Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ (ಫೆ.21) ಆದೇಶಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನೊಂದಿಗೂ ಗುರುತಿಸಿಕೊಂಡಿರುವ ಶಾಕುಂಭರಿ ಪೀಠಾಧೀಶ್ವರ ಆಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಸಂತ್ರಸ್ತ ಬಾಲಕರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ವಿನೋದ್ ಕುಮಾರ್ ಚೌರಾಸಿಯಾ ಅವರು, ಈ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.

ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಅವರು 14 ಮತ್ತು 17 ವರ್ಷದ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಮುಖ್ಯ ಆರೋಪವಾಗಿದೆ.

ಕಳೆದ ಒಂದು ವರ್ಷದಿಂದ ಅವರ ಆಶ್ರಮದಲ್ಲಿ ಹಾಗೂ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಾಘ ಮೇಳದ ಸಂದರ್ಭದಲ್ಲಿ, ‘ಗುರು ಸೇವೆ’ ಮತ್ತು ‘ಧಾರ್ಮಿಕ ಮಾರ್ಗದರ್ಶನ’ದ ಹೆಸರಿನಲ್ಲಿ ಈ ದೌರ್ಜನ್ಯ ನಡೆದಿದೆ ಎಂದು ದೂರಲಾಗಿದೆ.

ಅರ್ಜಿದಾರರು ಮೊದಲು ಪ್ರಯಾಗ್‌ರಾಜ್ ಪೊಲೀಸ್ ಕಮಿಷನರ್ ಮತ್ತು ಸ್ಥಳೀಯ ಝುನ್ಸಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದ ಕಾರಣ, ಜನವರಿ 28ರಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಸಾಕ್ಷ್ಯವಾಗಿ ಕೆಲವು ವಿಡಿಯೋಗಳನ್ನೊಳಗೊಂಡ ಸಿಡಿ ಸಲ್ಲಿಸಿದ್ದಾರೆ. ಅಲ್ಲದೆ, ಫೆಬ್ರವರಿ 13ರಂದು ನ್ಯಾಯಾಲಯವು ಇಬ್ಬರು ಸಂತ್ರಸ್ತ ಬಾಲಕರ ಹೇಳಿಕೆಯನ್ನು ವಿಡಿಯೋಗ್ರಫಿ ಮೂಲಕ ದಾಖಲಿಸಿಕೊಂಡಿದೆ.

ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಅನುಸಾರವಾಗಿ ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಸಂತ್ರಸ್ತರ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯಿಸಿರುವ ಅವಿಮುಕ್ತೇಶ್ವರಾನಂದ ಸರಸ್ವತಿ, ತನಿಖೆಯ ನಂತರವೇ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

“ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚಿಸಿರುವುದು ಸರಿಯಾಗಿದೆ. ಪ್ರಕರಣ ದಾಖಲಾದಾಗ ಮಾತ್ರ ತನಿಖೆ ಮತ್ತು ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆಗ ಮಾತ್ರ ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಇದು ಅಗತ್ಯವಾಗಿದೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ನಾನು ಹೇಳುವುದಿಷ್ಟೇ, ಅನೇಕ ಜನರು ಈ ವಿಷಯವನ್ನು ಗಮನಿಸುತ್ತಿರುವುದರಿಂದ ನ್ಯಾಯಾಲಯ ಹೆಚ್ಚು ಸಮಯ ತೆಗೆದುಕೊಳ್ಳದೆ ಈ ಪ್ರಕ್ರಿಯೆಯನ್ನು ವೇಗವಾಗಿ ನಡೆಸಬೇಕು. ಆದಷ್ಟು ಬೇಗ ಸಾಕ್ಷ್ಯಗಳನ್ನು ದಾಖಲಿಸಿ ತೀರ್ಪು ನೀಡಬೇಕು. ತಪ್ಪು ಯಾವಾಗಲೂ ತಪ್ಪಾಗಿಯೇ ಇರುತ್ತದೆ. ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣವು ಅಂತಿಮವಾಗಿ ಸುಳ್ಳೆಂದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಕಳೆದ ಕೆಲ ಸಮಯದಿಂದ ಸ್ವಾಮಿ ಅವಿಮುಕ್ತೇಶ್ವರಾನಂದರು ಉತ್ತರ ಪ್ರದೇಶದ ಆಡಳಿತರೂಢ ಬಿಜೆಪಿ ಜೊತೆ ಸಂರ್ಘದಲ್ಲಿ ತೊಡಗಿದ್ದಾರೆ.

ಕಳೆದ ತಿಂಗಳು, ಅವರು ‘ಶಂಕರಾಚಾರ್ಯ’ ಎಂಬ ಪದನಾಮವನ್ನು ಬಳಸುವುದರ ವಿರುದ್ಧ ಪ್ರಯಾಗ್‌ರಾಜ್ ಆಡಳಿತವು ನೋಟಿಸ್ ಕಳುಹಿಸಿತ್ತು, ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಜನವರಿ 18ರಂದು ಮೌನಿ ಅಮಾವಾಸ್ಯೆಯ ದಿನ ಸಂಗಮದಲ್ಲಿ ಸ್ನಾನ ಮಾಡುವ ಸ್ಥಳದ ಹತ್ತಿರ ಅವಿಮುಕ್ತೇಶ್ವರಾನಂದರನ್ನು ಪೊಲೀಸರು ತಡೆದಿದ್ದರು. ಅವರ ಅನುಯಾಯಿಗಳನ್ನು ಪೊಲೀಸರು ಒರಟಾಗಿ ನಡೆಸಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನು ಖಂಡಿಸಿ ಅವಿಮುಕ್ತೇಶ್ವರಾನಂದರು 48 ಗಂಟೆಗಳ ಕಾಲ ಆ ಸ್ಥಳದ ಸಮೀಪವೇ ಪ್ರತಿಭಟನೆ ನಡೆಸಿದ್ದರು.

2024ರ ಜನವರಿಯಲ್ಲಿ, ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಅವಿಮುಕ್ತೇಶ್ವರಾನಂದರು ನೀಡಿದ ಹೇಳಿಕೆ ವಿವಾದವನ್ನು ಸೃಷ್ಟಿಸಿತ್ತು. “ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಿಂದ ‘ರಾಜಕೀಯ ಹಿಂದೂಗಳು’ ಸಂತೋಷವಾಗಿದ್ದಾರೆ, ಆದರೆ ಅಸಂಖ್ಯಾತ ‘ಧಾರ್ಮಿಕ ಹಿಂದೂಗಳು’ ಅಲ್ಲ” ಎಂದು ಹೇಳುವ ಮೂಲಕ ಅವರು ಚರ್ಚೆಗೆ ನಾಂದಿ ಹಾಡಿದ್ದರು.

ಬಿಜೆಪಿ ಸರ್ಕಾರದ ವಿರುದ್ದ ತೊಡೆ ತಟ್ಟಿದ್ದ ಅವಿಮುಕ್ತೇಶ್ವರಾನಂದರ ವಿರುದ್ದ ಈಗ ಎಫ್‌ಐಆರ್‌ ದಾಖಲಾಗುತ್ತಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...