Homeಮುಖಪುಟಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿರುವ ಮಹಿಳೆಯನ್ನು ಮರಳಿ ಕರೆತರುವಂತೆ ಕೇಂದ್ರಕ್ಕೆ ಕೋರ್ಟ್ ಆದೇಶ

ಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗಿರುವ ಮಹಿಳೆಯನ್ನು ಮರಳಿ ಕರೆತರುವಂತೆ ಕೇಂದ್ರಕ್ಕೆ ಕೋರ್ಟ್ ಆದೇಶ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಗಡಿಪಾರು ಮಾಡಲ್ಪಟ್ಟ 63 ವರ್ಷದ ಮಹಿಳೆಯನ್ನು ಭಾರತಕ್ಕೆ ಮರಳಿ ಕರೆತರುವಂತೆ ಜಮ್ಮು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

ಮಹಿಳೆ ಸುಮಾರು ನಾಲ್ಕು ದಶಕಗಳಿಂದ ಭಾರತದಲ್ಲಿ ವಾಸಿಸುತ್ತಿದ್ದು, ದೀರ್ಘಾವಧಿಯ ವೀಸಾ (ಎಲ್‌ಟಿವಿ) ಹೊಂದಿರುವುದರಿಂದ, ಪ್ರಕರಣದ ‘ಸತ್ಯಗಳು ಮತ್ತು ಸನ್ನಿವೇಶಗಳ ಅಸಾಧಾರಣ ಸ್ವರೂಪ’ವನ್ನು ಗಮನಿಸಿ ಹೈಕೋರ್ಟ್ ಈ ಆದೇಶ ನೀಡಿದೆ ಎಂದು livelaw.in ವರದಿ ಮಾಡಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಕೇಂದ್ರ ಸರ್ಕಾರ ಭಾರತದಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತಗೊಳಿಸಿ, ಅವರು ಏಪ್ರಿಲ್ 27ರೊಳಗೆ ಭಾರತ ತೊರೆಯುವಂತೆ ಆದೇಶಿಸಿತ್ತು. ಗಡುವು ಮುಗಿದ ಹಿನ್ನೆಲೆಯಲ್ಲಿ ಹಲವು ಪಾಕಿಸ್ತಾನಿ ಪ್ರಜೆಗಳನ್ನು ಅಧಿಕಾರಿಗಳು ಗಡಿಪಾರು ಮಾಡಿದ್ದರು.

ಹಾಗೆ, ಗಡಿಪಾರದವರಲ್ಲಿ ರಕ್ಷಂದಾ ರಶೀದ್ ಕೂಡ ಒಬ್ಬರು. ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಜಮ್ಮುವಿನಲ್ಲಿ ವಾಸಿಸುತ್ತಿದ್ದ ಮಹಿಳೆ ಗಡಿಪಾರು ಬಳಿಕ ಲಾಹೋರ್‌ನ ಹೋಟೆಲ್‌ನಲ್ಲಿ ಉಳಿಯುವಂತಾಗಿದೆ. ಏಪ್ರಿಲ್ 30ರಂದು ಅವರನ್ನು ಗಡಿಪಾರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಅದೇ ದಿನ ರಕ್ಷಂದಾ ರಶೀದ್ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಪತ್ನಿಗೆ ಪಾಕಿಸ್ತಾನದಲ್ಲಿ ಯಾರೂ ಬಂಧುಗಳಿಲ್ಲ. ಅಲ್ಲದೆ ಆಕೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು ಅಕೆಯ ಜೀವಕ್ಕೆ ಸಂಚಕಾರ ಇದೆ ಎಂದು ರಕ್ಷಂದಾ ಅವರ ಪತಿ ಶೇಖ್ ಜಹೂರ್ ಅಹ್ಮದ್ ಅವರು ನ್ಯಾಯಮೂರ್ತಿ ರಾಹುಲ್ ಭಾರ್ತಿ ಅವರೆದುರು ವಾದಿಸಿದ್ದರು.

ಅರ್ಹತೆಯ ಆಧಾರದಲ್ಲಿ ಪ್ರಕರಣವನ್ನು ಇನ್ನಷ್ಟೇ ಆಲಿಸಬೇಕಿದ್ದು, ಸಾಂವಿಧಾನಿಕ ನ್ಯಾಯಾಲಯವಾಗಿ ತಾನು ಕೆಲವೊಮ್ಮೆ ಮಾನವೀಯ ನೆಲೆಯಲ್ಲಿ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ಜೂನ್‌ 6ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ದೀರ್ಘಾವಧಿ ವೀಸಾ ಪಡೆದಿರುವ ರಕ್ಷಂದಾ ಅವರನ್ನು ಗಡಿಪಾರು ಮಾಡುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆದೇಶ ಹೊರಡಿಸಿದ ದಿನಾಂಕದಿಂದ (ಜೂನ್ 6) ಹತ್ತು ದಿನಗಳ ಒಳಗೆ, ಅದನ್ನು ಪಾಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಆದೇಶ ಪಾಲನೆ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.

ರಕ್ಷಾಂದ ರಶೀದ್ ಅವರ ಪರವಾಗಿ ಮಗಳು ಫಲಕ್ ಜಹೂರ್ ಮೂಲಕ ಸಲ್ಲಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಾಹುಲ್ ಭಾರ್ತಿ ಆದೇಶ ನೀಡಿದ್ದಾರೆ.

ಎಲ್ಲರೊಂದಿಗೆ ಮಾತುಕತೆ ನಡೆಸಿ ತ್ರಿಭಾಷಾ ಸೂತ್ರದ ಬಗ್ಗೆ ಅಂತಿಮ ನಿರ್ಧಾರ: ಮಹಾರಾಷ್ಟ್ರ ಸಿಎಂ ಫಡ್ನವೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...