Homeಮುಖಪುಟನಮಾಝ್‌ ಮಾಡುತ್ತಿದ್ದವರ ಮೇಲೆ ಬೂಟು ಕಾಲಿನಿಂದ ಒದ್ದ ಪೊಲೀಸ್‌: ವರದಿ ಕೇಳಿದ ಕೋರ್ಟ್

ನಮಾಝ್‌ ಮಾಡುತ್ತಿದ್ದವರ ಮೇಲೆ ಬೂಟು ಕಾಲಿನಿಂದ ಒದ್ದ ಪೊಲೀಸ್‌: ವರದಿ ಕೇಳಿದ ಕೋರ್ಟ್

- Advertisement -
- Advertisement -

ಕಳೆದ ಶುಕ್ರವಾರ ದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಮರ ಮೇಲೆ ಬೂಟು ಕಾಲಿನಿಂದ ಒದ್ದು ಪೊಲೀಸ್‌ ಅಧಿಕಾರಿ ದೌರ್ಜನ್ಯ ನಡೆಸಿರುವ ಘಟನೆಯ ಬಗ್ಗೆ ದೆಹಲಿ ನ್ಯಾಯಾಲಯವು ಡಿಸಿಪಿಯಿಂದ ವರದಿಯನ್ನು ಕೇಳಿದೆ.

ಭಾರೀ ಕೋಲಾಹಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ತೀಸ್ ಹಜಾರಿಯಲ್ಲಿರುವ ನ್ಯಾಯಾಲಯವು ಮುಂದಿನ ವಿಚಾರಣೆಯ ಮೇ 1ರೊಳಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ. ಸಬ್ ಇನ್ಸ್‌ಪೆಕ್ಟರ್ ಮನೋಜ್ ತೋಮರ್ ದೆಹಲಿಯ ಮಕ್ಕಿ ಜಮಾ ಮಸೀದಿ ಬಳಿಯ ಇಂದರ್‌ಲೋಕ್ ಪ್ರದೇಶದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವವರಿಗೆ ಬೂಟು ಕಾಲಿನಿಂದ ಒದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್‌ ಆಗಿತ್ತು. ಪೊಲೀಸ್‌ ಅಧಿಕಾರಿಯ ಕೃತ್ಯಕ್ಕೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು. ಘಟನೆಗೆ ಸಂಬಂಧಿಸಿ ಮಾ.8ರಂದು ಆರೋಪಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ದೆಹಲಿಯ ರಸ್ತೆಯಲ್ಲಿ ಶುಕ್ರವಾರದ ನಮಾಝ್‌ ಮಾಡುತ್ತಿದ್ದ ಮುಸ್ಲಿಮ್‌ ಸಮುದಾಯದ ಜನರ ಮೇಲೆ ಒದ್ದು ದುಷ್ಕೃತ್ಯವನ್ನು ಮೆರದ ಪೊಲೀಸರ ವರ್ತನೆ ಬಗ್ಗೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮುಸ್ಲಿಮರು ನಮಾಜ್ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಘಟನೆಯ ಬಗ್ಗೆ ಜಗತ್ತಿಗೆ ವಿವರಿಸಬೇಕಾಗಿದೆ ಎಂದು ಹೇಳಿದ್ದರು.

ನೀವು ನಮ್ಮ ಮೇಲೆ ಒದ್ದರೆ ಅಥವಾ ಗುಂಡು ಹಾರಿಸಿದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ. ಶುಕ್ರವಾರದ ಘಟನೆಯು ಮುಸ್ಲಿಮರ ವಿರುದ್ಧ ಜನರ ಮನಸ್ಸು ಎಷ್ಟು ಭ್ರಷ್ಟಗೊಂಡಿದೆ ಎಂಬುವುದನ್ನು ಎತ್ತಿ ತೋರಿಸುತ್ತಿದೆ. ಶುಕ್ರವಾರದಂದು ದೆಹಲಿಯ ರಸ್ತೆಗಳಲ್ಲಿ ಜನರು ಸೇರುವುದು ಮತ್ತು ನಮಾಝ್‌ನಲ್ಲಿ ಪಾಲ್ಗೊಳ್ಳುವುದು ಸಾಮಾನ್ಯವಾಗಿದೆ. ಹಿಂದಿನ ದೆಹಲಿ ಗಲಭೆಗಳಲ್ಲಿ ಮುಸ್ಲಿಮರನ್ನು ಪೊಲೀಸರು ಗುರಿಯಾಗಿಸಿಕೊಂಡ ಬಗೆಗೆ ದೆಹಲಿ ಪೊಲೀಸರು ಕಲಿಯಬೇಕು. ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ, ಮುಸ್ಲಿಮರಿಗೆ ಎಷ್ಟು ಘನತೆ ಮತ್ತು ಗೌರವವಿದೆ ಎಂಬುವುದನ್ನು ಇದು ಹೇಳುತ್ತದೆ. ನಾನು ಪ್ರಧಾನಿ, ಬಿಜೆಪಿಯವರನ್ನು ಕೇಳಲು ಬಯಸುತ್ತೇನೆ ಅವಮಾನಕ್ಕೊಳಗಾದ ವ್ಯಕ್ತಿ ಯಾವ ಕುಟುಂಬಕ್ಕೆ ಸೇರಿದವನು? ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದರು.

ಘಟನೆಯ ಬಗ್ಗೆ ಕಾಂಗ್ರೆಸ್‌ನ ದೆಹಲಿ ಘಟಕವು ದೆಹಲಿ ಪೊಲೀಸರನ್ನು ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಇದು ತುಂಬಾ ನಾಚಿಕೆಗೇಡಿನ ಸಂಗತಿ! ರಸ್ತೆಯಲ್ಲಿ ನಮಾಝ್‌ ಮಾಡುವವರನ್ನು ಒದೆಯುತ್ತಿರುವ ದಿಲ್ಲಿ ಪೊಲೀಸ್ ಜವಾನ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ…? ಎಂದು ಪ್ರಶ್ನಿಸಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...