, ನಮ್ಮ ವಾಕ್ ಸ್ವಾತಂತ್ರ್ಯವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...