Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಾರೆಂಟ್‌ ಜಾರಿ

ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಾರೆಂಟ್‌ ಜಾರಿ

- Advertisement -
- Advertisement -

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗದ ಕಾರಣ ವಾರೆಂಟ್ ಜಾರಿಗೊಳಿಸಿದೆ.

ವಿಶೇಷ ನ್ಯಾಯಮೂರ್ತಿ ಎ.ಕೆ. ಲಾಹೋಟಿ, ಪ್ರಜ್ಞಾ ಸಿಂಗ್ ಠಾಕೂರ್‌ಗೆ 10 ಸಾವಿರ ಮೊತ್ತದೊಂದಿಗೆ ವಾರಂಟ್‌ ಜಾರಿಗೊಳಿಸಿದ್ದು, ಮಾರ್ಚ್ 20ರ ಹೊತ್ತಿಗೆ ವಿಚಾರಣೆಯ ಕುರಿತ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿದ್ದಾರೆ.

ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಹಾಗೂ ಭಾರತೀಯ ದಂಡ ಸಂಹಿತೆ (ಐಪಿಸಿ)ಯ ನಿಯಮಗಳ ಅಡಿಯ ಪ್ರಕರಣದಲ್ಲಿ ಠಾಕೂರ್ ಹಾಗೂ ಇತರ ಆರು ಮಂದಿ ವಿಚಾರಣೆ ಎದುರಿಸುತ್ತಿದ್ದಾರೆ. ಎನ್‌ಐಎ ಪ್ರಸಕ್ತ ಸಿಆರ್ಪಿಸಿ ಅಡಿಯಲ್ಲಿ ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದೆ.

ಪ್ರಜ್ಞಾ ಸಿಂಗ್ ಠಾಕೂರ್‌ನ್ನು ಪ್ರತಿನಿಧಿಸಿದ ವಕೀಲ ಪ್ರಶಾಂತ್ ಮಗ್ಗು, ವೈದ್ಯಕೀಯ ಪ್ರಮಾಣಪತ್ರದೊಂದಿಗೆ ವಿನಾಯಿತಿ ಅರ್ಜಿಯನ್ನು ಸಲ್ಲಿಸಿದ್ದಾರೆ, ಅವರು ಅಸ್ವಸ್ಥರಾಗಿರುವ ಕಾರಣ ಭೋಪಾಲ್ ಸಂಸದರು ನ್ಯಾಯಾಲಯಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಕೋರ್ಟ್‌ನಲ್ಲಿ ಹೇಳಿಕೊಂಡಿದ್ದರು. ಆದರೆ, ವಿನಾಯಿತಿ ಅರ್ಜಿಗೆ ಲಗತ್ತಿಸಲಾದ ವೈದ್ಯಕೀಯ ಪ್ರಮಾಣಪತ್ರವು ಕೇವಲ ಫೋಟೋಕಾಪಿಯಾಗಿದ್ದು, ವೈದ್ಯರು ನೀಡಿದ ಮೂಲ ದಾಖಲೆಯಲ್ಲ ಎಂದು ನ್ಯಾಯಾಲಯವು ಗಮನಿಸಿದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಇದ್ದರೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಈ ಮೊದಲೇ ಪ್ರಜ್ಞಾ ಠಾಕೂರ್‌ಗೆ ಕೋರ್ಟ್ ಎಚ್ಚರಿಕೆ ನೀಡಿತ್ತು.

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆಯು ಅಂತಿಮ ಹಂತದಲ್ಲಿದೆ. ನ್ಯಾಯಾಲಯವು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 313ರಡಿಯಲ್ಲಿ ಪ್ರಕರಣದ ಆರೋಪಿಗಳ ಹೇಳಿಕೆಗಳನ್ನು ದಾಖಲಿಸುತ್ತಿದೆ.

ಪ್ರಜ್ಞಾ ಠಾಕೂರ್ ತನ್ನ ವಿರುದ್ಧದ ವಾರಂಟ್ ರದ್ದುಪಡಿಸಲು ಮಾರ್ಚ್ 20ರಂದು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 29, 2008ರಂದು ಮಹಾರಾಷ್ಟ್ರದ ಮಾಲೆಗಾಂವ್‌ನ ಮಸೀದಿಯೊಂದರ ಬಳಿ ಮೋಟಾರ್‌ಸೈಕಲ್‌ಗೆ ಕಟ್ಟಲಾದ ಸ್ಫೋಟಕ ಸಾಧನವು ಸ್ಫೋಟಗೊಂಡಿದ್ದು, ಆರು ಜನರು ಸಾವನ್ನಪ್ಪಿದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 2011ರಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು. ಅದಕ್ಕೂ ಮೊದಲು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ತನಿಖೆ ನಡೆಸುತ್ತಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಹಾಲಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್, ನಿವೃತ್ತ ಮೇಜರ್ ರಮೇಶ್ ಉಪಾಧ್ಯ, ಅಜಯ್ ರಹೀರ್‌ಕರ್, ಸುಧಾಕರ್ ಚತುರ್ವೇದಿ, ಸುಧಾಕರ್ ದ್ವಿವೇದಿ ಹಾಗೂ ಸಮೀರ್ ಕುಲಕರ್ಣಿಯನ್ನು ಐಪಿಸಿ ಹಾಗೂ ಯುಎಪಿಎ ಕಾಯ್ದೆಯಡಿಯಲ್ಲಿ ಬಂಧಿಸಲಾಗಿತ್ತು.

ಡಿಸೆಂಬರ್ 2018ರಿಂದ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈವರೆಗೆ 323ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎಲ್ಲರ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ. ಸದ್ಯದ ಮಟ್ಟಿಗೆ ಸರ್ಕಾರಿ ಪರ ವಕೀಲರ ಸಾಕ್ಷ್ಯ ಸಂಗ್ರಹ ಮುಕ್ತಾಯಗೊಂಡಿದ್ದು, ಆರೋಪಿಗಳು ಈ ಸಾಕ್ಷ್ಯಗಳ ವಿರುದ್ಧವಾಗಿ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿದೆ.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...