Homeಮುಖಪುಟಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

- Advertisement -
- Advertisement -

ಲಂಚ ಸೇರಿದಂತೆ ವಿವಿಧ ಆರೋಪಗಳ ಮೇಲೆ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ಜನಾಧಿಪತ್ಯ ರಾಷ್ಟ್ರೀಯ ಸಭಾ (ಜೆಆರ್‌‌ಎಸ್) ನಾಯಕಿ ಸಿ.ಕೆ ಜಾನು ವಿರುದ್ಧ ಪ್ರಕರಣ ದಾಖಲಿಸುವಂತೆ ವಯನಾಡ್‌‌ ನ್ಯಾಯಾಲಯ ಬುಧವಾರ ಪೊಲೀಸರಿಗೆ ಸೂಚಿಸಿದೆ. ಏಪ್ರಿಲ್‌ನಲ್ಲಿ ನಡೆಯಲಿದ್ದ ವಿಧಾನಸಭಾ ಚುನಾವಣೆಗೆ ಮುನ್ನ ಸುರೇಂದ್ರನ್ ಎನ್‌ಡಿಎಗೆ ಸೇರಲು ಜಾನು ಅವರಿಗೆ 10 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷ ಪಿ.ಕೆ ನವಾಸ್ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ವಯನಾಡ್‌‌ ಕಲ್ಪೆಟ್ಟಾದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆ ನಡೆಸುತ್ತಿತ್ತು.

ಐಪಿಸಿ ಸೆಕ್ಷನ್ಸ್ 171 ಬಿ (ಮತದಾನಕ್ಕೆ ಲಂಚ ನೀಡಿ ಪ್ರೇರೇಪಿಸುವುದು), ಐ 71 ಇ (ಲಂಚ) ಮತ್ತು 171 ಎಫ್ (ಅನಗತ್ಯ ಪ್ರಭಾವ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಬೆಳ್ಳಿ ಚುಕ್ಕಿ: ಲ್ಯಾಬ್‌ನಲ್ಲಿ ವಿನ್ಯಾಸಗೊಳಿಸಿದ ಕೃತಕ ಸೂರ್ಯ; ಶುದ್ಧ ಶಕ್ತಿಯತ್ತ ದಾಪುಗಾಲು?

ಅರ್ಜಿದಾರರು ಈ ಹಿಂದೆ ಸುರೇಂದ್ರನ್ ಮತ್ತು ಜಾನು ವಿರುದ್ಧ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಸಂಪರ್ಕಿಸಿದ್ದರು. ಆದರೆ ಅಲ್ಲಿ ಯಾವುದೇ ಪ್ರಕರಣ ದಾಖಲಾಗದ ಕಾರಣ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು.

“ಜಾನು ಚುನಾವಣೆಗೆ ಮುನ್ನ ಎನ್‌ಡಿಎಗೆ ಸೇರಲು ತನಗೆ 10 ಕೋಟಿ ನೀಡಬೇಕು ಎಂದು ಸುರೇಂದ್ರ ಅವರೊಂದಿಗೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಸುರೇಂದ್ರನ್‌ ಜಾನು ಅವರಿಗೆ 10 ಲಕ್ಷ ರೂಪಾಯಿಗಳನ್ನು ನೀಡಿದರು” ಎಂದು ಈ ತಿಂಗಳ ಆರಂಭದಲ್ಲಿ, ಜೆಆರ್‌ಎಸ್ ರಾಜ್ಯ ಖಜಾಂಚಿ ಪ್ರಸೀತಾ ಅಜಿಕೋಡ್ ಅವರು ಆರೋಪಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಜಾನು ಅವರು ವಯನಾಡಿನ ಸುಲ್ತಾನ್ ಬತ್ತೇರಿಯಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದರು.

ಈ ಒಪ್ಪಂದವನ್ನು ಉಲ್ಲೇಖಿಸುವ ಸುರೇಂದ್ರನ್ ಮತ್ತು ಪ್ರಸೀತಾ ಅಜಿಕೋಡ್‌ ನಡುವಿನ ಸಂಭಾಷಣೆಯ ಆಡಿಯೊ ಕ್ಲಿಪ್ ಅನ್ನು ಸಹ ಬಿಡುಗಡೆ ಮಾಡಲಾಗಿತ್ತು. ಸುರೇಂದ್ರನ್ ಮತ್ತು ಜಾನು ಇಬ್ಬರೂ ಈ ಆರೋಪಗಳನ್ನು ನಿರಾಕರಿಸಿದಾಗ, ಪ್ರಸೀತಾ ಅಜಿಕೋಡ್ ಸಂಭಾಷಣೆಯ ಹೆಚ್ಚಿನ ಆಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿದ್ದರು.

ಕಳೆದ ವಾರ, ಮಜೇಶ್ವರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬಿಎಸ್ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಲಂಚ ನೀಡಿದ ಆರೋಪದ ಮೇಲೆ ಕಾಸರಗೋಡ್‌‌ ಪೊಲೀಸರು ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಕ್ಷೇತ್ರದಲ್ಲಿ ಸುರೇಂದ್ರನ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇಲ್ಲಿ ನಾಮಪತ್ರ ಹಿಂತೆಗೆದುಕೊಂಡ ನಂತರ ಸುಂದರ ಅವರು ಬಿಜೆಪಿಗೆ ಸೇರಿದ್ದರು. ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು 2.5 ಲಕ್ಷ ರೂ. ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: 2024ರ ಚುನಾವಣೆ: ಪ್ರಾದೇಶಿಕ ನಾಯಕರು V/s ಮೋದಿ-ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...