Homeಮುಖಪುಟ25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕು ಎಂದು 25 ವರ್ಷಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ ಜಮೀಲಾ ಬೇಗಂ

- Advertisement -
- Advertisement -

ಶ್ರೀನಗರ: 25 ವರ್ಷಗಳ ಹಿಂದೆ ಘಟಿಸಿದ ಲಾಕಪ್‌ ಡೆತ್‌ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಖಾನ್ಯಾರ್‌ನ ಮಿಸ್ಕಿನ್ ಬಾಗ್‌ನ ಜಮೀಲಾ ಬೇಗಂ ಅವರು ತನ್ನ ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕೆಂದು ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ.

“ನನ್ನ ಪತಿಯ ದೇಹವನ್ನು ನಮಗೆ ಅಂತ್ಯಸಂಸ್ಕಾರಕ್ಕೆ ಹಸ್ತಾಂತರಿಸಿದ ಬಳಿಕ, ನನ್ನ ಚಿಕ್ಕ ಮಕ್ಕಳು ತಂದೆಯ ಶವವನ್ನು ನೋಡಿದರು. ಘುಸುಲ್ (ಅಂತ್ಯ ಸಂಸ್ಕಾರದ ಮೊದಲು ಶವವನ್ನು ತೊಳೆಯುವ ಇಸ್ಲಾಮಿಕ್ ಆಚರಣೆ) ನಡೆಸಿದಾಗ, ನನ್ನ ಪತಿಗೆ ನ್ಯಾಯ ಸಿಗುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ ಎಂದು ಅವರ ದೇಹದ ಮುಂದೆ ಪ್ರತಿಜ್ಞೆ ಮಾಡಿದ್ದೇನೆ” ಎನ್ನುತ್ತಾರೆ ಜಮೀಲಾ.

1996ರ ಮೇ 31ರಿಂದ ಜೂನ್ 1ರ ಅವಧಿಯಲ್ಲಿ ಜಮೀಲಾ ಅವರ ಪತಿ ಮುಹಮ್ಮದ್ ರಂಜಾನ್ ಅವರನ್ನು ಪೊಲೀಸರು ಕೊಂದರು ಎಂದು ಆರೋಪಿಸಲಾಗಿದೆ. ರಂಜಾನ್‌‌ ಅವರನ್ನು ಉಗ್ರಗಾಮಿ ಎಂದು ಆರೋಪಿಸಲಾಗಿದೆ. ಮಿಸ್ಕಿನ್ ಬಾಗ್‌ನ ಅಡಗುತಾಣದಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ರಂಜಾನ್ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.

ತಮ್ಮ ಪ್ರೀತಿಪಾತ್ರರು ಕೊಲ್ಲಲ್ಪಟ್ಟಾಗ ಹೆಚ್ಚಿನ ಕಾಶ್ಮೀರಿಗಳು ಪ್ರತೀಕಾರದ ಭಯದಿಂದ ಮೌನವಾಗಿರುತ್ತಾರೆ. ಆದರೆ ಜಮೀಲಾ ಮತ್ತೆ ಹೋರಾಡಲು ನಿರ್ಧರಿಸಿದರು ಎಂದು ದಿ ವೈರ್‌ ವರದಿ ಮಾಡಿದೆ.

“ನನ್ನ ಪತಿಗೆ ನ್ಯಾಯ ದೊರಕಿಸಿಕೊಡಲು ಎಲ್ಲ ಬಾಗಿಲುಗಳನ್ನು ತಟ್ಟಿದೆ. ಫಾರೂಕ್ ಅಬ್ದುಲ್ಲಾ, ಮುಫ್ತಿ ಮುಹಮ್ಮದ್ ಸಯೀದ್ ಮತ್ತು ಅಲಿ ಮುಹಮ್ಮದ್ ಸಾಗರ್ ಅವರಂತಹ ರಾಜಕಾರಣಿಗಳನ್ನು ನಾನು ಭೇಟಿ ಮಾಡಿದ್ದೇನೆ. ಪ್ರಕರಣದ ತನಿಖೆಗೆ, ನನ್ನ ಪತಿ ಹತ್ಯೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ವಿಧಿಸಬೇಕೆಂದು ಹಲವಾರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ. ಆದರೆ ಅವರು ಯಾವುದೇ ಕ್ರಮ ಜರುಗಿಸಲಿಲ್ಲ” ಎನ್ನುತ್ತಾರೆ ಜಮೀಲಾ ಬೇಗಂ.

ಜಮೀಲಾ ಬೇಗಂ (PC: The Wire)

ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

2006ರಲ್ಲಿ ಪ್ರಕರಣ ರೀ ಓಪನ್‌ ಆಯಿತು. ಆದರೆ ಪೊಲೀಸರು ರಚಿಸಿದ್ದ ವಿಶೇಷ ತನಿಖಾ ತಂಡ (SIT) ಪ್ರಕರಣವನ್ನು ತನಿಖೆ ಮಾಡಲು ಏನನ್ನೂ ಮಾಡಲಿಲ್ಲ. ಜಮೀಲಾ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗದ ಕದ ತಟ್ಟಿದರು. ಮಾನವ ಹಕ್ಕುಗಳ ಆಯೋಗದ ಶಿಫಾರಸುಗಳನ್ನು ಆಗಿನ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಜಾರಿಗೊಳಿಸಲಿಲ್ಲ.

ಆದರೆ ಜಮೀಲಾ ಛಲವನ್ನು ಬಿಟ್ಟುಕೊಡಲಿಲ್ಲ. ಈಗ ಅಕ್ಟೋಬರ್ 28, 2021ರಂದು, ಕಾಶ್ಮೀರ ಕಣಿವೆಯ ನ್ಯಾಯಾಲಯವು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗೆ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಕೋರ್ಟ್‌ ಸೂಚಿಸಿದೆ.

“ಜವಾಬ್ದಾರಿಯುತ ದೃಷಿಯಲ್ಲಿ ಪ್ರಕರಣವನ್ನು ತನಿಖಾ ಏಜೆನ್ಸಿ ನೋಡದಿರುವುದು ದುರಾದೃಷ್ಟಕರ” ಎಂದು ಕೋರ್ಟ್ ವಿಷಾದಿಸಿದೆ.

ಸಿಐಡಿ ಮಾಡಿದ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪರಿಶೀಲನೆ ವರದಿಗಳು ಪೊಲೀಸರ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ. ಮೃತದೇಹದಲ್ಲಿ ಚಿತ್ರಹಿಂಸೆಯ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತದೆ. ಸಿಐಡಿ ವರದಿಯು ವಿಧ್ವಂಸಕ ಚಟುವಟಿಕೆಗಳಲ್ಲಿ ವ್ಯಕ್ತಿಯು ಭಾಗಿಯಾಗಿಲ್ಲ ಎಂದು ಹೇಳುತ್ತದೆ.

ಶ್ರೀನಗರದ ಎರಡನೇ ಹೆಚ್ಚುವರಿ ಮುನ್ಸಿಫ್ ನ್ಯಾಯಾಲಯವು ತನ್ನ ಆದೇಶದಲ್ಲಿ, “ಪ್ರಕರಣದ ತನಿಖೆಗಾಗಿ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕರಿಗೆ (ಎಸ್‌ಎಸ್‌ಪಿ) ನಿರ್ದೇಶಿಸಿದೆ.

ರಂಜಾನ್ ಸಾವಿನ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೈನಾವರಿ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಮತ್ತು ಠಾಣಾಧಿಕಾರಿ ಮತ್ತು ಇತರ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಎಸ್‌ಎಸ್‌ಪಿಗೆ ನಿರ್ದೇಶನ ನೀಡಿದೆ.

2006ರಲ್ಲಿ ಪ್ರಕರಣ ರೀ ಓಪನ್‌ ಆದ ನಂತರ ಪ್ರಕರಣದ ತನಿಖೆಗಾಗಿ ರಚಿಸಲಾದ ಎಸ್‌ಐಟಿಯ ಪಾತ್ರವನ್ನೂ ತನಿಖೆ ಮಾಡಲು ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಸಂತ್ರಸ್ತೆಯನ್ನು ಪ್ರತಿನಿಧಿಸುವ ವಕೀಲ ತಬ್ಬಸುಮ್ ರಸೂಲ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....