Homeಮುಖಪುಟ25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕು ಎಂದು 25 ವರ್ಷಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ ಜಮೀಲಾ ಬೇಗಂ

- Advertisement -
- Advertisement -

ಶ್ರೀನಗರ: 25 ವರ್ಷಗಳ ಹಿಂದೆ ಘಟಿಸಿದ ಲಾಕಪ್‌ ಡೆತ್‌ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಖಾನ್ಯಾರ್‌ನ ಮಿಸ್ಕಿನ್ ಬಾಗ್‌ನ ಜಮೀಲಾ ಬೇಗಂ ಅವರು ತನ್ನ ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕೆಂದು ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ.

“ನನ್ನ ಪತಿಯ ದೇಹವನ್ನು ನಮಗೆ ಅಂತ್ಯಸಂಸ್ಕಾರಕ್ಕೆ ಹಸ್ತಾಂತರಿಸಿದ ಬಳಿಕ, ನನ್ನ ಚಿಕ್ಕ ಮಕ್ಕಳು ತಂದೆಯ ಶವವನ್ನು ನೋಡಿದರು. ಘುಸುಲ್ (ಅಂತ್ಯ ಸಂಸ್ಕಾರದ ಮೊದಲು ಶವವನ್ನು ತೊಳೆಯುವ ಇಸ್ಲಾಮಿಕ್ ಆಚರಣೆ) ನಡೆಸಿದಾಗ, ನನ್ನ ಪತಿಗೆ ನ್ಯಾಯ ಸಿಗುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ ಎಂದು ಅವರ ದೇಹದ ಮುಂದೆ ಪ್ರತಿಜ್ಞೆ ಮಾಡಿದ್ದೇನೆ” ಎನ್ನುತ್ತಾರೆ ಜಮೀಲಾ.

1996ರ ಮೇ 31ರಿಂದ ಜೂನ್ 1ರ ಅವಧಿಯಲ್ಲಿ ಜಮೀಲಾ ಅವರ ಪತಿ ಮುಹಮ್ಮದ್ ರಂಜಾನ್ ಅವರನ್ನು ಪೊಲೀಸರು ಕೊಂದರು ಎಂದು ಆರೋಪಿಸಲಾಗಿದೆ. ರಂಜಾನ್‌‌ ಅವರನ್ನು ಉಗ್ರಗಾಮಿ ಎಂದು ಆರೋಪಿಸಲಾಗಿದೆ. ಮಿಸ್ಕಿನ್ ಬಾಗ್‌ನ ಅಡಗುತಾಣದಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ರಂಜಾನ್ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.

ತಮ್ಮ ಪ್ರೀತಿಪಾತ್ರರು ಕೊಲ್ಲಲ್ಪಟ್ಟಾಗ ಹೆಚ್ಚಿನ ಕಾಶ್ಮೀರಿಗಳು ಪ್ರತೀಕಾರದ ಭಯದಿಂದ ಮೌನವಾಗಿರುತ್ತಾರೆ. ಆದರೆ ಜಮೀಲಾ ಮತ್ತೆ ಹೋರಾಡಲು ನಿರ್ಧರಿಸಿದರು ಎಂದು ದಿ ವೈರ್‌ ವರದಿ ಮಾಡಿದೆ.

“ನನ್ನ ಪತಿಗೆ ನ್ಯಾಯ ದೊರಕಿಸಿಕೊಡಲು ಎಲ್ಲ ಬಾಗಿಲುಗಳನ್ನು ತಟ್ಟಿದೆ. ಫಾರೂಕ್ ಅಬ್ದುಲ್ಲಾ, ಮುಫ್ತಿ ಮುಹಮ್ಮದ್ ಸಯೀದ್ ಮತ್ತು ಅಲಿ ಮುಹಮ್ಮದ್ ಸಾಗರ್ ಅವರಂತಹ ರಾಜಕಾರಣಿಗಳನ್ನು ನಾನು ಭೇಟಿ ಮಾಡಿದ್ದೇನೆ. ಪ್ರಕರಣದ ತನಿಖೆಗೆ, ನನ್ನ ಪತಿ ಹತ್ಯೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ವಿಧಿಸಬೇಕೆಂದು ಹಲವಾರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ. ಆದರೆ ಅವರು ಯಾವುದೇ ಕ್ರಮ ಜರುಗಿಸಲಿಲ್ಲ” ಎನ್ನುತ್ತಾರೆ ಜಮೀಲಾ ಬೇಗಂ.

ಜಮೀಲಾ ಬೇಗಂ (PC: The Wire)

ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

2006ರಲ್ಲಿ ಪ್ರಕರಣ ರೀ ಓಪನ್‌ ಆಯಿತು. ಆದರೆ ಪೊಲೀಸರು ರಚಿಸಿದ್ದ ವಿಶೇಷ ತನಿಖಾ ತಂಡ (SIT) ಪ್ರಕರಣವನ್ನು ತನಿಖೆ ಮಾಡಲು ಏನನ್ನೂ ಮಾಡಲಿಲ್ಲ. ಜಮೀಲಾ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗದ ಕದ ತಟ್ಟಿದರು. ಮಾನವ ಹಕ್ಕುಗಳ ಆಯೋಗದ ಶಿಫಾರಸುಗಳನ್ನು ಆಗಿನ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಜಾರಿಗೊಳಿಸಲಿಲ್ಲ.

ಆದರೆ ಜಮೀಲಾ ಛಲವನ್ನು ಬಿಟ್ಟುಕೊಡಲಿಲ್ಲ. ಈಗ ಅಕ್ಟೋಬರ್ 28, 2021ರಂದು, ಕಾಶ್ಮೀರ ಕಣಿವೆಯ ನ್ಯಾಯಾಲಯವು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗೆ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಕೋರ್ಟ್‌ ಸೂಚಿಸಿದೆ.

“ಜವಾಬ್ದಾರಿಯುತ ದೃಷಿಯಲ್ಲಿ ಪ್ರಕರಣವನ್ನು ತನಿಖಾ ಏಜೆನ್ಸಿ ನೋಡದಿರುವುದು ದುರಾದೃಷ್ಟಕರ” ಎಂದು ಕೋರ್ಟ್ ವಿಷಾದಿಸಿದೆ.

ಸಿಐಡಿ ಮಾಡಿದ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪರಿಶೀಲನೆ ವರದಿಗಳು ಪೊಲೀಸರ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ. ಮೃತದೇಹದಲ್ಲಿ ಚಿತ್ರಹಿಂಸೆಯ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತದೆ. ಸಿಐಡಿ ವರದಿಯು ವಿಧ್ವಂಸಕ ಚಟುವಟಿಕೆಗಳಲ್ಲಿ ವ್ಯಕ್ತಿಯು ಭಾಗಿಯಾಗಿಲ್ಲ ಎಂದು ಹೇಳುತ್ತದೆ.

ಶ್ರೀನಗರದ ಎರಡನೇ ಹೆಚ್ಚುವರಿ ಮುನ್ಸಿಫ್ ನ್ಯಾಯಾಲಯವು ತನ್ನ ಆದೇಶದಲ್ಲಿ, “ಪ್ರಕರಣದ ತನಿಖೆಗಾಗಿ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕರಿಗೆ (ಎಸ್‌ಎಸ್‌ಪಿ) ನಿರ್ದೇಶಿಸಿದೆ.

ರಂಜಾನ್ ಸಾವಿನ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೈನಾವರಿ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಮತ್ತು ಠಾಣಾಧಿಕಾರಿ ಮತ್ತು ಇತರ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಎಸ್‌ಎಸ್‌ಪಿಗೆ ನಿರ್ದೇಶನ ನೀಡಿದೆ.

2006ರಲ್ಲಿ ಪ್ರಕರಣ ರೀ ಓಪನ್‌ ಆದ ನಂತರ ಪ್ರಕರಣದ ತನಿಖೆಗಾಗಿ ರಚಿಸಲಾದ ಎಸ್‌ಐಟಿಯ ಪಾತ್ರವನ್ನೂ ತನಿಖೆ ಮಾಡಲು ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಸಂತ್ರಸ್ತೆಯನ್ನು ಪ್ರತಿನಿಧಿಸುವ ವಕೀಲ ತಬ್ಬಸುಮ್ ರಸೂಲ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...