Homeಅಂಕಣಗಳುನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

ನಮ್ಮ ನ್ಯಾಯ ವ್ಯವಸ್ಥೆಯ ನ್ಯಾಯ ಮತ್ತು ಅನ್ಯಾಯ

- Advertisement -
- Advertisement -

 ಗೌರಿ ಲಂಕೇಶ್
14 ಜನವರಿ, 2014 (`ಕಂಡಹಾಗೆ’ ಸಂಪಾದಕೀಯದಿಂದ) |

ನಾನು ಕೋರ್ಟಿಗೆ ಹೋದಾಗಲೆಲ್ಲಾ ಅಲ್ಲಿಗೆ ಬರುವ ತರಹೇವಾರಿ ಜನರನ್ನು ಗಮನಿಸುತ್ತಾ ಕಾಲ ಕಳೆಯುತ್ತೇನೆ. ಹಲವೊಮ್ಮೆ ನನ್ನ ಕುತೂಹಲ ಕೆರಳಿಸಿದವರನ್ನು ಮಾತನಾಡಿಸುತ್ತೇನೆ. ಆಗ ವಿಚಿತ್ರ ರೀತಿಯ ಜನಗಳ, ಸಮಸ್ಯೆ ಬದುಕುಗಳ ಕಿರುನೋಟ ನನಗೆ ದೊರಕುತ್ತದೆ.
ಇತ್ತೀಚೆಗೆ ಕೋರ್ಟ್ ಹಾಲ್ ಒಂದರಲ್ಲಿ ನನ್ನ ಪಕ್ಕ ಸುಮಾರು 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕೂತಿದ್ದರು. ಅವರ ಮುಖದಲ್ಲಿ ಆತಂಕ, ಜಿಗುಪ್ಸೆ ತುಂಬಿತ್ತು. ಆಕೆಯೊಂದಿಗೆ ಮಾತನಾಡಿದಾಗ ಗೊತ್ತಾಗಿದ್ದು, ಅವರ ಮನೆಯನ್ನು ಅದ್ಯಾರಿಗೋ ಬಾಡಿಗೆ ಮೇಲೆ ನೀಡಿದ್ದರಂತೆ. ಆದರೆ ಬಾಡಿಗೆದಾರ ಎಂತೆಂತಹದ್ದೋ ತಕರಾರುಗಳನ್ನು ಎತ್ತಿ ಇವರ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಹತ್ತಿದನಂತೆ. ಅ ವ್ಯಾಜ್ಯ ಐದಾರು ವರ್ಷ ನಡೆದು ಇನ್ನೇನು ತೀರ್ಪು ಬರಬೇಕು ಎನ್ನುವಾಗ ತಾನು ಬಾಡಿಗೆ ನೀಡುವುದಾಗಿ ಈ ಮಹಿಳೆಯ ಗಂಡನನ್ನು ಕರೆದನಂತೆ, ಆತನನ್ನು ಭೇಟಿಯಾಗಲೂ ಹೋದ ಗಂಡ ಎರಡು ದಿನವಾದರೂ ಮನೆಗೆ ಹಿಂದಿರುಗಲಿಲ್ಲ. ಬದಲಾಗಿ ಆತನ ಹೆಣ ಬೆಂಗಳೂರಿನ ಕೆರೆಯೊಂದರಲ್ಲಿ ಸಿಕ್ಕಿತು. ಬಾಡಿಗೆದಾರನೇ ಕೊಲೆ ಮಾಡಿಸಿದ್ದಾನೆಂದು ಈಕೆ ಪೊಲೀಸರಿಗೆ ದೂರು ನೀಡಿದರು. ಆದರೆ ಬಾಡಿಗೆದಾರನೊಂದಿಗೆ ಶಾಮೀಲಾದ ಪೊಲೀಸರು ಕೊಲೆಗಡುಕ ಸಿಕ್ಕಿಲ್ಲವೆಂದು ವರದಿ ಸಲ್ಲಿಸಿದರು. ಆಗ ಮಹಿಳೆ ಬಾಡಿಗೆದಾರ ಮತ್ತು ಪೊಲೀಸರ ವಿರುದ್ದ ನ್ಯಾಯಾಲಯದ ಮೊರೆಹೋದರು.
ಇದೆಲ್ಲಾ ನಡೆದು ಬರೋಬ್ಬರಿ 16 ವರ್ಷಗಳಾಗಿವೆ. ಈ ಮಧ್ಯೆ ಈಕೆಯ ಮಕ್ಕಳು ಬೆಳೆದು ನಿಂತಿದ್ದಾರೆ. ಪೊಲೀಸ್ ಅಧಿಕಾರಿ ನಿವೃತ್ತಿ ಪಡೆದು ತನ್ನ ಮನೆ ಸೇರಿದ್ದಾನೆ. ಬಾಡಿಗೆದಾರ ಇನ್ನೂ ಅದೇ ಮನೆಯಲ್ಲಿ ವಾಸಿಸುತ್ತಿದ್ದಾನೆ. ಆದರೆ ಈ ಮಹಿಳೆಯ ಅರ್ಜಿ ಅಂದು ಎಲ್ಲಿತ್ತೋ ಇವತ್ತಿಗೂ ಅಲ್ಲೇ ಇದೆ. ಆಕೆಗೆ ಬಾಡಿಗೆಯೂ ಬಂದಿಲ್ಲ. ಆಸ್ತಿಯೂ ವಾಪಸ್ಸಾಗಿಲ್ಲ, ನ್ಯಾಯವಂತೂ ಸಿಕ್ಕಿಲ್ಲ, ಈ ವ್ಯಾಜ್ಯ ಮ್ಯಾಜಿಸ್ಟ್ರೇಟರ ನಂತರ ಹೈಕೋರ್ಟಿಗೆ ಹೋಗಿ ಅಂತ್ಯಗೊಳ್ಳುವುದು ಇನ್ನು ಎಷ್ಟು ವರ್ಷಕ್ಕೋ?
ಇನ್ನೊಂದು ವಿಚಿತ್ರ ಪ್ರಕರಣ. ಸುಮಾರು 45 ಪ್ರಾಯದ ಈಕೆ ರಾಜ್ಯ ಸರ್ಕಾರಿ ನೌಕರಿಯಲ್ಲಿದ್ದಾರೆ. ಈಕೆಯ ಗಂಡ ಕೇಂದ್ರ ಸರ್ಕಾರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದಾನೆ. ಈಕೆ ಮದುವೆಯಾದ ಕೆಲ ವರ್ಷಗಳಲ್ಲೇ ಗಂಡ ಮತ್ತೊಬ್ಬಳನ್ನು ಮದುವೆಯಾದಾಗ ಈಕೆ ಆತನನ್ನು ತೊರೆದು ತಾನಾಯಿತು ತನ್ನ ಪಾಡಾಯಿತು ಎಂದು ಏಕಾಂಗಿ ಜೀವನ ಸಾಗಿಸಲಾರಂಭಿಸಿದಳು. ಆದರೆ ಗಂಡನ ಕಾಟ ಮುಂದುವರೆಯಿತು. ಆತ ಸರ್ಕಾರಿ ನೌಕರನಾದ್ದರಿಂದ ತನ್ನ ಎರಡನೇ ಪತ್ನಿಯ ಬಗ್ಗೆ ದಾಖಲಿಸುವಂತಿಲ್ಲ. ಆದ್ದರಿಂದ ಎರಡನೇ ಪತ್ನಿಯೊಂದಿಗೆ ಮಕ್ಕಳಾದಾಗ ಆತ ಆಸ್ಪತ್ರೆಯಲ್ಲಿ ತಾಯಿಯ ಹೆಸರು ನಮೂದಿಸಬೇಕಿದ್ದ ಜಾಗದಲ್ಲಿ ತನ್ನ ಮೊದಲನೆ ಹೆಂಡತಿಯ ಹೆಸರನ್ನೇ ದಾಖಲಿಸಿದ್ದ. ಇದು ಮೊದಲನೇ ಪತ್ನಿಗೆ ಗೊತ್ತಾದಾಗ ಆಕೆ ಕೆಂಡಾಮಂಡಲವಾದಳು. ತನ್ನ ಬದುಕನ್ನು ಹಾಳು ಮಾಡಿ ಏಕಾಂಗಿಯಾಗಿ ಸದ್ದಿಲ್ಲದೇ ತನ್ನದಲ್ಲದ ಮಕ್ಕಳನ್ನು ತನ್ನ ತಲೆಗೆ ಕಟ್ಟುತ್ತಿರುವ ನಾಳೆ ತನ್ನ ಚೂರುಪಾರು ಆಸ್ತಿಗೂ ಆತನ ಎರಡನೇ ಪತ್ನಿಯ ಮಕ್ಕಳು ತಾವೇ ವಾರಸುದಾರರು ಎಂದು ವಾದಿಸಿದರೆ ಏನು ಗತಿ ಎಂದು ಚಿಂತಿಸಿ ಗಂಡನ ವಿರುದ್ದ ನ್ಯಾಯಾಲಯದ ಮೆಟ್ಟಿಲನ್ನು ಏರಿದಳು. ಆ ಮಕ್ಕಳು ತನ್ನ ಮಕ್ಕಳಲ್ಲ, ಅವರುಗಳ ತಾಯಿ ತಾನಲ್ಲ ಎಂಬ ತೀರ್ಪು ಕೋರಿದಳು.
ಆಕೆ ಇಂಥದ್ದೊಂದು ಅರ್ಜಿ ಸಲ್ಲಿಸಿ, ಈಗ ಹನ್ನೊಂದು ವರ್ಷಗಳಾಗಿವೆ. ಆದರೆ ಅರ್ಜಿ ಮಾತ್ರ ಮುಂದಕ್ಕೆ ಹೋಗದೇ ಎಲ್ಲಿದೆಯೋ ಅಲ್ಲೇ ಇದೆ. ಇದನ್ನೆಲ್ಲಾ ಹೇಳಿದಕ್ಕೆ ಕಾರಣವಿದೆ. ಇವತ್ತು 21 ಹೈಕೋರ್ಟ್‍ಗಳ ಮುಂದೆ ಮೂವತ್ತು ಲಕ್ಷಕ್ಕಿಂತಲೂ ಹೆಚ್ಚು ಕೇಸುಗಳಿವೆ. ಇನ್ನು ಇತರೆ ನ್ಯಾಯಾಲಯಗಳ ಮುಂದೆ ಸುಮಾರು ಮೂರು ಕೋಟಿ ಕೇಸುಗಳಿವೆ. ಅಷ್ಟೇ ಅಲ್ಲ ದೇಶದಾದ್ಯಂತ ಕನಿಷ್ಠ ಮೂರು ಸಾವಿರ ಜಡ್ಜ್‍ಗಳ ಕೊರತೆ ಇದೆ. ಹೀಗಿರುವಾಗ ಈ ಲಕ್ಷಾಂತರ ಕೇಸುಗಳು ಇತ್ಯರ್ಥವಾಗುವುದೆಂದು? ಜನಸಾಮಾನ್ಯರಿಗೆ ನ್ಯಾಯ ಸಿಗುವುದೆಂದು?
ನಮ್ಮ ನ್ಯಾಯ ವ್ಯವಸ್ಥೆಯ ಒಂದು ಮಗ್ಗಲು ಇದಾದರೆ ಇನ್ನೊಂದು ಮಗ್ಗಲು ನಮ್ಮ ಜೈಲಿನಲ್ಲಿರುವ ಎರಡೂವರೆ ಲಕ್ಷ ವಿಚಾರಣಾಧೀನ ಬಂಧಿಗಳು. ಅವರಲ್ಲಿ ಬಹಳಷ್ಟು ಜನ ಐದು ವರ್ಷಕ್ಕಿಂತಲೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ.
ಒಂದು ಅಂದಾಜಿನ ಪ್ರಕಾರ ಬಹಳಷ್ಟು ವಿಚಾರಣಾಧೀನ ಖೈದಿಗಳ ವಿರುದ್ದದ ಕೇಸುಗಳು ಸಾಬೀತಾಗದೆ ಕೊನೆಗೆ ಅವರು ನಿರಪರಾಧಿಗಳು ಎಂದು ಬಿಡುಗಡೆ ಹೊಂದುತ್ತಾರೆ. ಆದರೆ ಅಷ್ಟರ ಮಟ್ಟಿಗೆ ಅವರ ಬದುಕಿನ ಹಲವಾರು ವರ್ಷಗಳು ಜೈಲಿನಲ್ಲೇ ಕಳೆದು ಹೋಗಿರುತ್ತದಲ್ಲದೇ, ಅವರು ಬಿಡುಗಡೆಗೊಂಡು ಹೊರಬರುವ ಹೊತ್ತಿಗೆ ಸಮಾಜದಲ್ಲಿನ ಅವರ ಮಾನ ಮತ್ತು ಬದುಕಿನ ಅವಕಾಶಗಳು ನಾಶವಾಗಿರುತ್ತವೆ. ಹಾಗೆಯೇ ಬಹಳಷ್ಟು ಪ್ರಕರಣಗಳಲ್ಲಿ ವಿಚಾರಣಾಧೀನ ಖೈದಿಯೇ ಆತನ ಸಂಸಾರದ ಆರ್ಥಿಕ ಸ್ತಂಭವಾಗಿರುವುದರಿಂದ ಆತ ಜೈಲಿನಲ್ಲಿರುವಾಗ ಆ ಸಂಸಾರವೇ ಛಿದ್ರಗೊಂಡಿರುತ್ತದೆ. ಇದೆಲ್ಲದರ ಅರ್ಥ ಕೊನೆಗೂ ವಿಚಾರಣಾಧೀನ ಖೈದಿಗೆ ನ್ಯಾಯ ಸಿಕ್ಕರೂ ಅನ್ಯಾಯವಾಗಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...