Homeಮುಖಪುಟನಮಾಝ್‌ ಮಾಡುತ್ತಿದ್ದವರ ಮೇಲೆ ಬೂಟು ಕಾಲಿನಿಂದ ಒದ್ದ ಪೊಲೀಸ್‌: ವರದಿ ಕೇಳಿದ ಕೋರ್ಟ್

ನಮಾಝ್‌ ಮಾಡುತ್ತಿದ್ದವರ ಮೇಲೆ ಬೂಟು ಕಾಲಿನಿಂದ ಒದ್ದ ಪೊಲೀಸ್‌: ವರದಿ ಕೇಳಿದ ಕೋರ್ಟ್

- Advertisement -
- Advertisement -

ಕಳೆದ ಶುಕ್ರವಾರ ದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಮರ ಮೇಲೆ ಬೂಟು ಕಾಲಿನಿಂದ ಒದ್ದು ಪೊಲೀಸ್‌ ಅಧಿಕಾರಿ ದೌರ್ಜನ್ಯ ನಡೆಸಿರುವ ಘಟನೆಯ ಬಗ್ಗೆ ದೆಹಲಿ ನ್ಯಾಯಾಲಯವು ಡಿಸಿಪಿಯಿಂದ ವರದಿಯನ್ನು ಕೇಳಿದೆ.

ಭಾರೀ ಕೋಲಾಹಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ತೀಸ್ ಹಜಾರಿಯಲ್ಲಿರುವ ನ್ಯಾಯಾಲಯವು ಮುಂದಿನ ವಿಚಾರಣೆಯ ಮೇ 1ರೊಳಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ. ಸಬ್ ಇನ್ಸ್‌ಪೆಕ್ಟರ್ ಮನೋಜ್ ತೋಮರ್ ದೆಹಲಿಯ ಮಕ್ಕಿ ಜಮಾ ಮಸೀದಿ ಬಳಿಯ ಇಂದರ್‌ಲೋಕ್ ಪ್ರದೇಶದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವವರಿಗೆ ಬೂಟು ಕಾಲಿನಿಂದ ಒದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್‌ ಆಗಿತ್ತು. ಪೊಲೀಸ್‌ ಅಧಿಕಾರಿಯ ಕೃತ್ಯಕ್ಕೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು. ಘಟನೆಗೆ ಸಂಬಂಧಿಸಿ ಮಾ.8ರಂದು ಆರೋಪಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ದೆಹಲಿಯ ರಸ್ತೆಯಲ್ಲಿ ಶುಕ್ರವಾರದ ನಮಾಝ್‌ ಮಾಡುತ್ತಿದ್ದ ಮುಸ್ಲಿಮ್‌ ಸಮುದಾಯದ ಜನರ ಮೇಲೆ ಒದ್ದು ದುಷ್ಕೃತ್ಯವನ್ನು ಮೆರದ ಪೊಲೀಸರ ವರ್ತನೆ ಬಗ್ಗೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮುಸ್ಲಿಮರು ನಮಾಜ್ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಘಟನೆಯ ಬಗ್ಗೆ ಜಗತ್ತಿಗೆ ವಿವರಿಸಬೇಕಾಗಿದೆ ಎಂದು ಹೇಳಿದ್ದರು.

ನೀವು ನಮ್ಮ ಮೇಲೆ ಒದ್ದರೆ ಅಥವಾ ಗುಂಡು ಹಾರಿಸಿದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ. ಶುಕ್ರವಾರದ ಘಟನೆಯು ಮುಸ್ಲಿಮರ ವಿರುದ್ಧ ಜನರ ಮನಸ್ಸು ಎಷ್ಟು ಭ್ರಷ್ಟಗೊಂಡಿದೆ ಎಂಬುವುದನ್ನು ಎತ್ತಿ ತೋರಿಸುತ್ತಿದೆ. ಶುಕ್ರವಾರದಂದು ದೆಹಲಿಯ ರಸ್ತೆಗಳಲ್ಲಿ ಜನರು ಸೇರುವುದು ಮತ್ತು ನಮಾಝ್‌ನಲ್ಲಿ ಪಾಲ್ಗೊಳ್ಳುವುದು ಸಾಮಾನ್ಯವಾಗಿದೆ. ಹಿಂದಿನ ದೆಹಲಿ ಗಲಭೆಗಳಲ್ಲಿ ಮುಸ್ಲಿಮರನ್ನು ಪೊಲೀಸರು ಗುರಿಯಾಗಿಸಿಕೊಂಡ ಬಗೆಗೆ ದೆಹಲಿ ಪೊಲೀಸರು ಕಲಿಯಬೇಕು. ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ, ಮುಸ್ಲಿಮರಿಗೆ ಎಷ್ಟು ಘನತೆ ಮತ್ತು ಗೌರವವಿದೆ ಎಂಬುವುದನ್ನು ಇದು ಹೇಳುತ್ತದೆ. ನಾನು ಪ್ರಧಾನಿ, ಬಿಜೆಪಿಯವರನ್ನು ಕೇಳಲು ಬಯಸುತ್ತೇನೆ ಅವಮಾನಕ್ಕೊಳಗಾದ ವ್ಯಕ್ತಿ ಯಾವ ಕುಟುಂಬಕ್ಕೆ ಸೇರಿದವನು? ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದರು.

ಘಟನೆಯ ಬಗ್ಗೆ ಕಾಂಗ್ರೆಸ್‌ನ ದೆಹಲಿ ಘಟಕವು ದೆಹಲಿ ಪೊಲೀಸರನ್ನು ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಇದು ತುಂಬಾ ನಾಚಿಕೆಗೇಡಿನ ಸಂಗತಿ! ರಸ್ತೆಯಲ್ಲಿ ನಮಾಝ್‌ ಮಾಡುವವರನ್ನು ಒದೆಯುತ್ತಿರುವ ದಿಲ್ಲಿ ಪೊಲೀಸ್ ಜವಾನ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ…? ಎಂದು ಪ್ರಶ್ನಿಸಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...