Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಾರೆಂಟ್‌ ಜಾರಿ

ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಾರೆಂಟ್‌ ಜಾರಿ

- Advertisement -
- Advertisement -

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗದ ಕಾರಣ ವಾರೆಂಟ್ ಜಾರಿಗೊಳಿಸಿದೆ.

ವಿಶೇಷ ನ್ಯಾಯಮೂರ್ತಿ ಎ.ಕೆ. ಲಾಹೋಟಿ, ಪ್ರಜ್ಞಾ ಸಿಂಗ್ ಠಾಕೂರ್‌ಗೆ 10 ಸಾವಿರ ಮೊತ್ತದೊಂದಿಗೆ ವಾರಂಟ್‌ ಜಾರಿಗೊಳಿಸಿದ್ದು, ಮಾರ್ಚ್ 20ರ ಹೊತ್ತಿಗೆ ವಿಚಾರಣೆಯ ಕುರಿತ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿದ್ದಾರೆ.

ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಹಾಗೂ ಭಾರತೀಯ ದಂಡ ಸಂಹಿತೆ (ಐಪಿಸಿ)ಯ ನಿಯಮಗಳ ಅಡಿಯ ಪ್ರಕರಣದಲ್ಲಿ ಠಾಕೂರ್ ಹಾಗೂ ಇತರ ಆರು ಮಂದಿ ವಿಚಾರಣೆ ಎದುರಿಸುತ್ತಿದ್ದಾರೆ. ಎನ್‌ಐಎ ಪ್ರಸಕ್ತ ಸಿಆರ್ಪಿಸಿ ಅಡಿಯಲ್ಲಿ ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದೆ.

ಪ್ರಜ್ಞಾ ಸಿಂಗ್ ಠಾಕೂರ್‌ನ್ನು ಪ್ರತಿನಿಧಿಸಿದ ವಕೀಲ ಪ್ರಶಾಂತ್ ಮಗ್ಗು, ವೈದ್ಯಕೀಯ ಪ್ರಮಾಣಪತ್ರದೊಂದಿಗೆ ವಿನಾಯಿತಿ ಅರ್ಜಿಯನ್ನು ಸಲ್ಲಿಸಿದ್ದಾರೆ, ಅವರು ಅಸ್ವಸ್ಥರಾಗಿರುವ ಕಾರಣ ಭೋಪಾಲ್ ಸಂಸದರು ನ್ಯಾಯಾಲಯಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಕೋರ್ಟ್‌ನಲ್ಲಿ ಹೇಳಿಕೊಂಡಿದ್ದರು. ಆದರೆ, ವಿನಾಯಿತಿ ಅರ್ಜಿಗೆ ಲಗತ್ತಿಸಲಾದ ವೈದ್ಯಕೀಯ ಪ್ರಮಾಣಪತ್ರವು ಕೇವಲ ಫೋಟೋಕಾಪಿಯಾಗಿದ್ದು, ವೈದ್ಯರು ನೀಡಿದ ಮೂಲ ದಾಖಲೆಯಲ್ಲ ಎಂದು ನ್ಯಾಯಾಲಯವು ಗಮನಿಸಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಇದ್ದರೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಈ ಮೊದಲೇ ಪ್ರಜ್ಞಾ ಠಾಕೂರ್‌ಗೆ ಕೋರ್ಟ್ ಎಚ್ಚರಿಕೆ ನೀಡಿತ್ತು.

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆಯು ಅಂತಿಮ ಹಂತದಲ್ಲಿದೆ. ನ್ಯಾಯಾಲಯವು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 313ರಡಿಯಲ್ಲಿ ಪ್ರಕರಣದ ಆರೋಪಿಗಳ ಹೇಳಿಕೆಗಳನ್ನು ದಾಖಲಿಸುತ್ತಿದೆ.

ಪ್ರಜ್ಞಾ ಠಾಕೂರ್ ತನ್ನ ವಿರುದ್ಧದ ವಾರಂಟ್ ರದ್ದುಪಡಿಸಲು ಮಾರ್ಚ್ 20ರಂದು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 29, 2008ರಂದು ಮಹಾರಾಷ್ಟ್ರದ ಮಾಲೆಗಾಂವ್‌ನ ಮಸೀದಿಯೊಂದರ ಬಳಿ ಮೋಟಾರ್‌ಸೈಕಲ್‌ಗೆ ಕಟ್ಟಲಾದ ಸ್ಫೋಟಕ ಸಾಧನವು ಸ್ಫೋಟಗೊಂಡಿದ್ದು, ಆರು ಜನರು ಸಾವನ್ನಪ್ಪಿದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 2011ರಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು. ಅದಕ್ಕೂ ಮೊದಲು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ತನಿಖೆ ನಡೆಸುತ್ತಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಹಾಲಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್, ನಿವೃತ್ತ ಮೇಜರ್ ರಮೇಶ್ ಉಪಾಧ್ಯ, ಅಜಯ್ ರಹೀರ್‌ಕರ್, ಸುಧಾಕರ್ ಚತುರ್ವೇದಿ, ಸುಧಾಕರ್ ದ್ವಿವೇದಿ ಹಾಗೂ ಸಮೀರ್ ಕುಲಕರ್ಣಿಯನ್ನು ಐಪಿಸಿ ಹಾಗೂ ಯುಎಪಿಎ ಕಾಯ್ದೆಯಡಿಯಲ್ಲಿ ಬಂಧಿಸಲಾಗಿತ್ತು.

ಡಿಸೆಂಬರ್ 2018ರಿಂದ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈವರೆಗೆ 323ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎಲ್ಲರ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ. ಸದ್ಯದ ಮಟ್ಟಿಗೆ ಸರ್ಕಾರಿ ಪರ ವಕೀಲರ ಸಾಕ್ಷ್ಯ ಸಂಗ್ರಹ ಮುಕ್ತಾಯಗೊಂಡಿದ್ದು, ಆರೋಪಿಗಳು ಈ ಸಾಕ್ಷ್ಯಗಳ ವಿರುದ್ಧವಾಗಿ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿದೆ.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...