Homeಮುಖಪುಟ25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕು ಎಂದು 25 ವರ್ಷಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ ಜಮೀಲಾ ಬೇಗಂ

- Advertisement -
- Advertisement -

ಶ್ರೀನಗರ: 25 ವರ್ಷಗಳ ಹಿಂದೆ ಘಟಿಸಿದ ಲಾಕಪ್‌ ಡೆತ್‌ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಖಾನ್ಯಾರ್‌ನ ಮಿಸ್ಕಿನ್ ಬಾಗ್‌ನ ಜಮೀಲಾ ಬೇಗಂ ಅವರು ತನ್ನ ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕೆಂದು ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ.

“ನನ್ನ ಪತಿಯ ದೇಹವನ್ನು ನಮಗೆ ಅಂತ್ಯಸಂಸ್ಕಾರಕ್ಕೆ ಹಸ್ತಾಂತರಿಸಿದ ಬಳಿಕ, ನನ್ನ ಚಿಕ್ಕ ಮಕ್ಕಳು ತಂದೆಯ ಶವವನ್ನು ನೋಡಿದರು. ಘುಸುಲ್ (ಅಂತ್ಯ ಸಂಸ್ಕಾರದ ಮೊದಲು ಶವವನ್ನು ತೊಳೆಯುವ ಇಸ್ಲಾಮಿಕ್ ಆಚರಣೆ) ನಡೆಸಿದಾಗ, ನನ್ನ ಪತಿಗೆ ನ್ಯಾಯ ಸಿಗುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ ಎಂದು ಅವರ ದೇಹದ ಮುಂದೆ ಪ್ರತಿಜ್ಞೆ ಮಾಡಿದ್ದೇನೆ” ಎನ್ನುತ್ತಾರೆ ಜಮೀಲಾ.

1996ರ ಮೇ 31ರಿಂದ ಜೂನ್ 1ರ ಅವಧಿಯಲ್ಲಿ ಜಮೀಲಾ ಅವರ ಪತಿ ಮುಹಮ್ಮದ್ ರಂಜಾನ್ ಅವರನ್ನು ಪೊಲೀಸರು ಕೊಂದರು ಎಂದು ಆರೋಪಿಸಲಾಗಿದೆ. ರಂಜಾನ್‌‌ ಅವರನ್ನು ಉಗ್ರಗಾಮಿ ಎಂದು ಆರೋಪಿಸಲಾಗಿದೆ. ಮಿಸ್ಕಿನ್ ಬಾಗ್‌ನ ಅಡಗುತಾಣದಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ರಂಜಾನ್ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.

ತಮ್ಮ ಪ್ರೀತಿಪಾತ್ರರು ಕೊಲ್ಲಲ್ಪಟ್ಟಾಗ ಹೆಚ್ಚಿನ ಕಾಶ್ಮೀರಿಗಳು ಪ್ರತೀಕಾರದ ಭಯದಿಂದ ಮೌನವಾಗಿರುತ್ತಾರೆ. ಆದರೆ ಜಮೀಲಾ ಮತ್ತೆ ಹೋರಾಡಲು ನಿರ್ಧರಿಸಿದರು ಎಂದು ದಿ ವೈರ್‌ ವರದಿ ಮಾಡಿದೆ.

“ನನ್ನ ಪತಿಗೆ ನ್ಯಾಯ ದೊರಕಿಸಿಕೊಡಲು ಎಲ್ಲ ಬಾಗಿಲುಗಳನ್ನು ತಟ್ಟಿದೆ. ಫಾರೂಕ್ ಅಬ್ದುಲ್ಲಾ, ಮುಫ್ತಿ ಮುಹಮ್ಮದ್ ಸಯೀದ್ ಮತ್ತು ಅಲಿ ಮುಹಮ್ಮದ್ ಸಾಗರ್ ಅವರಂತಹ ರಾಜಕಾರಣಿಗಳನ್ನು ನಾನು ಭೇಟಿ ಮಾಡಿದ್ದೇನೆ. ಪ್ರಕರಣದ ತನಿಖೆಗೆ, ನನ್ನ ಪತಿ ಹತ್ಯೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ವಿಧಿಸಬೇಕೆಂದು ಹಲವಾರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ. ಆದರೆ ಅವರು ಯಾವುದೇ ಕ್ರಮ ಜರುಗಿಸಲಿಲ್ಲ” ಎನ್ನುತ್ತಾರೆ ಜಮೀಲಾ ಬೇಗಂ.

ಜಮೀಲಾ ಬೇಗಂ (PC: The Wire)

ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

2006ರಲ್ಲಿ ಪ್ರಕರಣ ರೀ ಓಪನ್‌ ಆಯಿತು. ಆದರೆ ಪೊಲೀಸರು ರಚಿಸಿದ್ದ ವಿಶೇಷ ತನಿಖಾ ತಂಡ (SIT) ಪ್ರಕರಣವನ್ನು ತನಿಖೆ ಮಾಡಲು ಏನನ್ನೂ ಮಾಡಲಿಲ್ಲ. ಜಮೀಲಾ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗದ ಕದ ತಟ್ಟಿದರು. ಮಾನವ ಹಕ್ಕುಗಳ ಆಯೋಗದ ಶಿಫಾರಸುಗಳನ್ನು ಆಗಿನ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಜಾರಿಗೊಳಿಸಲಿಲ್ಲ.

ಆದರೆ ಜಮೀಲಾ ಛಲವನ್ನು ಬಿಟ್ಟುಕೊಡಲಿಲ್ಲ. ಈಗ ಅಕ್ಟೋಬರ್ 28, 2021ರಂದು, ಕಾಶ್ಮೀರ ಕಣಿವೆಯ ನ್ಯಾಯಾಲಯವು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗೆ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಕೋರ್ಟ್‌ ಸೂಚಿಸಿದೆ.

“ಜವಾಬ್ದಾರಿಯುತ ದೃಷಿಯಲ್ಲಿ ಪ್ರಕರಣವನ್ನು ತನಿಖಾ ಏಜೆನ್ಸಿ ನೋಡದಿರುವುದು ದುರಾದೃಷ್ಟಕರ” ಎಂದು ಕೋರ್ಟ್ ವಿಷಾದಿಸಿದೆ.

ಸಿಐಡಿ ಮಾಡಿದ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪರಿಶೀಲನೆ ವರದಿಗಳು ಪೊಲೀಸರ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ. ಮೃತದೇಹದಲ್ಲಿ ಚಿತ್ರಹಿಂಸೆಯ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತದೆ. ಸಿಐಡಿ ವರದಿಯು ವಿಧ್ವಂಸಕ ಚಟುವಟಿಕೆಗಳಲ್ಲಿ ವ್ಯಕ್ತಿಯು ಭಾಗಿಯಾಗಿಲ್ಲ ಎಂದು ಹೇಳುತ್ತದೆ.

ಶ್ರೀನಗರದ ಎರಡನೇ ಹೆಚ್ಚುವರಿ ಮುನ್ಸಿಫ್ ನ್ಯಾಯಾಲಯವು ತನ್ನ ಆದೇಶದಲ್ಲಿ, “ಪ್ರಕರಣದ ತನಿಖೆಗಾಗಿ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕರಿಗೆ (ಎಸ್‌ಎಸ್‌ಪಿ) ನಿರ್ದೇಶಿಸಿದೆ.

ರಂಜಾನ್ ಸಾವಿನ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೈನಾವರಿ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಮತ್ತು ಠಾಣಾಧಿಕಾರಿ ಮತ್ತು ಇತರ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಎಸ್‌ಎಸ್‌ಪಿಗೆ ನಿರ್ದೇಶನ ನೀಡಿದೆ.

2006ರಲ್ಲಿ ಪ್ರಕರಣ ರೀ ಓಪನ್‌ ಆದ ನಂತರ ಪ್ರಕರಣದ ತನಿಖೆಗಾಗಿ ರಚಿಸಲಾದ ಎಸ್‌ಐಟಿಯ ಪಾತ್ರವನ್ನೂ ತನಿಖೆ ಮಾಡಲು ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಸಂತ್ರಸ್ತೆಯನ್ನು ಪ್ರತಿನಿಧಿಸುವ ವಕೀಲ ತಬ್ಬಸುಮ್ ರಸೂಲ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...