Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ (ಫೆ.21) ಆದೇಶಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನೊಂದಿಗೂ ಗುರುತಿಸಿಕೊಂಡಿರುವ ಶಾಕುಂಭರಿ ಪೀಠಾಧೀಶ್ವರ ಆಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಸಂತ್ರಸ್ತ ಬಾಲಕರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ವಿನೋದ್ ಕುಮಾರ್ ಚೌರಾಸಿಯಾ ಅವರು, ಈ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.

ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಅವರು 14 ಮತ್ತು 17 ವರ್ಷದ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಮುಖ್ಯ ಆರೋಪವಾಗಿದೆ.

ಕಳೆದ ಒಂದು ವರ್ಷದಿಂದ ಅವರ ಆಶ್ರಮದಲ್ಲಿ ಹಾಗೂ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಾಘ ಮೇಳದ ಸಂದರ್ಭದಲ್ಲಿ, ‘ಗುರು ಸೇವೆ’ ಮತ್ತು ‘ಧಾರ್ಮಿಕ ಮಾರ್ಗದರ್ಶನ’ದ ಹೆಸರಿನಲ್ಲಿ ಈ ದೌರ್ಜನ್ಯ ನಡೆದಿದೆ ಎಂದು ದೂರಲಾಗಿದೆ.

ಅರ್ಜಿದಾರರು ಮೊದಲು ಪ್ರಯಾಗ್‌ರಾಜ್ ಪೊಲೀಸ್ ಕಮಿಷನರ್ ಮತ್ತು ಸ್ಥಳೀಯ ಝುನ್ಸಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದ ಕಾರಣ, ಜನವರಿ 28ರಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಸಾಕ್ಷ್ಯವಾಗಿ ಕೆಲವು ವಿಡಿಯೋಗಳನ್ನೊಳಗೊಂಡ ಸಿಡಿ ಸಲ್ಲಿಸಿದ್ದಾರೆ. ಅಲ್ಲದೆ, ಫೆಬ್ರವರಿ 13ರಂದು ನ್ಯಾಯಾಲಯವು ಇಬ್ಬರು ಸಂತ್ರಸ್ತ ಬಾಲಕರ ಹೇಳಿಕೆಯನ್ನು ವಿಡಿಯೋಗ್ರಫಿ ಮೂಲಕ ದಾಖಲಿಸಿಕೊಂಡಿದೆ.

ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಅನುಸಾರವಾಗಿ ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಸಂತ್ರಸ್ತರ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯಿಸಿರುವ ಅವಿಮುಕ್ತೇಶ್ವರಾನಂದ ಸರಸ್ವತಿ, ತನಿಖೆಯ ನಂತರವೇ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

“ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚಿಸಿರುವುದು ಸರಿಯಾಗಿದೆ. ಪ್ರಕರಣ ದಾಖಲಾದಾಗ ಮಾತ್ರ ತನಿಖೆ ಮತ್ತು ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆಗ ಮಾತ್ರ ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಇದು ಅಗತ್ಯವಾಗಿದೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ನಾನು ಹೇಳುವುದಿಷ್ಟೇ, ಅನೇಕ ಜನರು ಈ ವಿಷಯವನ್ನು ಗಮನಿಸುತ್ತಿರುವುದರಿಂದ ನ್ಯಾಯಾಲಯ ಹೆಚ್ಚು ಸಮಯ ತೆಗೆದುಕೊಳ್ಳದೆ ಈ ಪ್ರಕ್ರಿಯೆಯನ್ನು ವೇಗವಾಗಿ ನಡೆಸಬೇಕು. ಆದಷ್ಟು ಬೇಗ ಸಾಕ್ಷ್ಯಗಳನ್ನು ದಾಖಲಿಸಿ ತೀರ್ಪು ನೀಡಬೇಕು. ತಪ್ಪು ಯಾವಾಗಲೂ ತಪ್ಪಾಗಿಯೇ ಇರುತ್ತದೆ. ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣವು ಅಂತಿಮವಾಗಿ ಸುಳ್ಳೆಂದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಕಳೆದ ಕೆಲ ಸಮಯದಿಂದ ಸ್ವಾಮಿ ಅವಿಮುಕ್ತೇಶ್ವರಾನಂದರು ಉತ್ತರ ಪ್ರದೇಶದ ಆಡಳಿತರೂಢ ಬಿಜೆಪಿ ಜೊತೆ ಸಂರ್ಘದಲ್ಲಿ ತೊಡಗಿದ್ದಾರೆ.

ಕಳೆದ ತಿಂಗಳು, ಅವರು ‘ಶಂಕರಾಚಾರ್ಯ’ ಎಂಬ ಪದನಾಮವನ್ನು ಬಳಸುವುದರ ವಿರುದ್ಧ ಪ್ರಯಾಗ್‌ರಾಜ್ ಆಡಳಿತವು ನೋಟಿಸ್ ಕಳುಹಿಸಿತ್ತು, ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಜನವರಿ 18ರಂದು ಮೌನಿ ಅಮಾವಾಸ್ಯೆಯ ದಿನ ಸಂಗಮದಲ್ಲಿ ಸ್ನಾನ ಮಾಡುವ ಸ್ಥಳದ ಹತ್ತಿರ ಅವಿಮುಕ್ತೇಶ್ವರಾನಂದರನ್ನು ಪೊಲೀಸರು ತಡೆದಿದ್ದರು. ಅವರ ಅನುಯಾಯಿಗಳನ್ನು ಪೊಲೀಸರು ಒರಟಾಗಿ ನಡೆಸಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನು ಖಂಡಿಸಿ ಅವಿಮುಕ್ತೇಶ್ವರಾನಂದರು 48 ಗಂಟೆಗಳ ಕಾಲ ಆ ಸ್ಥಳದ ಸಮೀಪವೇ ಪ್ರತಿಭಟನೆ ನಡೆಸಿದ್ದರು.

2024ರ ಜನವರಿಯಲ್ಲಿ, ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಅವಿಮುಕ್ತೇಶ್ವರಾನಂದರು ನೀಡಿದ ಹೇಳಿಕೆ ವಿವಾದವನ್ನು ಸೃಷ್ಟಿಸಿತ್ತು. “ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಿಂದ ‘ರಾಜಕೀಯ ಹಿಂದೂಗಳು’ ಸಂತೋಷವಾಗಿದ್ದಾರೆ, ಆದರೆ ಅಸಂಖ್ಯಾತ ‘ಧಾರ್ಮಿಕ ಹಿಂದೂಗಳು’ ಅಲ್ಲ” ಎಂದು ಹೇಳುವ ಮೂಲಕ ಅವರು ಚರ್ಚೆಗೆ ನಾಂದಿ ಹಾಡಿದ್ದರು.

ಬಿಜೆಪಿ ಸರ್ಕಾರದ ವಿರುದ್ದ ತೊಡೆ ತಟ್ಟಿದ್ದ ಅವಿಮುಕ್ತೇಶ್ವರಾನಂದರ ವಿರುದ್ದ ಈಗ ಎಫ್‌ಐಆರ್‌ ದಾಖಲಾಗುತ್ತಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...