Homeಮುಖಪುಟಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿರುವ ಮಹಿಳೆಯನ್ನು ಮರಳಿ ಕರೆತರುವಂತೆ ಕೇಂದ್ರಕ್ಕೆ ಕೋರ್ಟ್ ಆದೇಶ

ಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿರುವ ಮಹಿಳೆಯನ್ನು ಮರಳಿ ಕರೆತರುವಂತೆ ಕೇಂದ್ರಕ್ಕೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಗಡಿಪಾರು ಮಾಡಲ್ಪಟ್ಟ 63 ವರ್ಷದ ಮಹಿಳೆಯನ್ನು ಭಾರತಕ್ಕೆ ಮರಳಿ ಕರೆತರುವಂತೆ ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

ಮಹಿಳೆ ಸುಮಾರು ನಾಲ್ಕು ದಶಕಗಳಿಂದ ಭಾರತದಲ್ಲಿ ವಾಸಿಸುತ್ತಿದ್ದು, ದೀರ್ಘಾವಧಿಯ ವೀಸಾ (ಎಲ್‌ಟಿವಿ) ಹೊಂದಿರುವುದರಿಂದ, ಪ್ರಕರಣದ ‘ಸತ್ಯಗಳು ಮತ್ತು ಸನ್ನಿವೇಶಗಳ ಅಸಾಧಾರಣ ಸ್ವರೂಪ’ವನ್ನು ಗಮನಿಸಿ ಹೈಕೋರ್ಟ್ ಈ ಆದೇಶ ನೀಡಿದೆ ಎಂದು livelaw.in ವರದಿ ಮಾಡಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಕೇಂದ್ರ ಸರ್ಕಾರ ಭಾರತದಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತಗೊಳಿಸಿ, ಅವರು ಏಪ್ರಿಲ್ 27ರೊಳಗೆ ಭಾರತ ತೊರೆಯುವಂತೆ ಆದೇಶಿಸಿತ್ತು. ಗಡುವು ಮುಗಿದ ಹಿನ್ನೆಲೆಯಲ್ಲಿ ಹಲವು ಪಾಕಿಸ್ತಾನಿ ಪ್ರಜೆಗಳನ್ನು ಅಧಿಕಾರಿಗಳು ಗಡಿಪಾರು ಮಾಡಿದ್ದರು.

ಹಾಗೆ, ಗಡಿಪಾರದವರಲ್ಲಿ ರಕ್ಷಂದಾ ರಶೀದ್ ಕೂಡ ಒಬ್ಬರು. ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಜಮ್ಮುವಿನಲ್ಲಿ ವಾಸಿಸುತ್ತಿದ್ದ ಮಹಿಳೆ ಗಡಿಪಾರು ಬಳಿಕ ಲಾಹೋರ್‌ನ ಹೋಟೆಲ್‌ನಲ್ಲಿ ಉಳಿಯುವಂತಾಗಿದೆ. ಏಪ್ರಿಲ್ 30ರಂದು ಅವರನ್ನು ಗಡಿಪಾರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಅದೇ ದಿನ ರಕ್ಷಂದಾ ರಶೀದ್ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಪತ್ನಿಗೆ ಪಾಕಿಸ್ತಾನದಲ್ಲಿ ಯಾರೂ ಬಂಧುಗಳಿಲ್ಲ. ಅಲ್ಲದೆ ಆಕೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು ಅಕೆಯ ಜೀವಕ್ಕೆ ಸಂಚಕಾರ ಇದೆ ಎಂದು ರಕ್ಷಂದಾ ಅವರ ಪತಿ ಶೇಖ್ ಜಹೂರ್ ಅಹ್ಮದ್ ಅವರು ನ್ಯಾಯಮೂರ್ತಿ ರಾಹುಲ್ ಭಾರ್ತಿ ಅವರೆದುರು ವಾದಿಸಿದ್ದರು.

ಅರ್ಹತೆಯ ಆಧಾರದಲ್ಲಿ ಪ್ರಕರಣವನ್ನು ಇನ್ನಷ್ಟೇ ಆಲಿಸಬೇಕಿದ್ದು, ಸಾಂವಿಧಾನಿಕ ನ್ಯಾಯಾಲಯವಾಗಿ ತಾನು ಕೆಲವೊಮ್ಮೆ ಮಾನವೀಯ ನೆಲೆಯಲ್ಲಿ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ಜೂನ್‌ 6ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ದೀರ್ಘಾವಧಿ ವೀಸಾ ಪಡೆದಿರುವ ರಕ್ಷಂದಾ ಅವರನ್ನು ಗಡಿಪಾರು ಮಾಡುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆದೇಶ ಹೊರಡಿಸಿದ ದಿನಾಂಕದಿಂದ (ಜೂನ್ 6) ಹತ್ತು ದಿನಗಳ ಒಳಗೆ, ಅದನ್ನು ಪಾಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಆದೇಶ ಪಾಲನೆ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ರಕ್ಷಾಂದ ರಶೀದ್ ಅವರ ಪರವಾಗಿ ಮಗಳು ಫಲಕ್ ಜಹೂರ್ ಮೂಲಕ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಾಹುಲ್ ಭಾರ್ತಿ ಆದೇಶ ನೀಡಿದ್ದಾರೆ.

ಎಲ್ಲರೊಂದಿಗೆ ಮಾತುಕತೆ ನಡೆಸಿ ತ್ರಿಭಾಷಾ ಸೂತ್ರದ ಬಗ್ಗೆ ಅಂತಿಮ ನಿರ್ಧಾರ: ಮಹಾರಾಷ್ಟ್ರ ಸಿಎಂ ಫಡ್ನವೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...