Homeಅಂಕಣಗಳುನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

ನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

- Advertisement -
- Advertisement -

 ಗೌರಿ ಲಂಕೇಶ್
14 ಜನವರಿ, 2014 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಕೋರ್ಟಿಗೆ ಹೋದಾಗಲೆಲ್ಲಾ ಅಲ್ಲಿಗೆ ಬರುವ ತರಹೇವಾರಿ ಜನರನ್ನು ಗಮನಿಸುತ್ತಾ ಕಾಲ ಕಳೆಯುತ್ತೇನೆ. ಹಲವೊಮ್ಮೆ ನನ್ನ ಕುತೂಹಲ ಕೆರಳಿಸಿದವರನ್ನು ಮಾತನಾಡಿಸುತ್ತೇನೆ. ಆಗ ವಿಚಿತ್ರ ರೀತಿಯ ಜನಗಳ, ಸಮಸ್ಯೆ ಬದುಕುಗಳ ಕಿರುನೋಟ ನನಗೆ ದೊರಕುತ್ತದೆ.
ಇತ್ತೀಚೆಗೆ ಕೋರ್ಟ್ ಹಾಲ್ ಒಂದರಲ್ಲಿ ನನ್ನ ಪಕ್ಕ ಸುಮಾರು 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕೂತಿದ್ದರು. ಅವರ ಮುಖದಲ್ಲಿ ಆತಂಕ, ಜಿಗುಪ್ಸೆ ತುಂಬಿತ್ತು. ಆಕೆಯೊಂದಿಗೆ ಮಾತನಾಡಿದಾಗ ಗೊತ್ತಾಗಿದ್ದು, ಅವರ ಮನೆಯನ್ನು ಅದ್ಯಾರಿಗೋ ಬಾಡಿಗೆ ಮೇಲೆ ನೀಡಿದ್ದರಂತೆ. ಆದರೆ ಬಾಡಿಗೆದಾರ ಎಂತೆಂತಹದ್ದೋ ತಕರಾರುಗಳನ್ನು ಎತ್ತಿ ಇವರ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಹತ್ತಿದನಂತೆ. ಅ ವ್ಯಾಜ್ಯ ಐದಾರು ವರ್ಷ ನಡೆದು ಇನ್ನೇನು ತೀರ್ಪು ಬರಬೇಕು ಎನ್ನುವಾಗ ತಾನು ಬಾಡಿಗೆ ನೀಡುವುದಾಗಿ ಈ ಮಹಿಳೆಯ ಗಂಡನನ್ನು ಕರೆದನಂತೆ, ಆತನನ್ನು ಭೇಟಿಯಾಗಲೂ ಹೋದ ಗಂಡ ಎರಡು ದಿನವಾದರೂ ಮನೆಗೆ ಹಿಂದಿರುಗಲಿಲ್ಲ. ಬದಲಾಗಿ ಆತನ ಹೆಣ ಬೆಂಗಳೂರಿನ ಕೆರೆಯೊಂದರಲ್ಲಿ ಸಿಕ್ಕಿತು. ಬಾಡಿಗೆದಾರನೇ ಕೊಲೆ ಮಾಡಿಸಿದ್ದಾನೆಂದು ಈಕೆ ಪೊಲೀಸರಿಗೆ ದೂರು ನೀಡಿದರು. ಆದರೆ ಬಾಡಿಗೆದಾರನೊಂದಿಗೆ ಶಾಮೀಲಾದ ಪೊಲೀಸರು ಕೊಲೆಗಡುಕ ಸಿಕ್ಕಿಲ್ಲವೆಂದು ವರದಿ ಸಲ್ಲಿಸಿದರು. ಆಗ ಮಹಿಳೆ ಬಾಡಿಗೆದಾರ ಮತ್ತು ಪೊಲೀಸರ ವಿರುದ್ದ ನ್ಯಾಯಾಲಯದ ಮೊರೆಹೋದರು.
ಇದೆಲ್ಲಾ ನಡೆದು ಬರೋಬ್ಬರಿ 16 ವರ್ಷಗಳಾಗಿವೆ. ಈ ಮಧ್ಯೆ ಈಕೆಯ ಮಕ್ಕಳು ಬೆಳೆದು ನಿಂತಿದ್ದಾರೆ. ಪೊಲೀಸ್ ಅಧಿಕಾರಿ ನಿವೃತ್ತಿ ಪಡೆದು ತನ್ನ ಮನೆ ಸೇರಿದ್ದಾನೆ. ಬಾಡಿಗೆದಾರ ಇನ್ನೂ ಅದೇ ಮನೆಯಲ್ಲಿ ವಾಸಿಸುತ್ತಿದ್ದಾನೆ. ಆದರೆ ಈ ಮಹಿಳೆಯ ಅರ್ಜಿ ಅಂದು ಎಲ್ಲಿತ್ತೋ ಇವತ್ತಿಗೂ ಅಲ್ಲೇ ಇದೆ. ಆಕೆಗೆ ಬಾಡಿಗೆಯೂ ಬಂದಿಲ್ಲ. ಆಸ್ತಿಯೂ ವಾಪಸ್ಸಾಗಿಲ್ಲ, ನ್ಯಾಯವಂತೂ ಸಿಕ್ಕಿಲ್ಲ, ಈ ವ್ಯಾಜ್ಯ ಮ್ಯಾಜಿಸ್ಟ್ರೇಟರ ನಂತರ ಹೈಕೋರ್ಟಿಗೆ ಹೋಗಿ ಅಂತ್ಯಗೊಳ್ಳುವುದು ಇನ್ನು ಎಷ್ಟು ವರ್ಷಕ್ಕೋ?
ಇನ್ನೊಂದು ವಿಚಿತ್ರ ಪ್ರಕರಣ. ಸುಮಾರು 45 ಪ್ರಾಯದ ಈಕೆ ರಾಜ್ಯ ಸರ್ಕಾರಿ ನೌಕರಿಯಲ್ಲಿದ್ದಾರೆ. ಈಕೆಯ ಗಂಡ ಕೇಂದ್ರ ಸರ್ಕಾರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದಾನೆ. ಈಕೆ ಮದುವೆಯಾದ ಕೆಲ ವರ್ಷಗಳಲ್ಲೇ ಗಂಡ ಮತ್ತೊಬ್ಬಳನ್ನು ಮದುವೆಯಾದಾಗ ಈಕೆ ಆತನನ್ನು ತೊರೆದು ತಾನಾಯಿತು ತನ್ನ ಪಾಡಾಯಿತು ಎಂದು ಏಕಾಂಗಿ ಜೀವನ ಸಾಗಿಸಲಾರಂಭಿಸಿದಳು. ಆದರೆ ಗಂಡನ ಕಾಟ ಮುಂದುವರೆಯಿತು. ಆತ ಸರ್ಕಾರಿ ನೌಕರನಾದ್ದರಿಂದ ತನ್ನ ಎರಡನೇ ಪತ್ನಿಯ ಬಗ್ಗೆ ದಾಖಲಿಸುವಂತಿಲ್ಲ. ಆದ್ದರಿಂದ ಎರಡನೇ ಪತ್ನಿಯೊಂದಿಗೆ ಮಕ್ಕಳಾದಾಗ ಆತ ಆಸ್ಪತ್ರೆಯಲ್ಲಿ ತಾಯಿಯ ಹೆಸರು ನಮೂದಿಸಬೇಕಿದ್ದ ಜಾಗದಲ್ಲಿ ತನ್ನ ಮೊದಲನೆ ಹೆಂಡತಿಯ ಹೆಸರನ್ನೇ ದಾಖಲಿಸಿದ್ದ. ಇದು ಮೊದಲನೇ ಪತ್ನಿಗೆ ಗೊತ್ತಾದಾಗ ಆಕೆ ಕೆಂಡಾಮಂಡಲವಾದಳು. ತನ್ನ ಬದುಕನ್ನು ಹಾಳು ಮಾಡಿ ಏಕಾಂಗಿಯಾಗಿ ಸದ್ದಿಲ್ಲದೇ ತನ್ನದಲ್ಲದ ಮಕ್ಕಳನ್ನು ತನ್ನ ತಲೆಗೆ ಕಟ್ಟುತ್ತಿರುವ ನಾಳೆ ತನ್ನ ಚೂರುಪಾರು ಆಸ್ತಿಗೂ ಆತನ ಎರಡನೇ ಪತ್ನಿಯ ಮಕ್ಕಳು ತಾವೇ ವಾರಸುದಾರರು ಎಂದು ವಾದಿಸಿದರೆ ಏನು ಗತಿ ಎಂದು ಚಿಂತಿಸಿ ಗಂಡನ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಏರಿದಳು. ಆ ಮಕ್ಕಳು ತನ್ನ ಮಕ್ಕಳಲ್ಲ, ಅವರುಗಳ ತಾಯಿ ತಾನಲ್ಲ ಎಂಬ ತೀರ್ಪು ಕೋರಿದಳು.
ಆಕೆ ಇಂಥದ್ದೊಂದು ಅರ್ಜಿ ಸಲ್ಲಿಸಿ, ಈಗ ಹನ್ನೊಂದು ವರ್ಷಗಳಾಗಿವೆ. ಆದರೆ ಅರ್ಜಿ ಮಾತ್ರ ಮುಂದಕ್ಕೆ ಹೋಗದೇ ಎಲ್ಲಿದೆಯೋ ಅಲ್ಲೇ ಇದೆ. ಇದನ್ನೆಲ್ಲಾ ಹೇಳಿದಕ್ಕೆ ಕಾರಣವಿದೆ. ಇವತ್ತು 21 ಹೈಕೋರ್ಟ್‍ಗಳ ಮುಂದೆ ಮೂವತ್ತು ಲಕ್ಷಕ್ಕಿಂತಲೂ ಹೆಚ್ಚು ಕೇಸುಗಳಿವೆ. ಇನ್ನು ಇತರೆ ನ್ಯಾಯಾಲಯಗಳ ಮುಂದೆ ಸುಮಾರು ಮೂರು ಕೋಟಿ ಕೇಸುಗಳಿವೆ. ಅಷ್ಟೇ ಅಲ್ಲ ದೇಶದಾದ್ಯಂತ ಕನಿಷ್ಠ ಮೂರು ಸಾವಿರ ಜಡ್ಜ್‍ಗಳ ಕೊರತೆ ಇದೆ. ಹೀಗಿರುವಾಗ ಈ ಲಕ್ಷಾಂತರ ಕೇಸುಗಳು ಇತ್ಯರ್ಥವಾಗುವುದೆಂದು? ಜನಸಾಮಾನ್ಯರಿಗೆ ನ್ಯಾಯ ಸಿಗುವುದೆಂದು?
ನಮ್ಮ ನ್ಯಾಯ ವ್ಯವಸ್ಥೆಯ ಒಂದು ಮಗ್ಗಲು ಇದಾದರೆ ಇನ್ನೊಂದು ಮಗ್ಗಲು ನಮ್ಮ ಜೈಲಿನಲ್ಲಿರುವ ಎರಡೂವರೆ ಲಕ್ಷ ವಿಚಾರಣಾಧೀನ ಬಂಧಿಗಳು. ಅವರಲ್ಲಿ ಬಹಳಷ್ಟು ಜನ ಐದು ವರ್ಷಕ್ಕಿಂತಲೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ.
ಒಂದು ಅಂದಾಜಿನ ಪ್ರಕಾರ ಬಹಳಷ್ಟು ವಿಚಾರಣಾಧೀನ ಖೈದಿಗಳ ವಿರುದ್ದದ ಕೇಸುಗಳು ಸಾಬೀತಾಗದೆ ಕೊನೆಗೆ ಅವರು ನಿರಪರಾಧಿಗಳು ಎಂದು ಬಿಡುಗಡೆ ಹೊಂದುತ್ತಾರೆ. ಆದರೆ ಅಷ್ಟರ ಮಟ್ಟಿಗೆ ಅವರ ಬದುಕಿನ ಹಲವಾರು ವರ್ಷಗಳು ಜೈಲಿನಲ್ಲೇ ಕಳೆದು ಹೋಗಿರುತ್ತದಲ್ಲದೇ, ಅವರು ಬಿಡುಗಡೆಗೊಂಡು ಹೊರಬರುವ ಹೊತ್ತಿಗೆ ಸಮಾಜದಲ್ಲಿನ ಅವರ ಮಾನ ಮತ್ತು ಬದುಕಿನ ಅವಕಾಶಗಳು ನಾಶವಾಗಿರುತ್ತವೆ. ಹಾಗೆಯೇ ಬಹಳಷ್ಟು ಪ್ರಕರಣಗಳಲ್ಲಿ ವಿಚಾರಣಾಧೀನ ಖೈದಿಯೇ ಆತನ ಸಂಸಾರದ ಆರ್ಥಿಕ ಸ್ತಂಭವಾಗಿರುವುದರಿಂದ ಆತ ಜೈಲಿನಲ್ಲಿರುವಾಗ ಆ ಸಂಸಾರವೇ ಛಿದ್ರಗೊಂಡಿರುತ್ತದೆ. ಇದೆಲ್ಲದರ ಅರ್ಥ ಕೊನೆಗೂ ವಿಚಾರಣಾಧೀನ ಖೈದಿಗೆ ನ್ಯಾಯ ಸಿಕ್ಕರೂ ಅನ್ಯಾಯವಾಗಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...