Homeಅಂಕಣಗಳುನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

ನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

- Advertisement -
- Advertisement -

 ಗೌರಿ ಲಂಕೇಶ್
14 ಜನವರಿ, 2014 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಕೋರ್ಟಿಗೆ ಹೋದಾಗಲೆಲ್ಲಾ ಅಲ್ಲಿಗೆ ಬರುವ ತರಹೇವಾರಿ ಜನರನ್ನು ಗಮನಿಸುತ್ತಾ ಕಾಲ ಕಳೆಯುತ್ತೇನೆ. ಹಲವೊಮ್ಮೆ ನನ್ನ ಕುತೂಹಲ ಕೆರಳಿಸಿದವರನ್ನು ಮಾತನಾಡಿಸುತ್ತೇನೆ. ಆಗ ವಿಚಿತ್ರ ರೀತಿಯ ಜನಗಳ, ಸಮಸ್ಯೆ ಬದುಕುಗಳ ಕಿರುನೋಟ ನನಗೆ ದೊರಕುತ್ತದೆ.
ಇತ್ತೀಚೆಗೆ ಕೋರ್ಟ್ ಹಾಲ್ ಒಂದರಲ್ಲಿ ನನ್ನ ಪಕ್ಕ ಸುಮಾರು 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕೂತಿದ್ದರು. ಅವರ ಮುಖದಲ್ಲಿ ಆತಂಕ, ಜಿಗುಪ್ಸೆ ತುಂಬಿತ್ತು. ಆಕೆಯೊಂದಿಗೆ ಮಾತನಾಡಿದಾಗ ಗೊತ್ತಾಗಿದ್ದು, ಅವರ ಮನೆಯನ್ನು ಅದ್ಯಾರಿಗೋ ಬಾಡಿಗೆ ಮೇಲೆ ನೀಡಿದ್ದರಂತೆ. ಆದರೆ ಬಾಡಿಗೆದಾರ ಎಂತೆಂತಹದ್ದೋ ತಕರಾರುಗಳನ್ನು ಎತ್ತಿ ಇವರ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಹತ್ತಿದನಂತೆ. ಅ ವ್ಯಾಜ್ಯ ಐದಾರು ವರ್ಷ ನಡೆದು ಇನ್ನೇನು ತೀರ್ಪು ಬರಬೇಕು ಎನ್ನುವಾಗ ತಾನು ಬಾಡಿಗೆ ನೀಡುವುದಾಗಿ ಈ ಮಹಿಳೆಯ ಗಂಡನನ್ನು ಕರೆದನಂತೆ, ಆತನನ್ನು ಭೇಟಿಯಾಗಲೂ ಹೋದ ಗಂಡ ಎರಡು ದಿನವಾದರೂ ಮನೆಗೆ ಹಿಂದಿರುಗಲಿಲ್ಲ. ಬದಲಾಗಿ ಆತನ ಹೆಣ ಬೆಂಗಳೂರಿನ ಕೆರೆಯೊಂದರಲ್ಲಿ ಸಿಕ್ಕಿತು. ಬಾಡಿಗೆದಾರನೇ ಕೊಲೆ ಮಾಡಿಸಿದ್ದಾನೆಂದು ಈಕೆ ಪೊಲೀಸರಿಗೆ ದೂರು ನೀಡಿದರು. ಆದರೆ ಬಾಡಿಗೆದಾರನೊಂದಿಗೆ ಶಾಮೀಲಾದ ಪೊಲೀಸರು ಕೊಲೆಗಡುಕ ಸಿಕ್ಕಿಲ್ಲವೆಂದು ವರದಿ ಸಲ್ಲಿಸಿದರು. ಆಗ ಮಹಿಳೆ ಬಾಡಿಗೆದಾರ ಮತ್ತು ಪೊಲೀಸರ ವಿರುದ್ದ ನ್ಯಾಯಾಲಯದ ಮೊರೆಹೋದರು.
ಇದೆಲ್ಲಾ ನಡೆದು ಬರೋಬ್ಬರಿ 16 ವರ್ಷಗಳಾಗಿವೆ. ಈ ಮಧ್ಯೆ ಈಕೆಯ ಮಕ್ಕಳು ಬೆಳೆದು ನಿಂತಿದ್ದಾರೆ. ಪೊಲೀಸ್ ಅಧಿಕಾರಿ ನಿವೃತ್ತಿ ಪಡೆದು ತನ್ನ ಮನೆ ಸೇರಿದ್ದಾನೆ. ಬಾಡಿಗೆದಾರ ಇನ್ನೂ ಅದೇ ಮನೆಯಲ್ಲಿ ವಾಸಿಸುತ್ತಿದ್ದಾನೆ. ಆದರೆ ಈ ಮಹಿಳೆಯ ಅರ್ಜಿ ಅಂದು ಎಲ್ಲಿತ್ತೋ ಇವತ್ತಿಗೂ ಅಲ್ಲೇ ಇದೆ. ಆಕೆಗೆ ಬಾಡಿಗೆಯೂ ಬಂದಿಲ್ಲ. ಆಸ್ತಿಯೂ ವಾಪಸ್ಸಾಗಿಲ್ಲ, ನ್ಯಾಯವಂತೂ ಸಿಕ್ಕಿಲ್ಲ, ಈ ವ್ಯಾಜ್ಯ ಮ್ಯಾಜಿಸ್ಟ್ರೇಟರ ನಂತರ ಹೈಕೋರ್ಟಿಗೆ ಹೋಗಿ ಅಂತ್ಯಗೊಳ್ಳುವುದು ಇನ್ನು ಎಷ್ಟು ವರ್ಷಕ್ಕೋ?
ಇನ್ನೊಂದು ವಿಚಿತ್ರ ಪ್ರಕರಣ. ಸುಮಾರು 45 ಪ್ರಾಯದ ಈಕೆ ರಾಜ್ಯ ಸರ್ಕಾರಿ ನೌಕರಿಯಲ್ಲಿದ್ದಾರೆ. ಈಕೆಯ ಗಂಡ ಕೇಂದ್ರ ಸರ್ಕಾರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದಾನೆ. ಈಕೆ ಮದುವೆಯಾದ ಕೆಲ ವರ್ಷಗಳಲ್ಲೇ ಗಂಡ ಮತ್ತೊಬ್ಬಳನ್ನು ಮದುವೆಯಾದಾಗ ಈಕೆ ಆತನನ್ನು ತೊರೆದು ತಾನಾಯಿತು ತನ್ನ ಪಾಡಾಯಿತು ಎಂದು ಏಕಾಂಗಿ ಜೀವನ ಸಾಗಿಸಲಾರಂಭಿಸಿದಳು. ಆದರೆ ಗಂಡನ ಕಾಟ ಮುಂದುವರೆಯಿತು. ಆತ ಸರ್ಕಾರಿ ನೌಕರನಾದ್ದರಿಂದ ತನ್ನ ಎರಡನೇ ಪತ್ನಿಯ ಬಗ್ಗೆ ದಾಖಲಿಸುವಂತಿಲ್ಲ. ಆದ್ದರಿಂದ ಎರಡನೇ ಪತ್ನಿಯೊಂದಿಗೆ ಮಕ್ಕಳಾದಾಗ ಆತ ಆಸ್ಪತ್ರೆಯಲ್ಲಿ ತಾಯಿಯ ಹೆಸರು ನಮೂದಿಸಬೇಕಿದ್ದ ಜಾಗದಲ್ಲಿ ತನ್ನ ಮೊದಲನೆ ಹೆಂಡತಿಯ ಹೆಸರನ್ನೇ ದಾಖಲಿಸಿದ್ದ. ಇದು ಮೊದಲನೇ ಪತ್ನಿಗೆ ಗೊತ್ತಾದಾಗ ಆಕೆ ಕೆಂಡಾಮಂಡಲವಾದಳು. ತನ್ನ ಬದುಕನ್ನು ಹಾಳು ಮಾಡಿ ಏಕಾಂಗಿಯಾಗಿ ಸದ್ದಿಲ್ಲದೇ ತನ್ನದಲ್ಲದ ಮಕ್ಕಳನ್ನು ತನ್ನ ತಲೆಗೆ ಕಟ್ಟುತ್ತಿರುವ ನಾಳೆ ತನ್ನ ಚೂರುಪಾರು ಆಸ್ತಿಗೂ ಆತನ ಎರಡನೇ ಪತ್ನಿಯ ಮಕ್ಕಳು ತಾವೇ ವಾರಸುದಾರರು ಎಂದು ವಾದಿಸಿದರೆ ಏನು ಗತಿ ಎಂದು ಚಿಂತಿಸಿ ಗಂಡನ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಏರಿದಳು. ಆ ಮಕ್ಕಳು ತನ್ನ ಮಕ್ಕಳಲ್ಲ, ಅವರುಗಳ ತಾಯಿ ತಾನಲ್ಲ ಎಂಬ ತೀರ್ಪು ಕೋರಿದಳು.
ಆಕೆ ಇಂಥದ್ದೊಂದು ಅರ್ಜಿ ಸಲ್ಲಿಸಿ, ಈಗ ಹನ್ನೊಂದು ವರ್ಷಗಳಾಗಿವೆ. ಆದರೆ ಅರ್ಜಿ ಮಾತ್ರ ಮುಂದಕ್ಕೆ ಹೋಗದೇ ಎಲ್ಲಿದೆಯೋ ಅಲ್ಲೇ ಇದೆ. ಇದನ್ನೆಲ್ಲಾ ಹೇಳಿದಕ್ಕೆ ಕಾರಣವಿದೆ. ಇವತ್ತು 21 ಹೈಕೋರ್ಟ್‍ಗಳ ಮುಂದೆ ಮೂವತ್ತು ಲಕ್ಷಕ್ಕಿಂತಲೂ ಹೆಚ್ಚು ಕೇಸುಗಳಿವೆ. ಇನ್ನು ಇತರೆ ನ್ಯಾಯಾಲಯಗಳ ಮುಂದೆ ಸುಮಾರು ಮೂರು ಕೋಟಿ ಕೇಸುಗಳಿವೆ. ಅಷ್ಟೇ ಅಲ್ಲ ದೇಶದಾದ್ಯಂತ ಕನಿಷ್ಠ ಮೂರು ಸಾವಿರ ಜಡ್ಜ್‍ಗಳ ಕೊರತೆ ಇದೆ. ಹೀಗಿರುವಾಗ ಈ ಲಕ್ಷಾಂತರ ಕೇಸುಗಳು ಇತ್ಯರ್ಥವಾಗುವುದೆಂದು? ಜನಸಾಮಾನ್ಯರಿಗೆ ನ್ಯಾಯ ಸಿಗುವುದೆಂದು?
ನಮ್ಮ ನ್ಯಾಯ ವ್ಯವಸ್ಥೆಯ ಒಂದು ಮಗ್ಗಲು ಇದಾದರೆ ಇನ್ನೊಂದು ಮಗ್ಗಲು ನಮ್ಮ ಜೈಲಿನಲ್ಲಿರುವ ಎರಡೂವರೆ ಲಕ್ಷ ವಿಚಾರಣಾಧೀನ ಬಂಧಿಗಳು. ಅವರಲ್ಲಿ ಬಹಳಷ್ಟು ಜನ ಐದು ವರ್ಷಕ್ಕಿಂತಲೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ.
ಒಂದು ಅಂದಾಜಿನ ಪ್ರಕಾರ ಬಹಳಷ್ಟು ವಿಚಾರಣಾಧೀನ ಖೈದಿಗಳ ವಿರುದ್ದದ ಕೇಸುಗಳು ಸಾಬೀತಾಗದೆ ಕೊನೆಗೆ ಅವರು ನಿರಪರಾಧಿಗಳು ಎಂದು ಬಿಡುಗಡೆ ಹೊಂದುತ್ತಾರೆ. ಆದರೆ ಅಷ್ಟರ ಮಟ್ಟಿಗೆ ಅವರ ಬದುಕಿನ ಹಲವಾರು ವರ್ಷಗಳು ಜೈಲಿನಲ್ಲೇ ಕಳೆದು ಹೋಗಿರುತ್ತದಲ್ಲದೇ, ಅವರು ಬಿಡುಗಡೆಗೊಂಡು ಹೊರಬರುವ ಹೊತ್ತಿಗೆ ಸಮಾಜದಲ್ಲಿನ ಅವರ ಮಾನ ಮತ್ತು ಬದುಕಿನ ಅವಕಾಶಗಳು ನಾಶವಾಗಿರುತ್ತವೆ. ಹಾಗೆಯೇ ಬಹಳಷ್ಟು ಪ್ರಕರಣಗಳಲ್ಲಿ ವಿಚಾರಣಾಧೀನ ಖೈದಿಯೇ ಆತನ ಸಂಸಾರದ ಆರ್ಥಿಕ ಸ್ತಂಭವಾಗಿರುವುದರಿಂದ ಆತ ಜೈಲಿನಲ್ಲಿರುವಾಗ ಆ ಸಂಸಾರವೇ ಛಿದ್ರಗೊಂಡಿರುತ್ತದೆ. ಇದೆಲ್ಲದರ ಅರ್ಥ ಕೊನೆಗೂ ವಿಚಾರಣಾಧೀನ ಖೈದಿಗೆ ನ್ಯಾಯ ಸಿಕ್ಕರೂ ಅನ್ಯಾಯವಾಗಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...