Homeಮುಖಪುಟಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

- Advertisement -
- Advertisement -

ಲಂಚ ಸೇರಿದಂತೆ ವಿವಿಧ ಆರೋಪಗಳ ಮೇಲೆ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಜನಾಧಿಪತ್ಯ ರಾಷ್ಟ್ರೀಯ ಸಭಾ (ಜೆಆರ್‌‌ಎಸ್) ನಾಯಕಿ ಸಿ.ಕೆ ಜಾನು ವಿರುದ್ಧ ಪ್ರಕರಣ ದಾಖಲಿಸುವಂತೆ ವಯನಾಡ್‌‌ ನ್ಯಾಯಾಲಯ ಬುಧವಾರ ಪೊಲೀಸರಿಗೆ ಸೂಚಿಸಿದೆ. ಏಪ್ರಿಲ್‌ನಲ್ಲಿ ನಡೆಯಲಿದ್ದ ವಿಧಾನಸಭಾ ಚುನಾವಣೆಗೆ ಮುನ್ನ ಸುರೇಂದ್ರನ್ ಎನ್‌ಡಿಎಗೆ ಸೇರಲು ಜಾನು ಅವರಿಗೆ 10 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷ ಪಿ.ಕೆ ನವಾಸ್ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ವಯನಾಡ್‌‌ ಕಲ್ಪೆಟ್ಟಾದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆ ನಡೆಸುತ್ತಿತ್ತು.

ಐಪಿಸಿ ಸೆಕ್ಷನ್ಸ್ 171 ಬಿ (ಮತದಾನಕ್ಕೆ ಲಂಚ ನೀಡಿ ಪ್ರೇರೇಪಿಸುವುದು), ಐ 71 ಇ (ಲಂಚ) ಮತ್ತು 171 ಎಫ್ (ಅನಗತ್ಯ ಪ್ರಭಾವ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಬೆಳ್ಳಿ ಚುಕ್ಕಿ: ಲ್ಯಾಬ್‌ನಲ್ಲಿ ವಿನ್ಯಾಸಗೊಳಿಸಿದ ಕೃತಕ ಸೂರ್ಯ; ಶುದ್ಧ ಶಕ್ತಿಯತ್ತ ದಾಪುಗಾಲು?

ಅರ್ಜಿದಾರರು ಈ ಹಿಂದೆ ಸುರೇಂದ್ರನ್ ಮತ್ತು ಜಾನು ವಿರುದ್ಧ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಸಂಪರ್ಕಿಸಿದ್ದರು. ಆದರೆ ಅಲ್ಲಿ ಯಾವುದೇ ಪ್ರಕರಣ ದಾಖಲಾಗದ ಕಾರಣ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು.

“ಜಾನು ಚುನಾವಣೆಗೆ ಮುನ್ನ ಎನ್‌ಡಿಎಗೆ ಸೇರಲು ತನಗೆ 10 ಕೋಟಿ ನೀಡಬೇಕು ಎಂದು ಸುರೇಂದ್ರ ಅವರೊಂದಿಗೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಸುರೇಂದ್ರನ್‌ ಜಾನು ಅವರಿಗೆ 10 ಲಕ್ಷ ರೂಪಾಯಿಗಳನ್ನು ನೀಡಿದರು” ಎಂದು ಈ ತಿಂಗಳ ಆರಂಭದಲ್ಲಿ, ಜೆಆರ್‌ಎಸ್ ರಾಜ್ಯ ಖಜಾಂಚಿ ಪ್ರಸೀತಾ ಅಜಿಕೋಡ್ ಅವರು ಆರೋಪಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಜಾನು ಅವರು ವಯನಾಡಿನ ಸುಲ್ತಾನ್ ಬತ್ತೇರಿಯಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದರು.

ಈ ಒಪ್ಪಂದವನ್ನು ಉಲ್ಲೇಖಿಸುವ ಸುರೇಂದ್ರನ್ ಮತ್ತು ಪ್ರಸೀತಾ ಅಜಿಕೋಡ್‌ ನಡುವಿನ ಸಂಭಾಷಣೆಯ ಆಡಿಯೊ ಕ್ಲಿಪ್ ಅನ್ನು ಸಹ ಬಿಡುಗಡೆ ಮಾಡಲಾಗಿತ್ತು. ಸುರೇಂದ್ರನ್ ಮತ್ತು ಜಾನು ಇಬ್ಬರೂ ಈ ಆರೋಪಗಳನ್ನು ನಿರಾಕರಿಸಿದಾಗ, ಪ್ರಸೀತಾ ಅಜಿಕೋಡ್ ಸಂಭಾಷಣೆಯ ಹೆಚ್ಚಿನ ಆಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿದ್ದರು.

ಕಳೆದ ವಾರ, ಮಜೇಶ್ವರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬಿಎಸ್ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಲಂಚ ನೀಡಿದ ಆರೋಪದ ಮೇಲೆ ಕಾಸರಗೋಡ್‌‌ ಪೊಲೀಸರು ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಕ್ಷೇತ್ರದಲ್ಲಿ ಸುರೇಂದ್ರನ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇಲ್ಲಿ ನಾಮಪತ್ರ ಹಿಂತೆಗೆದುಕೊಂಡ ನಂತರ ಸುಂದರ ಅವರು ಬಿಜೆಪಿಗೆ ಸೇರಿದ್ದರು. ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು 2.5 ಲಕ್ಷ ರೂ. ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: 2024ರ ಚುನಾವಣೆ: ಪ್ರಾದೇಶಿಕ ನಾಯಕರು V/s ಮೋದಿ-ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...