Homeಮುಖಪುಟ25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕು ಎಂದು 25 ವರ್ಷಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ ಜಮೀಲಾ ಬೇಗಂ

- Advertisement -
- Advertisement -

ಶ್ರೀನಗರ: 25 ವರ್ಷಗಳ ಹಿಂದೆ ಘಟಿಸಿದ ಲಾಕಪ್‌ ಡೆತ್‌ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಖಾನ್ಯಾರ್‌ನ ಮಿಸ್ಕಿನ್ ಬಾಗ್‌ನ ಜಮೀಲಾ ಬೇಗಂ ಅವರು ತನ್ನ ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕೆಂದು ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ.

“ನನ್ನ ಪತಿಯ ದೇಹವನ್ನು ನಮಗೆ ಅಂತ್ಯಸಂಸ್ಕಾರಕ್ಕೆ ಹಸ್ತಾಂತರಿಸಿದ ಬಳಿಕ, ನನ್ನ ಚಿಕ್ಕ ಮಕ್ಕಳು ತಂದೆಯ ಶವವನ್ನು ನೋಡಿದರು. ಘುಸುಲ್ (ಅಂತ್ಯ ಸಂಸ್ಕಾರದ ಮೊದಲು ಶವವನ್ನು ತೊಳೆಯುವ ಇಸ್ಲಾಮಿಕ್ ಆಚರಣೆ) ನಡೆಸಿದಾಗ, ನನ್ನ ಪತಿಗೆ ನ್ಯಾಯ ಸಿಗುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ ಎಂದು ಅವರ ದೇಹದ ಮುಂದೆ ಪ್ರತಿಜ್ಞೆ ಮಾಡಿದ್ದೇನೆ” ಎನ್ನುತ್ತಾರೆ ಜಮೀಲಾ.

1996ರ ಮೇ 31ರಿಂದ ಜೂನ್ 1ರ ಅವಧಿಯಲ್ಲಿ ಜಮೀಲಾ ಅವರ ಪತಿ ಮುಹಮ್ಮದ್ ರಂಜಾನ್ ಅವರನ್ನು ಪೊಲೀಸರು ಕೊಂದರು ಎಂದು ಆರೋಪಿಸಲಾಗಿದೆ. ರಂಜಾನ್‌‌ ಅವರನ್ನು ಉಗ್ರಗಾಮಿ ಎಂದು ಆರೋಪಿಸಲಾಗಿದೆ. ಮಿಸ್ಕಿನ್ ಬಾಗ್‌ನ ಅಡಗುತಾಣದಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ರಂಜಾನ್ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.

ತಮ್ಮ ಪ್ರೀತಿಪಾತ್ರರು ಕೊಲ್ಲಲ್ಪಟ್ಟಾಗ ಹೆಚ್ಚಿನ ಕಾಶ್ಮೀರಿಗಳು ಪ್ರತೀಕಾರದ ಭಯದಿಂದ ಮೌನವಾಗಿರುತ್ತಾರೆ. ಆದರೆ ಜಮೀಲಾ ಮತ್ತೆ ಹೋರಾಡಲು ನಿರ್ಧರಿಸಿದರು ಎಂದು ದಿ ವೈರ್‌ ವರದಿ ಮಾಡಿದೆ.

“ನನ್ನ ಪತಿಗೆ ನ್ಯಾಯ ದೊರಕಿಸಿಕೊಡಲು ಎಲ್ಲ ಬಾಗಿಲುಗಳನ್ನು ತಟ್ಟಿದೆ. ಫಾರೂಕ್ ಅಬ್ದುಲ್ಲಾ, ಮುಫ್ತಿ ಮುಹಮ್ಮದ್ ಸಯೀದ್ ಮತ್ತು ಅಲಿ ಮುಹಮ್ಮದ್ ಸಾಗರ್ ಅವರಂತಹ ರಾಜಕಾರಣಿಗಳನ್ನು ನಾನು ಭೇಟಿ ಮಾಡಿದ್ದೇನೆ. ಪ್ರಕರಣದ ತನಿಖೆಗೆ, ನನ್ನ ಪತಿ ಹತ್ಯೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ವಿಧಿಸಬೇಕೆಂದು ಹಲವಾರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ. ಆದರೆ ಅವರು ಯಾವುದೇ ಕ್ರಮ ಜರುಗಿಸಲಿಲ್ಲ” ಎನ್ನುತ್ತಾರೆ ಜಮೀಲಾ ಬೇಗಂ.

ಜಮೀಲಾ ಬೇಗಂ (PC: The Wire)

ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

2006ರಲ್ಲಿ ಪ್ರಕರಣ ರೀ ಓಪನ್‌ ಆಯಿತು. ಆದರೆ ಪೊಲೀಸರು ರಚಿಸಿದ್ದ ವಿಶೇಷ ತನಿಖಾ ತಂಡ (SIT) ಪ್ರಕರಣವನ್ನು ತನಿಖೆ ಮಾಡಲು ಏನನ್ನೂ ಮಾಡಲಿಲ್ಲ. ಜಮೀಲಾ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗದ ಕದ ತಟ್ಟಿದರು. ಮಾನವ ಹಕ್ಕುಗಳ ಆಯೋಗದ ಶಿಫಾರಸುಗಳನ್ನು ಆಗಿನ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಜಾರಿಗೊಳಿಸಲಿಲ್ಲ.

ಆದರೆ ಜಮೀಲಾ ಛಲವನ್ನು ಬಿಟ್ಟುಕೊಡಲಿಲ್ಲ. ಈಗ ಅಕ್ಟೋಬರ್ 28, 2021ರಂದು, ಕಾಶ್ಮೀರ ಕಣಿವೆಯ ನ್ಯಾಯಾಲಯವು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗೆ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಕೋರ್ಟ್‌ ಸೂಚಿಸಿದೆ.

“ಜವಾಬ್ದಾರಿಯುತ ದೃಷಿಯಲ್ಲಿ ಪ್ರಕರಣವನ್ನು ತನಿಖಾ ಏಜೆನ್ಸಿ ನೋಡದಿರುವುದು ದುರಾದೃಷ್ಟಕರ” ಎಂದು ಕೋರ್ಟ್ ವಿಷಾದಿಸಿದೆ.

ಸಿಐಡಿ ಮಾಡಿದ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪರಿಶೀಲನೆ ವರದಿಗಳು ಪೊಲೀಸರ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ. ಮೃತದೇಹದಲ್ಲಿ ಚಿತ್ರಹಿಂಸೆಯ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತದೆ. ಸಿಐಡಿ ವರದಿಯು ವಿಧ್ವಂಸಕ ಚಟುವಟಿಕೆಗಳಲ್ಲಿ ವ್ಯಕ್ತಿಯು ಭಾಗಿಯಾಗಿಲ್ಲ ಎಂದು ಹೇಳುತ್ತದೆ.

ಶ್ರೀನಗರದ ಎರಡನೇ ಹೆಚ್ಚುವರಿ ಮುನ್ಸಿಫ್ ನ್ಯಾಯಾಲಯವು ತನ್ನ ಆದೇಶದಲ್ಲಿ, “ಪ್ರಕರಣದ ತನಿಖೆಗಾಗಿ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕರಿಗೆ (ಎಸ್‌ಎಸ್‌ಪಿ) ನಿರ್ದೇಶಿಸಿದೆ.

ರಂಜಾನ್ ಸಾವಿನ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೈನಾವರಿ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಮತ್ತು ಠಾಣಾಧಿಕಾರಿ ಮತ್ತು ಇತರ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಎಸ್‌ಎಸ್‌ಪಿಗೆ ನಿರ್ದೇಶನ ನೀಡಿದೆ.

2006ರಲ್ಲಿ ಪ್ರಕರಣ ರೀ ಓಪನ್‌ ಆದ ನಂತರ ಪ್ರಕರಣದ ತನಿಖೆಗಾಗಿ ರಚಿಸಲಾದ ಎಸ್‌ಐಟಿಯ ಪಾತ್ರವನ್ನೂ ತನಿಖೆ ಮಾಡಲು ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಸಂತ್ರಸ್ತೆಯನ್ನು ಪ್ರತಿನಿಧಿಸುವ ವಕೀಲ ತಬ್ಬಸುಮ್ ರಸೂಲ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...